ಎರಡು ದಿನಗಳ ಬಳಿಕ ವಿರಾಮಕ್ಕೆ ಜಾರಲಿದೆ ಮುಂಗಾರು
Recommended Video

ಬೆಂಗಳೂರು, ಜೂನ್ 12: ಈಗ ದೇಶದಾದ್ಯಂತ ಸುರಿಯುತ್ತಿರುವ ಮುಂಗಾರು ಮಳೆ ಇನ್ನೆರಡು ದಿನ ಸುರಿಯಲಿದ್ದು ನಂತರ ಒಂದು ವಾರಗಳ ಕಾಲ ಮಳೆ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಗುರುವಾರದಿಂದ ಮುಂಗಾರು ಮಳೆ ದುರ್ಬಲವಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಆದರೆ ಇದೇ ವೇಳೆ ಮುಂದಿನ 48 ಗಂಟೆಗಳಲ್ಲಿ ಈಶಾನ್ಯ ಭಾರತದಲ್ಲಿ ಹೆಚ್ಚಿನ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.
ನೈರುತ್ಯ ಮುಂಗಾರು ಮಾರುತಗಳು ಮರಾಠವಾಡ, ವಿಧರ್ಭ, ಛತ್ತೀಸ್ ಗಢ ಪ್ರದೇಶಗಳಿಗೂ ವಿಸ್ತರಿಸಿದ್ದು, ಮುಂಬೈನ ಥಾಣೆ, ಅಹ್ಮದ್ ನಗರ, ಬುಲ್ಧಾನಾ, ಅಮ್ರೋಟಿ, ಗೋಂಡಿಯಾ, ಭವಾನಿಪಟ್ನ, ಪುರಿ, ಕೊಲ್ಕತ್ತಾ, ಸೊಹ್ರಾ, ಉತ್ತರ ಲಖಿಂಪುರದ ಮೂಲಕ ಹಾದುಹೋಗಿವೆ.

ಮುಂದಿನ 48 ಗಂಟೆಗಳಲ್ಲಿ ಇದೇ ಮುಂಗಾರು ಮಾರುತಗಳು ಒಡಿಶಾದ ಇನ್ನೂ ಹೆಚ್ಚಿನ ಪ್ರದೇಶಗಳು, ಈಶಾನ್ಯ ಭಾರತದ ರಾಜ್ಯಗಳು, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಹಲವು ಪ್ರದೇಶಗಳಿಗೆ ವಿಸ್ತರಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಕರಾವಳಿ ಸೇರಿದಂತೆ ಮುಂದಿನ 24 ಗಂಟೆಗಳಲ್ಲಿ ಕೇರಳದ ಹಲವು ಭಾಗಗಳು, ಛತ್ತೀಸ್ ಗಢ, ಅಸ್ಸಾಂ, ಮೇಘಾಲಯ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅರುಣಾಚಲ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ವಿದರ್ಭ, ದಕ್ಷಿಣ ಕೊಂಕಣ್, ಗೋವಾ ಮತ್ತು ಉತ್ತರ ಆಂಧ್ರ ಕರಾವಳಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಪೂರ್ವ ಉತ್ತರ ಪ್ರದೇಶ, ವಿದರ್ಭ, ಮಧ್ಯ ಮಹಾರಾಷ್ಟ್ರ, ಛತ್ತಿಸ್ ಗಢ, ಜಾರ್ಖಂಡ್, ಬಿಹಾರ, ತೆಲಂಗಾಣ, ರಾಯಲಸೀಮಾ ಮತ್ತು ಉತ್ತರ ಒಳನಾಡು ಕರ್ನಾಟಕದಲ್ಲಿ ಬಿರುಗಾಳಿ, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಗೋವಾ, ಕರ್ನಾಟಕ, ಕೇರಳ ಕರಾವಳಿ ಇದೇ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧಗೊಳ್ಳಲಿದ್ದು ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಈಗಾಗಲೇ ಕೇರಳ, ತಮಿಳುನಾಡು, ಆಂಧ್ರ ಪ್ರದೇಶಕ್ಕೆ ಪ್ರವೇಶಿಸಿರುವ ನೈರುತ್ಯ ಮುಂಗಾರು ಇದೀಗ ಮಹಾರಾಷ್ಟ್ರದಿಂದ ಉತ್ತರದತ್ತ ತೆರಳಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications