Monsoon Updates: ಕೊನೆಯ ಹಂತದಲ್ಲಿ ಮಾನ್ಸೂನ್- ಕರ್ನಾಟಕ ಸೇರಿ ಇತರ ರಾಜ್ಯಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ
ನವದೆಹಲಿ, ಅಕ್ಟೋಬರ್ 03: ಭಾರತದಲ್ಲಿ ಮಾನ್ಸೂನ್ ತನ್ನ ಕೊನೆಯ ಹಂತದಲ್ಲಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾ ಜಲನಯನ ಪ್ರದೇಶದ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್ ಮತ್ತು ಬಿಹಾರದ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಒಡಿಶಾ ಮತ್ತು ಬಿಹಾರದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪೂರ್ವ ಮಧ್ಯಪ್ರದೇಶ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ವಿದರ್ಭ, ಛತ್ತೀಸ್ಗಢ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮಿಂಚಿನ ಸಾಧ್ಯತೆಯೊಂದಿಗೆ ಚದುರಿದ ತುಂತುರು ಮಳೆಯಾಗುವ ನಿರೀಕ್ಷೆಯಿದೆ.

ಕೇರಳದಲ್ಲಿ ಯೆಲ್ಲೋ ಅಲರ್ಟ್
ಕೇರಳದ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿರುವನಂತಪುರಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ಕೊಲ್ಲಂ, ಪತ್ತನಂತಿಟ್ಟ ಮತ್ತು ಆಲಪ್ಪುಳದಂತಹ ದಕ್ಷಿಣದ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಕೇರಳದ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಸೋಮವಾರ ಎರ್ನಾಕುಲಂ ಜಿಲ್ಲೆಯ ಇಡಮಲಯಾರ್ ಅಣೆಕಟ್ಟು ಮತ್ತು ಮಲಪ್ಪುರಂ ಜಿಲ್ಲೆಯ ವಕ್ಕಡ್ನಲ್ಲಿ 9 ಸೆಂ ಮೀ ಮಳೆಯಾಗಿದೆ. ಕಣ್ಣೂರು ಜಿಲ್ಲೆಯ ಚೆಂಬೇರಿ (8 ಸೆಂ.ಮೀ), ತಿರುವನಂತಪುರಂ ಮತ್ತು ಪತ್ತನಂತಿಟ್ಟ ಜಿಲ್ಲೆಯ ಲಾಹಾದಲ್ಲಿಯೂ ಸಹ (ತಲಾ 7 ಸೆಂ.ಮೀ) ಮಳೆ ದಾಖಲಾಗಿದೆ.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಚೆರ್ತಾಲ, ಚೆಂಗನ್ನೂರು, ಕೊಟ್ಟಾಯಂ, ವೈಕಂ ಮತ್ತು ಚಂಗನಾಶ್ಶೇರಿ ತಾಲ್ಲೂಕುಗಳಲ್ಲಿ ಶಾಲೆಗಳಲ್ಲಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿರುವುದರಿಂದ ರಜೆ ಘೋಷಿಸಲಾಗಿದೆ. ಈ ತಾಲ್ಲೂಕುಗಳಲ್ಲಿ ಸುಮಾರು 246 ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಕೇರಳದ ವಿವಿಧ ನದಿಗಳ ಸುತ್ತಮುತ್ತಲೂ ವಾಸಿಸುವ ಜನರಿಗೆ ಕೇಂದ್ರ ಜಲ ಆಯೋಗ ಎಚ್ಚರಿಕೆ ನೀಡಿದೆ. ಅರುವಿಪ್ಪುರಂ ಜಲಾಶಯದಲ್ಲಿ ದಾಖಲಾದ ನೀರಿನ ಮಟ್ಟವು ಹೆಚ್ಚುತ್ತಿರುವ ಕಾರಣ ತಿರುವನಂತಪುರಂನ ನೆಯ್ಯರ್ ನದಿಯ ಸುತ್ತಲೂ ಆರೆಂಜ್ ಅಲರ್ಟ್ ನೀಡಲಾಗಿದೆ. ತಿರುವನಂತಪುರದ ಕರಮಾನ ನದಿ, ಅಚನ್ಕೋವಿಲ್ ನದಿ ಮತ್ತು ಪತ್ತನಂತಿಟ್ಟದ ಮಣಿಮಲಾ ನದಿಯ ಜಲಾನಯನ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications