ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅಬ್ಬರಿಸಲಿದ್ದಾನೆ ವರುಣ
Recommended Video

ಬೆಂಗಳೂರು, ಜೂನ್ 14: ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಭಾರೀ ಮಳೆಯಾಘುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ನೈರುತ್ಯ ಮುಂಗಾರು ಮಾರುತಗಳು ಮುಂಬೈನ ಥಾಣೆ, ಅಹ್ಮದ್ ನಗರ, ಬುಲ್ಧಾನಾ, ಅಮ್ರೋಟಿ, ಗೋಂಡಿಯಾ, ಟಿಟ್ಲಾ ಗರ್, ಕಟಕ್, ಮಿಡ್ನಾಪುರ, ಗೋಲ್ ಪಾರಾ ಮತ್ತು ಬಗ್ಡೋಗ್ರಾ ಮೂಲಕ ಹಾದುಹೋಗಿವೆ. ಮುಂಗಾರು ಮಾರುತಗಳು ಮುಂದಿನ ಒಂದು ವಾರ ದುರ್ಬಲವಾಗಲಿದ್ದು, ಹೆಚ್ಚಿನ ಮಳೆ ಸುರಿಯಲಿಕ್ಕಿಲ್ಲ ಎಂದು ಅಂದಾಜಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಕರ್ನಾಟಕ, ಕೇರಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಭಾರೀ ಮಳೆಯಾಗಲಿದೆ. ಅರುಣಾಚಲ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ದಕ್ಷಿಣ ಕೊಂಕಣ್ ಮತ್ತು ಗೋವಾದಲ್ಲಿ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡದು ಹಾಗೆಯೇ ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ ಎಂಮದು ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲ, ಕೇರಳ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ ಮತ್ತು ತ್ರಿಪುರಗಳಲ್ಲೂ ಮಳೆ ಕಾಣಿಸಿಕೊಳ್ಳಲಿದೆ.













Click it and Unblock the Notifications