ಕರ್ನಾಟಕ ಕರಾವಳಿಯಲ್ಲಿ ಇಂದೂ ಧಾರಾಕಾರ ಮಳೆ
Recommended Video
ಬೆಂಗಳೂರು, ಜೂನ್ 28: ಕರ್ನಾಟಕದ ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಇಂದು ಸಹ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ.
ಉಡುಪಿ ನಗರ, ಕುಂದಾಪುರ, ಕಾರ್ಕಳಗಳಲ್ಲಿ ನಿನ್ನೆ ಸಾಕಷ್ಟು ಮಳೆಯಾಗಿದೆ. ಇಂದು ಸಹ ರಾಜ್ಯದ ಇತರ ಕರಾವಳಿ ಪ್ರದೇಶಗಳಲ್ಲೂ ಮಳೆ ಬೀಳಲಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.
ಕರಾವಳಿಯಲ್ಲಿ ಬಿಡದ ಮಳೆ, ಬೆಂಗಳೂರಲ್ಲಿ ತುಂತುರು ಸಾಧ್ಯತೆ
ರಾಜಧಾನಿ ಬೆಂಗಳೂರಿನಲ್ಲಿ ಎಂದಿನಂತೆ ಮೋಡಕವಿದ ವಾತಾವರಣ ಕಂಡುಬರಲಿದ್ದದು, ಸಂಜೆ ಹೊತ್ತಿಗೆ ಅಲ್ಲಲ್ಲಿ ಕೊಂಚ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನಗಳಲ್ಲೂ ಮಳೆಯಾಗಲಿದೆ.
ನೈರುತ್ಯ ಮಾರುತಗಳು ಚುರುಕಾಗಿದ್ದು, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ, ಛತ್ತೀಸ್ ಗಢ, ಒಡಿಶಾ, ಬಿಹಾರ ಮತ್ತು ಜಾರ್ಖಂಡ್ , ಮಧ್ಯಪ್ರದೇಶ, ಉತ್ತರ ಪ್ರದೇಶದ ಕೆಲವೆಡೆ, ಉತ್ತರಾಖಂಡ್ ಮತ್ತು ಹಿಮಾಚಲಪ್ರದೇಶಗಳಲ್ಲಿ ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಕಾಶ್ಮೀರದ ಕೆಲವು ಭಾಗಗಳಲ್ಲೂ ಮಳೆಯಾಗಲಿದೆ.
ರಾಜಧಾನಿ ದೆಹಲಿಯಲ್ಲಿಯೂ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಅಮರನಾಥ ಯಾತ್ರೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.