ಕರ್ನಾಟಕ ಕರಾವಳಿಯಲ್ಲಿ ಮುಂದುವರಿಯಲಿದೆ ಧಾರಾಕಾರ ಮಳೆ
Recommended Video
ಬೆಂಗಳೂರು, ಜೂನ್ 29: ಕಳೆದ ಹಲವು ದಿನಗಳಲಿಂದ ಕರ್ನಾಟಕ ಕರಾವಳಿ ಜಿಲ್ಲೆಯಲ್ಲಿ ಎಡಬಿಡದೆ ಸುರಿವ ಮಳೆ ಬಿಡುವು ಪಡೆಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದು ಸಹ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ನಗರ, ಕುಂದಾಪುರ, ಕಾರ್ಕಳಗಳಲ್ಲಿ ನಿನ್ನೆ ಸಾಕಷ್ಟು ಮಳೆಯಾಗಿದೆ. ಇಂದು ಸಹ ರಾಜ್ಯದ ಇತರ ಕರಾವಳಿ ಪ್ರದೇಶಗಳಲ್ಲೂ ಬೀಳಲಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.
ಕರ್ನಾಟಕ ಕರಾವಳಿಯಲ್ಲಿ ಇಂದೂ ಧಾರಾಕಾರ ಮಳೆ
ರಾಜಧಾನಿ ಬೆಂಗಳೂರಿನಲ್ಲಿ ಎಂದಿನಂತೆ ಮೋಡಕವಿದ ವಾತಾವರಣ ಕಂಡುಬರಲಿದ್ದದು, ಸಂಜೆ ಹೊತ್ತಿಗೆ ಅಲ್ಲಲ್ಲಿ ಕೊಂಚ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನಗಳಲ್ಲೂ ಮಳೆಯಾಗಲಿದೆ.
ನೈರುತ್ಯ ಮಾರುತಗಳು ಚುರುಕಾಗಿದ್ದು, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ, ಛತ್ತೀಸ್ ಗಢ, ಒಡಿಶಾ, ಬಿಹಾರ ಮತ್ತು ಜಾರ್ಖಂಡ್ , ಮಧ್ಯಪ್ರದೇಶ, ಉತ್ತರ ಪ್ರದೇಶದ ಕೆಲವೆಡೆ, ಉತ್ತರಾಖಂಡ್ ಮತ್ತು ಹಿಮಾಚಲಪ್ರದೇಶಗಳಲ್ಲಿ ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಕಾಶ್ಮೀರದ ಕೆಲವು ಭಾಗಗಳಲ್ಲೂ ಮಳೆಯಾಗಲಿದೆ. ನೈರುತ್ಯ ಮುಂಗಾರು ಚುರುಕಾಗಿರುವ ಕಾರಣ ಭಾರತದ ಉದ್ದಗಲಕ್ಕೂ ಮಳೆಯಾಗುವ ಲಕ್ಷಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.