ಕರಾವಳಿ ಮತ್ತು ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು, ಜೂನ್ 13: ನೈರುತ್ಯ ಮಾನ್ಸೂನ್ ಮಾರುತಗಳು ಒಡಿಶಾ, ಪಶ್ಚಿಮ ಬಂಗಾಳದ ಕೆಲವು ಭಾಗಗಳು, ಸಂಪೂರ್ಣ ಅರುಣಾಚಲ ಪ್ರದೇಶ, ಅಸ್ಸಾಂನ ಕೆಲವು ಪ್ರದೇಶಗಳು, ಮೇಘಾಲಯ ಮತ್ತು ಸಿಕ್ಕಿಂಗೆ ತಲುಪಿವೆ. ಮುಂದಿನ 24 ಗಂಟೆಗಳಲ್ಲಿ ಮಣಿಪುರ, ಮಿಜೋರಾಂ, ನಾಗಲ್ಯಾಂಡ್ ಮತ್ತು ತ್ರಿಪುರಾದ ಇನ್ನೂ ಹೆಚ್ಚಿನ ಭಾಗಗಳಿಗೆ ತಲುಪಲಿದೆ.
ನೈರುತ್ಯ ಮುಂಗಾರು ಮಾರುತಗಳು ಮುಂಬೈನ ಥಾಣೆ, ಅಹ್ಮದ್ ನಗರ, ಬುಲ್ಧಾನಾ, ಅಮ್ರೋಟಿ, ಗೋಂಡಿಯಾ, ಟಿಟ್ಲಾ ಗರ್, ಕಟಕ್, ಮಿಡ್ನಾಪುರ, ಗೋಲ್ ಪಾರಾ ಮತ್ತು ಬಗ್ಡೋಗ್ರಾ ಮೂಲಕ ಹಾದುಹೋಗಿವೆ. ಮುಂಗಾರು ಮಾರುತಗಳು ಮುಂದಿನ ಒಂದು ವಾರ ದುರ್ಬಲವಾಗಲಿದ್ದು, ಹೆಚ್ಚಿನ ಮಳೆ ಸುರಿಯಲಿಕ್ಕಿಲ್ಲ ಎಂದು ಅಂದಾಜಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಕರ್ನಾಟಕ, ಕೇರಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಭಾರೀ ಮಳೆಯಾಗಲಿದೆ. ಅರುಣಾಚಲ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ದಕ್ಷಿಣ ಕೊಂಕಣ್ ಮತ್ತು ಗೋವಾದಲ್ಲಿ ಸಾಧಾರಣ ಮಳೆಯಾಗಲಿದೆ.

ಬಿಹಾರ, ಜಾರ್ಖಂಡ್ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಗೋವಾ, ಕರ್ನಾಟಕ, ಕೇರಳ ಕರಾವಳಿಯಲ್ಲಿ ಸಮುದ್ರ ಇದೇ ಅವಧಿಯಲ್ಲಿ ಪ್ರಕ್ಷುಬ್ಧವಾಗಲಿದೆ. ತಮಿಳುನಾಡು ಕರಾವಳಿ, ಆಂಧ್ರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ ಕರಾವಳಿ, ಸೊಮಾಲಿಯಾ ಕರಾವಳಿ, ಓಮನ್ ಕರಾವಳಿಯಲ್ಲಿಯೂ ಸಮುದ್ರ ಪ್ರಕ್ಷುಬ್ಧವಾಗಲಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.












Click it and Unblock the Notifications