ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಂಭವ
Recommended Video
ಬೆಂಗಳೂರು, ಜುಲೈ 03: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಕೊಂಚ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಅಲ್ಲಲ್ಲಿ ಕೊಂಚ ಮಳೆಯೂ ಬೀಳಲಿದೆ.
ಈ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು, ಇಂದು ಸಹ ವರುಣನ ಆರ್ಭಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ
ಇನ್ನುಳಿದಂತೆ ಉತ್ತರ ಭಾರತದಲ್ಲಿ ಸಹ ಇಂದು ಭಾರೀ ಮಳೆ ಕಂಡುಬರಲಿದ್ದು, ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ. ಈಶಾನ್ಯ ರಾಜ್ಯ ಅಸ್ಸಾಂ ನಲ್ಲಿ ಈಗಾಘಲೇ ಪ್ರವಾಹ ಆರಂಭವಾಗಿದ್ದು ಈ ಸನ್ನಿವೇಶ ಮತ್ತಷ್ಟು ಹದಗೆಡಬಹುದು ಎಂದು ಸಹ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರಾಖಂಡ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲೂ ಮಳೆ ಬೀಳಲಿದೆ. ಆದರೆ ರಾಜಧಾನಿ ದೆಹಲಿಯಲ್ಲಿ ಮಳೆ ಬೀಲುವ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.