ರಾಹುಲ್ ಕಣ್ಣೇಟಿನ ವರ್ತನೆಗೆ ಸುಮಿತ್ರಾ ಮಹಾಜನ್ ತರಾಟೆ
ನವದೆಹಲಿ, ಜುಲೈ 20: ಲೋಕಸಭೆಯಲ್ಲಿ ತಮ್ಮ ಭಾಷಣದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಂಡು ನಂತರ ಕಣ್ಣುಮಿಟುಕಿಸಿದ ರಾಹುಲ್ ಗಾಂಧಿ ಅವರ ವರ್ತನೆ ಅನುಚಿತವಾದುದು ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಹೇಳಿದರು.
'ಪ್ರಧಾನಿ ಸ್ಥಾನವು ಗೌರವಯುತವಾದುದ್ದಾಗಿದ್ದು, ಮೋದಿ ಅವರು ಆ ಸ್ಥಾನದಲ್ಲಿದ್ದಾರೆ. ಕಣ್ಣು ಮಿಟುಕಿಸುವುದು ಸಂಸತ್ನ ಗೌರವಕ್ಕೆ ತಕ್ಕುದಲ್ಲ.
ರಾಹುಲ್ ನನ್ನ ಶತ್ರುವಲ್ಲ. ಅವರು ನನ್ನ ಮಗನಂತೆ. ತಾಯಿಯ ಕೆಲಸ ತಪ್ಪನ್ನು ತಿದ್ದುವುದು. ಅಪ್ಪುಗೆಯನ್ನು ನಾನ್ಯಾಕೆ ವಿರೋಧಿಸಲಿ? ಆದರೆ ಅಪ್ಪಿಕೊಂಡ ಬಳಿಕ ಕಣ್ಣು ಮಿಟುಕಿಸಿದ್ದು ಸರಿಯಾದ ನಡವಳಿಕೆಯಲ್ಲ' ಎಂದು ಸುಮಿತ್ರಾ ಮಹಾಜನ್ ಹೇಳಿದರು.

ಸದಸ್ಯರು ಸದನದ ಶಿಷ್ಟಾಚಾರವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
'ಸಂಸತ್ನ ಗೌರವವನ್ನು ಕಾಪಾಡಬೇಕಾದವರು ನಾವು ಎಂಬುದನ್ನು ದಯವಿಟ್ಟು ಅರ್ಥಮಾಡಿಕೊಳ್ಳಿ. ಬೇರೆ ಯಾರೂ ಹೊರಗಿನಿಂದ ಬಂದು ಅದನ್ನು ಮಾಡುವುದಿಲ್ಲ.
ಸಂಸತ್ನ ಸದಸ್ಯರಾಗಿ ಅದರ ಶಿಷ್ಟಾಚಾರಗಳನ್ನು ನಾವು ಕಾಪಾಡಿಕೊಳ್ಳಬೇಕು. ನೀವೆಲ್ಲರೂ (ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷ) ಪ್ರೀತಿ ಮತ್ತು ಸ್ನೇಹದಿಂದ ಬದುಕಬೇಕು ಎಂದು ನಾನು ಬಯಸುತ್ತೇನೆ' ಎಂದರು.
ಅವಿಶ್ವಾಸ ನಿರ್ಣಯ ಮಂಡನೆ ಚರ್ಚೆ ವೇಳೆ ತಮ್ಮ ಭಾಷಣ ಮುಗಿದ ಬಳಿಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ತೆರಳಿ ಅಪ್ಪಿಕೊಂಡು, ಕೈಕುಲುಕಿದ್ದರು.
ತಮ್ಮ ಕುರ್ಚಿಯಲ್ಲಿ ಕುಳಿತುಕೊಂಡ ನಂತರ ತಮ್ಮ ಪಕ್ಷದ ಮುಖಂಡರ ಜತೆ ಕುಳಿತು ನಗುತ್ತಾ ಕಣ್ಣು ಮಿಟುಕಿಸಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications