ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಭಾರತ, ಕರಾವಳಿ ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ

|
Google Oneindia Kannada News

Recommended Video

ಉತ್ತರ ಭಾರತ, ಕರಾವಳಿ ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ | Oneindia Kannada

ಬೆಂಗಳೂರು, ಜುಲೈ 26: ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಇಂದೂ ಮುಂದುವರಿಯಲಿದ್ದು, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲಿ ಸಹ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.

ಕರ್ನಾಟಕ ಕರಾವಳಿಯಲ್ಲಿ ವರುಣನ ಅಬ್ಬರಕ್ಕಿಲ್ಲ ವಿರಾಮಕರ್ನಾಟಕ ಕರಾವಳಿಯಲ್ಲಿ ವರುಣನ ಅಬ್ಬರಕ್ಕಿಲ್ಲ ವಿರಾಮ

ರಾಜಧಾನಿ ಬೆಂಗಳೂರಿನಲ್ಲಿಎಂದಿನಂತೆ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆ ಇದೆ.

Monsoon Update July 26 Heavy rain in coastal and south interior Karnataka

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಕೊಂಚ ಮಳೆಯಾಗಲಿದೆ.

ಇನ್ನುಳಿದಂತೆ ದೇಶದ ನಾನಾ ರಾಜ್ಯಗಳಲ್ಲಿ ಅಂದರೆ, ಉತ್ತರಾಖಂಡ್, ಉತ್ತರ ಪ್ರದೇಶ, ಹರ್ಯಾಣ, ಚಂಡಿಗಢ, ದೆಹಲಿ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಪೂರ್ವ ರಾಜಸ್ತಾನ, ಮಧ್ಯ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳ, ಕೊಂಕಣ ಸೀಮೆ, ತಮಿಳುನಾಡು, ಕೇರಳಗಳಲ್ಲೂ ಭಾರೀ ಮಳೆಬೀಳಲಿದೆ ಎಂಮದು ಹವಾಮಾನ ಇಲಾಖೆ ತಿಳಿಸಿದೆ.

English summary
Monsoon Update: Heavy rain in coastal and south interior Karnataka.Heavy to very heavy rain at isolated places very likely over Uttarakhand, Uttar Pradesh, and Haryana, Chandigarh and Delhi, Himachal Pradesh, Jammu & Kashmir, Punjab, East Rajasthan, Madhya Pradesh, Assam and Meghalaya, Nagaland, Manipur, Mizoram and Tripura, Gangetic West Bengal, Konkan,Tamilnadu
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X