ಕೇರಳ ಸೇರಿ ನೈರುತ್ಯ ರಾಜ್ಯಗಳಿಗೆ ಎಂಟ್ರಿ ಕೊಟ್ಟ ಮುಂಗಾರು: ಅಸ್ಸಾಂನಲ್ಲಿ ಚಂಡಮಾರುತಕ್ಕೆ ಇಬ್ಬರು ಬಲಿ!
ದೇಶಕ್ಕೆ ಈ ವರ್ಷದ ಮುಂಗಾರು ಮಳೆ ಗುರುವಾರ ಕಾಲಿಟ್ಟಿದೆ. ನಿರೀಕ್ಷೆಗಿಂತ ಒಂದು ದಿನ ಮೊದಲೇ ಕೇರಳಕ್ಕೆ ಹಾಗೂ ಈಶಾನ್ಯ ರಾಜ್ಯಗಳಿಗೆ ಏಕಕಾಲಕ್ಕೆ ನೈಋತ್ಯ ಮುಂಗಾರು ಮಾರುತಗಳು ಪ್ರವೇಶಿಸಿವೆ.
ದೇಶದ ಕೃಷಿ ಚಟುವಟಿಕೆ ಮತ್ತು ಆರ್ಥಿಕತೆಯ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಭಾತರದ ನೈರುತ್ಯ ಭಾಗದಲ್ಲಿ ಕೇರಳವನ್ನು ಗುರುವಾರ ಪ್ರವೇಶಿಸಿದ್ದು, ಅಪರೂಪದ ವಿದ್ಯಾಮಾನದಲ್ಲಿ ರೆಮಲ್ ಚಂಡಮಾರುತದ ಪ್ರಭಾವದಿಂದಾಗಿ ಈಶಾನ್ಯ ಭಾಗದಲ್ಲೂ ಗುರುವಾರದಂದೇ ಪ್ರವೇಶ ಮಾಡಿದೆ. ಬಳಿಕ ಮುಂದಿನ 5-10 ದಿನಗಳಲ್ಲಿ ದೇಶಾದ್ಯಂತ ವ್ಯಾಪಿಸುವ ನಿರೀಕ್ಷೆಯಿದೆ.

ಮುಂಗಾರು ಕೇರಳ ಭಾಗದಲ್ಲಿ ಸಾಮಾನ್ಯವಾಗಿ ಜೂನ್ 1ರಂದು ಪ್ರವೇಶ ಮಾಡುತ್ತಿದ್ದುದು ಈ ಬಾರಿ ಒಮದು ದಿನ ಮೊದಲೇ ಪ್ರವೇಶಿಸುವುದಾಗಿ ಭಾರತೀಯ ಹವಾಮಾನ ಇಲಾಖೆ ಸುಳಿವು ನಿಡಿತ್ತು. ಆದರೆ ಅದಕ್ಕೂ ಒಂದು ದಿನ ಮುಂಚಿತವಾಗಿ ಮುಂಗಾರು ಭಾರತವನ್ನು ಪ್ರವೇಶಿಸಿದ್ದು, ರೈತರ ಮುಖದಲ್ಲಿ ಮಂದಹಾಸ ಮುಡಿಸಿದೆ.
ನೈರುತ್ಯ ಮಾನ್ಸೂನ್ ಭಾರತಕ್ಕೆ ಪ್ರಮುಖ ಮಳೆಯನ್ನು ತರುವ ಕಾಲ. ಇದು ದೇಶದ ವಾರ್ಷಿಕ ಮಳೆಯ ಬಹುಪಾಲನ್ನು ಒದಗಿಸುತ್ತದೆ. ಈ ಅವಧಿಯಲ್ಲಿ ಖಾರೀಫ್ ಬೆಳೆಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ಜೂನ್ ಮತ್ತು ಜುಲೈ ತಿಂಗಳ ಅವಧಿಯ ನೈರುತ್ಯ ಮಾನ್ಸೂನ್ ಅತಿ ಮಹತ್ವದ್ದು ಅಂತಲೇ ಪರಿಗಣಿಸಲಾಗುತ್ತದೆ. ನೈರಯತ್ಯದಿಂದ ಬೀಸುವ ಮಾನ್ಸೂನ್ ಸಾಮಾನ್ಯವಾಗಿ ಜೂನ್ನಲ್ಲಿ ಆರಂಭವಾಗಿ ಸೆಪ್ಟೆಂಬರ್ಗೆ ಕೊನೆಗೊಳ್ಳುತ್ತದೆ.

ಅಸ್ಸಾಂನಲ್ಲಿ 2 ಮಂದಿ ಸಾವು
ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ಗುರುವಾರ ಇಬ್ಬರು ಸಾವನ್ನಪ್ಪಿದ್ದು, ರೆಮಲ್ ಚಂಡಮಾರುತದಿಂದಾಗಿ ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಸಾವಿನ ಸಂಖ್ಯೆ 8ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್ಡಿಎಂಎ) ಪ್ರಕಾರ, ಒಂಬತ್ತು ಜಿಲ್ಲೆಗಳಲ್ಲಿ 1,98,856 ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ. ಹೈಲಕಂಡಿ, ಹೊಜೈ, ಗೋಲಾಘಾಟ್, ನಾಗಾಂವ್, ಕರೀಮ್ಗಂಜ್, ಕ್ಯಾಚಾರ್, ಕರ್ಬಿ ಆಂಗ್ಲಾಂಗ್ ವೆಸ್ಟ್, ಕರ್ಬಿ ಆಂಗ್ಲಾಂಗ್, ದಿಮಾ-ಹಸಾವೊ ಜಿಲ್ಲೆಗಳು ಹಾನಿಗೊಳಗಾಗಿವೆ.
ಕರ್ನಾಟಕಕ್ಕೆ ಮುಂಗಾರು
ಕೇರಳದಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು ಭಾರೀ ಮಳೆಯಾಗ್ತಿದೆ. ಹೀಗಾಗಿ ಜೂನ್ 2ರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಜೂನ್ 2ರಿಂದ ಕರಾವಳಿ ಹಾಗೂ ದಕ್ಷಿಣ ಭಾಗದಲ್ಲಿ ಮುಂಗಾರು ಆರಂಭವಾಗಲಿದೆ. ಸದ್ಯ ಪೂರ್ವ ಮುಂಗಾರು ಮಳೆ ಇಳಿಕೆಯಾಗಿದ್ದು ಇದು ಮುಂಗಾರು ಪ್ರವೇಶಕ್ಕೆ ಮುನ್ಸೂಚನೆಯಾಗಿದೆ.
ಈ ಬಾರಿ ಬೆಂಗಳೂರು ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಕಟ್ಟೆಚ್ಚರ ಅಗತ್ಯವಿದೆ. ಬಿಬಿಎಂಪಿಗೆ ಮುನ್ನಚ್ಚರಿಕೆ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ ಸೂಚನೆ ನೀಡಿದ್ದಾರೆ. ಜೂನ್ 2ರಿಂದ ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದೆ. ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ನಗರದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಒಣ ಮರಗಳು, ಶಿಥಿಲ ಕಟ್ಟಡಗಳ ಬಗ್ಗೆ ನಿಗಾವಹಿಸಲು ಹವಾಮಾನ ತಜ್ಞರ ಮುನ್ಸೂಚನೆ ನೀಡಿದ್ದಾರೆ. ಏಕಂದ್ರೆ ಭಾರೀ ಮಳೆಯಾಗಲಿದೆ.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications