5 ದಿನದಲ್ಲಿ ಕೇರಳಕ್ಕೆ ನೈಋತ್ಯ ಮಾನ್ಸೂನ್: ಕರ್ನಾಟಕಕ್ಕೂ ಮಳೆ ಭರ್ಜರಿ ಗುಡ್ನ್ಯೂಸ್! Monsoon Rain in Karnataka
Monsoon Rain in Karnataka: ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರ ನಡುವೆ ನೈಋತ್ಯ ಮಾನ್ಸೂನ್ಗೆ ಸಂಬಂಧಿಸಿದಂತೆ ಭಾರತೀಯ ಹವಾಮಾನ ಇಲಾಖೆಯು ಭರ್ಜರಿ ಗುಡ್ನ್ಯೂಸ್ ನೀಡಿದೆ. ಅವಧಿಗೂ ಮುಂಚೆ ಈ ಬಾರಿ ರಾಜ್ಯಕ್ಕೆ ಮಾನ್ಸೂನ್ ಪ್ರವೇಶ ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಕರ್ನಾಟಕದ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯುತ್ತಿರುವ ಸಂದರ್ಭದಲ್ಲೇ ಐಎಂಡಿ ಗುಡ್ನ್ಯೂಸ್ ನೀಡಿದೆ. ಕರ್ನಾಟಕಕ್ಕೆ ಯಾವಾಗ ಮಾನ್ಸೂನ್ ಪ್ರವೇಶಿಸಲಿದೆ ಹಾಗೂ ದೇಶದ ಯಾವೆಲ್ಲಾ ಭಾಗದಲ್ಲಿ ಮಳೆಯಾಗುತ್ತಿದೆ ಎನ್ನುವ ವಿವರ ನೋಡೋಣ.
ಕರ್ನಾಟಕಕ್ಕೆ ಈ ಬಾರಿ ಮಾನ್ಸೂನ್ ಅವಧಿ ಪೂರ್ವ ಎಂಟ್ರಿ ಕೊಡಲಿದೆ ಎಂದು ಐಎಂಡಿ ರಿಪೋರ್ಟ್ ಉಲ್ಲೇಖಿಸಿದೆ. ಕರ್ನಾಟಕ ಹಾಗೂ ದಕ್ಷಿಣ ಭಾರತದ ವಿವಿಧ ರಾಜ್ಯಗಳಿಗೆ ನೈಋತ್ಯ ಮಾನ್ಸೂನ್ ಮೊದಲು ಕೇರಳಕ್ಕೆ ಪ್ರವೇಶ ಕೊಟ್ಟ ನಂತರ ಬರುತ್ತದೆ. ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಅಥವಾ ಎರಡನೇ ವಾರದಲ್ಲಿ ನೈಋತ್ಯ ಮಾನ್ಸೂನ್ ಕೇರಳಕ್ಕೆ ಬರುವುದು ವಾಡಿಕೆ. ಕೇರಳಕ್ಕೆ ಬಂದ 7ರಿಂದ 10 ದಿನಗಳಲ್ಲಿ ನೈಋತ್ಯ ಕರ್ನಾಟಕಕ್ಕೆ ಪ್ರವೇಶಿಸುತ್ತದೆ. ಆದರೆ, ಈ ಬಾರಿ ಅವಧಿ ಪೂರ್ವ ಪ್ರವೇಶಿಸಲಿದೆ ಎಂದು ಹೇಳಲಾಗಿದೆ.

ಭಾರತ ಹವಾಮಾನ ಇಲಾಖೆ (IMD)ಯ ಪ್ರಕಾರ, ಕೇರಳಕ್ಕೆ ನೈಋತ್ಯ ಮಾನ್ಸೂನ್ ಅವಧಿ ಪೂರ್ವ ಬರಲಿದೆ. ಮೇ 27ರ ವೇಳೆಗೆ ನೈರುತ್ಯ ಮಾನ್ಸೂನ್ ಪ್ರವೇಶಿಸಲಿದೆ ಎಂದು ಹೇಳಲಾಗಿದೆ. ಇನ್ನು 2009ರಲ್ಲಿ ಮೇ 23ಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸಿತ್ತು. ಇದಾದ ನಂತರ ಅವಧಿ ಪೂರ್ವ ಮಾನ್ಸೂನ್ ಪ್ರವೇಶ ವಿರಳವಾಗಿತ್ತು. ಜೂನ್ ನಿಂದ ಸೆಪ್ಟೆಂಬರ್ ವರೆಗಿನ ಮಾನ್ಸೂನ್ ಮಳೆ ಇರಲಿದೆ. ಈ ಬಾರಿ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಸಾಮಾನ್ಯ ಮಳೆಗಿಂತ ಹೆಚ್ಚಿನ ಮಳೆ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
ಈಗಾಗಲೇ ಮುಂಗಾರು ಪೂರ್ವ ಮಳೆಗೆ ರಾಜ್ಯದಲ್ಲಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹೇಗಿರಲಿದೆ ಎನ್ನುವ ಸಣ್ಣ ಆತಂಕವೂ ಸಹ ಐಎಂಡಿ ರಿಪೋರ್ಟ್ನಿಂದ ಎದುರಾಗಿದೆ. ಈ ಬಾರಿ ಅವಧಿ ಪೂರ್ವ ಮಾನ್ಸೂನ್ ಮಾತ್ರವಲ್ಲ ಸರಾಸರಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಐಎಂಡಿ ಅಂದಾಜಿಸಿದೆ.

ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ!
ಇನ್ನು ಮಂಗಳವಾರದಿಂದ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ತಮಿಳುನಾಡು, ಕೇರಳ ಮತ್ತು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗದಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದೆ. ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಮಧ್ಯ ಭಾರತದ ಭಾಗದಲ್ಲೂ ಮಳೆ ಮುಂದುವರಿದಿದೆ.
ಮುಂಬೈನಲ್ಲೂ ಧಾರಾಕಾರ ಮಳೆ ಮುಂದುವರಿದಿದೆ. ಮುಂಬೈ, ಥಾಣೆ, ರಾಯಗಢ ಸೇರಿದಂತೆ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು. ನಾಳೆಯೂ ಈ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಉಳಿದಂತೆ ದೇಶದ ವಿವಿಧ ಭಾಗದಲ್ಲಿ ಮಳೆ ಆಗುತ್ತಿದೆ.
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications