Morbi Bridge Collapse: ಗುಜರಾತ್ ಸೇತುವೆ ದುರಂತ: ನವೀಕರಣ ಸಂಸ್ಥೆಯ ಮುಖ್ಯಸ್ಥ ನ್ಯಾಯಾಲಯಕ್ಕೆ ಶರಣು!
ಗುಜರಾತ್ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀಕರಣ ಸಂಸ್ಥೆಯ ಮುಖ್ಯಸ್ಥ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಮೊರ್ವಿ ಜನವರಿ 31: ಅಕ್ಟೋಬರ್ನಲ್ಲಿ ಕುಸಿದುಬಿದ್ದ ಗುಜರಾತ್ನ ಮೊರ್ಬಿಯಲ್ಲಿ 135 ಮಂದಿ ಸಾವನ್ನಪ್ಪಿದ ಸೇತುವೆಯ ನಿರ್ವಹಣೆ ಮತ್ತು ದುರಸ್ತಿಗಾಗಿ ಒರೆವಾ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಇಂದು ಸ್ಥಳೀಯ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಹೆಸರಿಸಲ್ಪಟ್ಟ ನಂತರ ಕಳೆದ ವಾರ ಆತನ ಬಂಧನಕ್ಕೆ ವಾರಂಟ್ ಹೊರಬಿದ್ದಿತ್ತು. ಘಟನೆಯ ನಂತರ ಪಟೇಲ್ ನಾಪತ್ತೆಯಾಗಿದ್ದು, ಬಂಧನದಿಂದ ತಪ್ಪಿಸಿಕೊಳ್ಳಲು ಜಾಮೀನು ಅರ್ಜಿ ಸಲ್ಲಿಸಿದ್ದರು.
ಅಜಂತಾ ಬ್ರಾಂಡ್ನ ಅಡಿಯಲ್ಲಿ ಗೋಡೆ ಗಡಿಯಾರಗಳ ತಯಾರಕರಾದ ಒರೆವಾ ಗ್ರೂಪ್ಗೆ ಮಚ್ಚು ನದಿಯ ಮೇಲಿನ ಬ್ರಿಟಿಷರ ಕಾಲದ ತೂಗು ಸೇತುವೆಯ ನವೀಕರಣ, ಕಾರ್ಯಾಚರಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ನೀಡಲಾಗಿತ್ತು. ಅಕ್ಟೋಬರ್ 30 ರಂದು ಸೇತುವೆಯ ಮೇಲೆ ಜನರ ಸಂಚಾರಕ್ಕೆ ಮತ್ತೆ ತೆರೆಯಲಾಗಿತ್ತು. ಆದರೆ ಹೆಚ್ಚು ಜನ ಸೇತುವೆ ಮೇಲೆ ಸೇರಿದ್ದರಿಂದ ಕೇಬಲ್ಗಳು ಕಟ್ ಆಗಿ ಸೇತುವೆ ಕುಸಿದಿದೆ. ಈ ವೇಳೆ ಸೇತುವೆ ಮೇಲೆ ಸುಮಾರು 300 ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಸಂಸ್ಥೆಯ ಭಾಗದಲ್ಲಿ ಅನೇಕ ಲೋಪದೋಷಗಳನ್ನು ಉಲ್ಲೇಖಿಸಿದೆ. ನವೀಕರಣದ ಸಮಯದಲ್ಲಿ ತುಕ್ಕು ಹಿಡಿದ ಕೇಬಲ್ಗಳು, ಮುರಿದ ಆಂಕರ್ ಪಿನ್ಗಳು ಮತ್ತು ಸಡಿಲವಾದ ಬೋಲ್ಟ್ಗಳನ್ನು ಬದಲಾಯಿಸಲಾಗಿಲ್ಲ ಎಂದು ವಿಧಿವಿಜ್ಞಾನ ಪರೀಕ್ಷೆಗಳು ಬಹಿರಂಗಪಡಿಸಿವೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಯು ಸೇತುವೆಯನ್ನು ಸಾರ್ವಜನಿಕರಿಗೆ ತೆರೆಯುವ ಮೊದಲು ಅದರ ಭಾರ ಹೊರುವ ಸಾಮರ್ಥ್ಯವನ್ನು ನಿರ್ಣಯಿಸಲು ಯಾವುದೇ ಪರಿಣಿತ ಏಜೆನ್ಸಿಯನ್ನು ನೇಮಿಸಿಕೊಂಡಿಲ್ಲ ಎಂದು ಹೇಳಿದೆ.
ಈ ಪ್ರಕರಣದಲ್ಲಿ ಜೈಸುಖ್ ಪಟೇಲ್ ಬಂಧಿತ 10ನೇ ಆರೋಪಿಯಾಗಿದ್ದಾರೆ. ಮೊದಲು ಬಂಧಿಸಲ್ಪಟ್ಟವರಲ್ಲಿ ಉಪಗುತ್ತಿಗೆದಾರರು, ಟಿಕೆಟ್ ಗುಮಾಸ್ತರಾಗಿ ಕೆಲಸ ಮಾಡಿದ ದಿನಗೂಲಿ ಕಾರ್ಮಿಕರು ಮತ್ತು ಭದ್ರತಾ ಸಿಬ್ಬಂದಿ ಸೇರಿದ್ದಾರೆ.

ಅವರ ಬಂಧನ ವಿಳಂಬದಿಂದಾಗಿ ರಾಜ್ಯದ ಬಿಜೆಪಿ ಸರ್ಕಾರ ವಿಧಾನಸಭಾ ಚುನಾವಣೆಗೂ ಮುನ್ನ ರಾಜಕೀಯವಾಗಿ ಪ್ರಭಾವಿ ಕೈಗಾರಿಕೋದ್ಯಮಿಯನ್ನು ರಕ್ಷಿಸುತ್ತಿದೆ ಎಂಬ ಆರೋಪವನ್ನು ಹೊತ್ತಿದೆ. ಪ್ರತಿಪಕ್ಷ ಕಾಂಗ್ರೆಸ್ ಇನ್ನೂ ಪ್ರಕರಣದಲ್ಲಿ ದೊಡ್ಡ ಮೀನುಗಳು ಇನ್ನೂ ಬಲೆಗೆ ಬಿದ್ದಿಲ್ಲ ಎಂದು ಹೇಳುತ್ತದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications