Morbi Tragedy: ಸೇತುವೆ ನವೀಕರಿಸಿದ ಕಂಪನಿ ಮಾಲೀಕನೇ A1 ಆರೋಪಿ, ಚಾರ್ಚ್ಸೀಟ್ನಲ್ಲಿ ಏನಿದೆ? ತಿಳಿಯಿರಿ
ಗುಜರಾತ್ ಮೊರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ನಲ್ಲಿ ಪ್ರಧಾನ ಆರೋಪಿಯನ್ನು ಎಂದು ಹೆಸರಿಸಲಾಗಿದೆ
ಗುಜರಾತ್ ಮೊರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇತುವೆ ನವೀಕರಣ ಸಂಸ್ಥೆಯ ಮುಖ್ಯಸ್ಥನನ್ನು ಚಾರ್ಜ್ಶೀಟ್ನಲ್ಲಿ ಪ್ರಧಾನ ಆರೋಪಿ ಎಂದು ಹೆಸರಿಸಲಾಗಿದೆ. ಗುಜರಾತ್ನ ಮೊರ್ಬಿಯಲ್ಲಿ ಬ್ರಿಟಿಷರ ಕಾಲದ ಸೇತುವೆ ಕುಸಿದು 135 ಜನರು ಸಾವನ್ನಪ್ಪಿದರು. ಈ ಘಟನೆ ನಡೆದು ಸುಮಾರು ಮೂರು ತಿಂಗಳ ನಂತರ ಸೇತುವೆಯ ನಿರ್ವಹಣೆ ಮತ್ತು ದುರಸ್ತಿಗಾಗಿ ನೇಮಕಗೊಂಡ ಕಂಪನಿಯ ಉನ್ನತ ಮುಖ್ಯಸ್ಥ ಜಯಸುಖ್ ಪಟೇಲ್ ಅವರನ್ನು ಚಾರ್ಜ್ಶೀಟ್ನಲ್ಲಿ ಪ್ರಧಾನ ಆರೋಪಿ ಎಂದು ಹೆಸರಿಸಲಾಗಿದೆ.
ಘಟನೆ ಬಳಿಕ ಒರೆವಾ ಗ್ರೂಪ್ನ ಪ್ರವರ್ತಕ ಮತ್ತು ಅಜಂತಾ ಮ್ಯಾನುಫ್ಯಾಕ್ಚರಿಂಗ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ನಾಪತ್ತೆಯಾಗಿದ್ದಾರೆ. ಕಳೆದ ವಾರ ಆತನ ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು. ಬಂಧನದಿಂದ ತಪ್ಪಿಸಿಕೊಳ್ಳಲು ಜನವರಿ 16ರಂದು ಜಾಮೀನು ಕೋರಿ ಅರ್ಜಿ ಅವರು ಸಲ್ಲಿಸಿದ್ದರು. 1,262 ಪುಟಗಳ ಚಾರ್ಜ್ ಶೀಟ್ ಅವರನ್ನು ಪ್ರಮುಖ ಆರೋಪಿಯಾಗಿದ್ದು ಆದರೆ ಅವರು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಒರೆವಾ ಗ್ರೂಪ್ ಕಂಪನಿ ಮುಖ್ಯಸ್ಥ ಪ್ರಧಾನ ಆರೋಪಿ
"ಆದಷ್ಟು ಬೇಗ ಆತನನ್ನು ಬಂಧಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸದ್ಯ ಆತನನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ" ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಯಾದವ್ ಹೇಳಿದ್ದಾರೆ. ಅಜಂತಾ ಬ್ರಾಂಡ್ನಡಿಯಲ್ಲಿ ಗೋಡೆ ಗಡಿಯಾರಗಳನ್ನು ತಯಾರಿಸಲು ಹೆಸರುವಾಸಿಯಾದ ಒರೆವಾ ಗ್ರೂಪ್ ಕಂಪನಿಗೆ, ಮಚ್ಚು ನದಿಯ ಮೇಲಿನ 100 ವರ್ಷಗಳಷ್ಟು ಹಳೆಯದಾದ ತೂಗು ಸೇತುವೆಯ ನವೀಕರಣ, ಕಾರ್ಯಾಚರಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ನೀಡಲಾಗಿತ್ತು. ನವೀಕರಣ, ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಸೇತುವೆ ಪುನಃ ತೆರೆದ ನಾಲ್ಕು ದಿನಗಳ ನಂತರ ಅಕ್ಟೋಬರ್ 30 ರಂದು ಸೇತುವೆ ಕುಸಿದಿದೆ.

ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚನೆ
ಮೊರ್ಬಿ ಸೇತುವೆ ಕುಸಿತಕ್ಕೆ ಕಾರಣ ಪತ್ತೆ ಹಚ್ಚಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿತು. ಈ ತಂಡ ಒರೆವಾ ಗ್ರೂಪ್ನ ಕಳಪೆ ನಿರ್ವಹಣೆ, ಸೇತುವೆಯ ಮೇಲಿನ ಜನರ ಸಂಖ್ಯೆಯನ್ನು ಮಿತಿಗೊಳಿಸಲು ವಿಫಲತೆ ಮತ್ತು ಟಿಕೆಟ್ಗಳ ಅನಿಯಂತ್ರಿತ ಮಾರಾಟದಂತಹ ಹಲವಾರು ಲೋಪಗಳಿಂದಾಗಿ ಸೇತುವೆ ಕುಸಿದಿದೆ ಎಂದು ಉಲ್ಲೇಖಿಸಿದೆ. ಸುಮಾರು 300 ಜನರು ಸೇತುವೆಯ ಮೇಲೆ ಇದ್ದು ಹೆಚ್ಚು ಭಾರದಿಂದಾಗಿ ಕೇಬಲ್ಗಳು ತುಂಡಾಗಿ ಸೇತುವೆ ಕುಸಿದಿದೆ ಎಂದು ಪೊಲೀಸರು ಹೇಳುತ್ತಾರೆ.

ಪ್ರತಿಪಕ್ಷಗಳ ಆರೋಪವೇನು?
ಉಪಗುತ್ತಿಗೆದಾರರು, ಟಿಕೆಟ್ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ದಿನಗೂಲಿ ಕಾರ್ಮಿಕರು ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಈ ಹಿಂದೆ ಬಂಧಿತರಾದ ಒಂಬತ್ತು ಮಂದಿಯೊಂದಿಗೆ ಪಟೇಲ್ ಅವರನ್ನು 10 ನೇ ಆರೋಪಿ ಎಂದು ಪಟ್ಟಿ ಮಾಡಲಾಗಿದೆ. ಆದರೆ ಈ ಘಟನೆಯಿಂದ ದೊಡ್ಡ ಕೈಗಳಿವೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಗುಜರಾತ್ನ ಬಿಜೆಪಿ ಸರ್ಕಾರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜಕೀಯವಾಗಿ ಪ್ರಭಾವಿ ಕೈಗಾರಿಕೋದ್ಯಮಿಯನ್ನು ರಕ್ಷಿಸುವ ಆರೋಪವನ್ನು ಎದುರಿಸುತ್ತಿದೆ.

ಎಫ್ಎಸ್ಎಲ್ ವರದಿ
ಘಟನೆಯ ಕುರಿತಾದ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ವರದಿಯು ಸೇತುವೆಯ ನವೀಕರಣದ ಸಮಯದಲ್ಲಿ ತುಕ್ಕು ಹಿಡಿದ ಕೇಬಲ್ಗಳು, ಮುರಿದ ಆಂಕರ್ ಪಿನ್ಗಳು ಮತ್ತು ಸಡಿಲವಾದ ಬೋಲ್ಟ್ಗಳನ್ನು ಪರಿಹರಿಸಲಾಗಿಲ್ಲ ಎಂದು ಬಹಿರಂಗಪಡಿಸಿದೆ. ಸೇತುವೆಯನ್ನು ಸಾರ್ವಜನಿಕರಿಗೆ ತೆರೆಯುವ ಮೊದಲು ಅದರ ಭಾರ ಹೊರುವ ಸಾಮರ್ಥ್ಯವನ್ನು ನಿರ್ಣಯಿಸಲು ಒರೆವಾ ಗ್ರೂಪ್ ಯಾವುದೇ ಪರಿಣಿತ ಏಜೆನ್ಸಿಯನ್ನು ನೇಮಿಸಿಕೊಂಡಿಲ್ಲ ಎಂದು ವರದಿ ಹೇಳಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications