ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೇಗಿರಲಿದೆ ಈ ಬಾರಿಯ ಮುಂಗಾರು? ಹವಾಮಾನ ಇಲಾಖೆ ಮಾಹಿತಿ

|
Google Oneindia Kannada News

ನವದೆಹಲಿ, ಜೂನ್ 1: ಮುಂಗಾರು ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಭಾರತೀಯ ಹವಾಮಾನ ಇಲಾಖೆ ಈ ಬಾರಿ ಮುಂಗಾರುಮಳೆ ಯಾವ ಪ್ರಮಾಣದಲ್ಲಿ ಇರಲಿದೆ ಎಂಬ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡಿದ್ದು ಈ ವರ್ಷದ ನೈಋತ್ಯ ಮುಂಗಾರಿನ ಎರಡನೇ ದೀರ್ಘ ಮುನ್ಸೂಚನೆಯನ್ನು ಬಿಡುಗಡೆಗೊಳಿಸಿದೆ.

ನೈಋತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿಯಲ್ಲಿ ಇರಲಿದ್ದು ಕೇಂದ್ರ ಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ. ಆದರೆ ಭಾರತ ಪೂರ್ವ ಭಾಗದಲ್ಲಿ ಮತ್ತು ಈಶಾನ್ಯ ಭಾರತದಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಟ್ಟದಲ್ಲಿ ಇರಲಿದೆ ಎಂದು ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಮೃತ್ಯುಂಜಯ ಮೋಹಪತ್ರ ಒಟ್ಟಾರೆಯಾಗಿ ಭಾರತದಲ್ಲಿ ಈ ಬಾರಿ ಮನ್ಸೂನ್ ಸಾಮಾನ್ಯವಾಗಿರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಜೂನ್ 3ರವರೆಗೆ ರಾಜ್ಯದಲ್ಲಿ ಭಾರಿ ಮಳೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಜೂನ್ 3ರವರೆಗೆ ರಾಜ್ಯದಲ್ಲಿ ಭಾರಿ ಮಳೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ನೈಋತ್ಯ ಮುಂಗಾರಿನ ಕಾಲಾವಧಿಯಲ್ಲಿ(ಜೂನ್‌ನಿಂದ-ಸೆಪ್ಟೆಂಬರ್) ದೇಶಾದ್ಯಂತ ಮಳೆಯ ಪ್ರಮಾಣ ಸಾಮಾನ್ಯ ಪ್ರಮಾಣದಲ್ಲಿ ಇರಲಿದೆ. 96-104 ಶೇಕಡಾ ಪ್ರಮಾಣದ ಮಳೆಯಾಗಬಹುದು. ದೀರ್ಘಾವಧಿಯ ಸರಾಸರಿಯಲ್ಲಿ ಮಳೆಯ ಪ್ರಮಾಣ ನೈಋತ್ಯ ಮುಂಗಾರಿನಲ್ಲಿ 101 ಶೇಕಡಾದಷ್ಟು ಬೀಳುವ ಸಾಧ್ಯತೆಯಿದೆ ಎಂದು ಮೃತ್ಯುಂಜಯ ಮೋಹಪತ್ರ ಮಾಹಿತಿ ನೀಡಿದ್ದಾರೆ.

Monsoon likely to be above-normal in Central India and normal in north, south india: IMD

Recommended Video

RCB ಬೌಲರ್‌ ಹೀಗೆ ಟ್ರೊಲ್ ಆಗಿದ್ದೇಕೆ | Oneindia Kannada

ಇನ್ನು ಈ ಬಾರಿ ನೈಋತ್ಯ ಮುಂಗಾರು ಮೂರು ದಿನಗಳು ತಡವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಲಿದೆ. ಜೂನ್ 3ರಂದು ಕೇರಳ ಕರಾವಳಿಗೆ ಮಾನ್ಸೂನ್ ಅಪ್ಪಳಿಸುವ ಸಾಧ್ಯತೆಯಿದ್ದು ರಾಜ್ಯಕ್ಕೆ ಜೂನ್ 5 ರಂದು ಮುಂಗಾರು ಆಗಮಸುವ ಮುನ್ಸೂಚನೆಯಿದೆ. ಹೀಗಾಗಿ ರಾಜ್ಯದಲ್ಲಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.

English summary
Monsoon likely to be above-normal in Central India and normal in north and south india said IMD. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X