ರಾಹುಲ್ ಕಣ್ಣೇಟಿನ ವರ್ತನೆಗೆ ಸುಮಿತ್ರಾ ಮಹಾಜನ್ ತರಾಟೆ
ನವದೆಹಲಿ, ಜುಲೈ 20: ಲೋಕಸಭೆಯಲ್ಲಿ ತಮ್ಮ ಭಾಷಣದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಂಡು ನಂತರ ಕಣ್ಣುಮಿಟುಕಿಸಿದ ರಾಹುಲ್ ಗಾಂಧಿ ಅವರ ವರ್ತನೆ ಅನುಚಿತವಾದುದು ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಹೇಳಿದರು.
'ಪ್ರಧಾನಿ ಸ್ಥಾನವು ಗೌರವಯುತವಾದುದ್ದಾಗಿದ್ದು, ಮೋದಿ ಅವರು ಆ ಸ್ಥಾನದಲ್ಲಿದ್ದಾರೆ. ಕಣ್ಣು ಮಿಟುಕಿಸುವುದು ಸಂಸತ್ನ ಗೌರವಕ್ಕೆ ತಕ್ಕುದಲ್ಲ.
ರಾಹುಲ್ ನನ್ನ ಶತ್ರುವಲ್ಲ. ಅವರು ನನ್ನ ಮಗನಂತೆ. ತಾಯಿಯ ಕೆಲಸ ತಪ್ಪನ್ನು ತಿದ್ದುವುದು. ಅಪ್ಪುಗೆಯನ್ನು ನಾನ್ಯಾಕೆ ವಿರೋಧಿಸಲಿ? ಆದರೆ ಅಪ್ಪಿಕೊಂಡ ಬಳಿಕ ಕಣ್ಣು ಮಿಟುಕಿಸಿದ್ದು ಸರಿಯಾದ ನಡವಳಿಕೆಯಲ್ಲ' ಎಂದು ಸುಮಿತ್ರಾ ಮಹಾಜನ್ ಹೇಳಿದರು.

ಸದಸ್ಯರು ಸದನದ ಶಿಷ್ಟಾಚಾರವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
'ಸಂಸತ್ನ ಗೌರವವನ್ನು ಕಾಪಾಡಬೇಕಾದವರು ನಾವು ಎಂಬುದನ್ನು ದಯವಿಟ್ಟು ಅರ್ಥಮಾಡಿಕೊಳ್ಳಿ. ಬೇರೆ ಯಾರೂ ಹೊರಗಿನಿಂದ ಬಂದು ಅದನ್ನು ಮಾಡುವುದಿಲ್ಲ.
ಸಂಸತ್ನ ಸದಸ್ಯರಾಗಿ ಅದರ ಶಿಷ್ಟಾಚಾರಗಳನ್ನು ನಾವು ಕಾಪಾಡಿಕೊಳ್ಳಬೇಕು. ನೀವೆಲ್ಲರೂ (ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷ) ಪ್ರೀತಿ ಮತ್ತು ಸ್ನೇಹದಿಂದ ಬದುಕಬೇಕು ಎಂದು ನಾನು ಬಯಸುತ್ತೇನೆ' ಎಂದರು.
ಅವಿಶ್ವಾಸ ನಿರ್ಣಯ ಮಂಡನೆ ಚರ್ಚೆ ವೇಳೆ ತಮ್ಮ ಭಾಷಣ ಮುಗಿದ ಬಳಿಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ತೆರಳಿ ಅಪ್ಪಿಕೊಂಡು, ಕೈಕುಲುಕಿದ್ದರು.
ತಮ್ಮ ಕುರ್ಚಿಯಲ್ಲಿ ಕುಳಿತುಕೊಂಡ ನಂತರ ತಮ್ಮ ಪಕ್ಷದ ಮುಖಂಡರ ಜತೆ ಕುಳಿತು ನಗುತ್ತಾ ಕಣ್ಣು ಮಿಟುಕಿಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications