ಪ್ರವಾಹ ಬಂದಿದ್ದು ನಿಜ, ಆದರೂ ಈ ಬಾರಿ ಮಳೆ ಕೊರತೆ!
Recommended Video

ನವದೆಹಲಿ, ಅಕ್ಟೋಬರ್ 01: ಪ್ರಸಕ್ತ ಮುಂಗಾರು ಋತು ಸೆ.30 ರವಿವಾರದಂದು ಅಂತ್ಯಗೊಂಡಿದ್ದು, ಈ ಬಾರಿ ದೇಶವು ಶೇ.9.4 ರಷ್ಟು ಮಳೆ ಕೊರತೆ ಅನುಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕೇರಳ ಮತ್ತು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತೀವ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ನಿಜವಾದರೂ, ದೇಶದ ಎಷ್ಟೋ ರಾಜ್ಯಗಳು ಮಳೆ ಕೊರತೆ ಅನುಭವಿಸಿವೆ.
ಪ್ರತಿ ಬಾರಿಯೂ ಹವಾಮಾನ ಇಲಾಖೆಯ ಲೆಕ್ಕಾಚಾರ ತಪ್ಪಾಗುತ್ತಿರಲಿಲ್ಲ. ಅದು ಮುನ್ಸೂಚನೆ ನೀಡಿದಷ್ಟೇ ಮಳೆಯಾಗುತ್ತಿತ್ತು. ಆದರೆ ಈ ಬಾರಿ ಹವಾಮಾನ ಇಲಾಖೆಯ ಮುನ್ಸೂಚನೆ ತಲೆಕೆಳಗಾಗಿದೆ. ಹವಾಮಾನ ಇಲಾಖೆಯ ಅಂದಾಜು ಗುರಿ ತಲುಪುವುದಕ್ಕೆ ಇನ್ನೂ ಶೇ.6 ರಷ್ಟಾದರೂ ಹೆಚ್ಚು ಮಳೆಯಾಗಬೇಕಿತ್ತು.

ಆಗಸ್ಟ್ ತಿಂಗಳಿನಲ್ಲಿ ಉತ್ತಮ ಮಳೆ ಕಂಡುಬಂದರೂ, ಸೆಪ್ಟೆಂಬರ್ ತಿಂಗಳಿನಲ್ಲಿ ನಿರೀಕ್ಷಿಸಿದಷ್ಟು ಮಳೆಯಾಗದೆ, ಏಕಾಏಕಿ ಮಳೆ ಕೊರತೆ ಕಂಡುಬಂದಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ.
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಶೇ.95 ರಷ್ಟು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿತ್ತು. ಆದರೆ ಮಳೆಯಾಗಿದ್ದು ಮಾತ್ರ ಶೇ.87 ರಷ್ಟು!
ಆಗಸ್ಟ್ ನಲ್ಲಿ ಶೇ.88 ರಷ್ಟು ಮಳೆಯಾಗಲಿದ್ದು, ಸೆಪ್ಟೆಂಬರ್ ನಲ್ಲಿ ಶೇ.93ರಷ್ಟು ಮಳೆಯಾಗಲಿದೆ ಎಂದು ಸ್ಕೈಮೆಟ್ ವೆದರ್ ಹೇಳಿತ್ತು. ಆದರೆ ಅದು ಉಲ್ಟಾ ಹೊಡೆದು, ಆಗಸ್ಟ್ ನಲ್ಲೇ ಹೆಚ್ಚು ಮಳೆಯಾಗಿದ್ದು, ಸೆಪ್ಟೆಂಬರ್ ನಲ್ಲಿ ಕಡಿಮೆ ಮಳೆಯಾಗಿದೆ.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications