ಯುಪಿಯಲ್ಲಿ ಮೂಲಸೌಕರ್ಯಕ್ಕೆ ಹೆಚ್ಚು ಒತ್ತು: Yogi Adityanath ಹೊಸ ಅಧಿಸೂಚನೆ

ಪ್ರಧಾನಿ ಮೋದಿ ಅವರ ಸ್ವಂತ ಕ್ಷೇತ್ರವಾದ ಯುಪಿಯ ವಾರಣಾಸಿ ಪ್ರಮುಖ ಯೋಜನೆಗಳ ಉದ್ಘಾಟನೆಗೆ ಸಜ್ಜಾಗುತ್ತಿದೆ. ಯುಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳು ಪ್ರಾರಂಭವಾಗಿದ್ದು, ಇದೇ ತಿಂಗಳ 24 ರಂದು ಯೋಜನೆಗಳನ್ನು ಪ್ರಾರಂಭಿಸಲು ಮೋದಿ ಇಲ್ಲಿಗೆ ಬರುತ್ತಿದ್ದಾರೆ.

ಲಕ್ಲೋ ಮಾರ್ಚ್ 18: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜಿಲ್ಲೆಯ ರಾಜಧಾನಿಗಳಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಹೊಸ ಯೋಜನೆಯನ್ನು ಘೋಷಿಸಿದ್ದು, ಉತ್ತರ ಪ್ರದೇಶದ ಮೂಲ ರಚನೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಯೋಜಿಸುತ್ತಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ತನ್ನ ಎರಡನೇ ಅವಧಿಯ ಅಧಿಕಾರದ ನಂತರ ಹಲವು ಹೊಸ ಬದಲಾವಣೆಗಳನ್ನು ತಂದಿದೆ. ಈ ವರ್ಷದ ಆರಂಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸಿದ್ದರು. ಬಳಿಕ ಬಜೆಟ್ ಮಂಡಿಸಲಾಯಿತು. ಬಜೆಟ್‌ನಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಹಣ ಹಂಚಿಕೆಯಾಗಿದೆ. ಬಜೆಟ್‌ನಲ್ಲಿ ಮೂರು ವಿಷಯಗಳಿಗೆ ಆದ್ಯತೆ ನೀಡಲಾಗಿದೆ.

ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಣ ಮತ್ತು ಆರೋಗ್ಯಕ್ಕೆ ಪ್ರಾಮುಖ್ಯತೆ

ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಣ ಮತ್ತು ಆರೋಗ್ಯಕ್ಕೆ ಪ್ರಾಮುಖ್ಯತೆ

ಈ ಬಾರಿ ಬಜೆಟ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಣ ಮತ್ತು ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಲಾಯಿ. ಇದಕ್ಕಾಗಿ ಹೆಚ್ಚುವರಿ ಹಣವನ್ನು ವಿನಿಯೋಗಿಸಲಾಗಿದೆ. ಅದರಂತೆ ಯೋಗಿ ಆದಿತ್ಯನಾಥ್ ನಿನ್ನೆ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ಘೋಷಣೆಗಳನ್ನು ಮಾಡಿದರು. ರಾಷ್ಟ್ರ ರಾಜಧಾನಿಗೆ ನೀಡುವ ಮಹತ್ವದಂತೆ ರಾಜ್ಯ ರಾಜಧಾನಿಗೂ ತಕ್ಕ ಪ್ರಾಮುಖ್ಯತೆ ನೀಡಿ ಯೋಜನಾಬದ್ಧವಾಗಿ ರಚನೆಗಳನ್ನು ಸುಧಾರಿಸಲಾಗುವುದು ಎಂದರು.

ಈ ನಿಟ್ಟಿನಲ್ಲಿ ಲಕ್ನೋ ಇಂದು ದೊಡ್ಡ ಮಹಾನಗರವಾಗಿ ಬೆಳೆಯುತ್ತಿದೆ. ವಿವಿಧ ಜಿಲ್ಲೆಗಳ ಜನರು ಇಲ್ಲಿಗೆ ಬಂದು ವಾಸಿಸಲು ಬಯಸುತ್ತಿದ್ದಾರೆ. ಲಕ್ನೋ ಸುತ್ತಮುತ್ತಲ ಜಿಲ್ಲೆಗಳ ಜನಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದ್ದು, ಯೋಜಿತವಲ್ಲದ ಅಭಿವೃದ್ಧಿ ಬಗ್ಗೆಯೂ ದೂರುಗಳಿವೆ. ಇದರಲ್ಲಿ ರಾಜ್ಯ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳ ವಿಸ್ತರಣೆ ಸೂಕ್ತವಾಗಿದ್ದು, ಎರಡು ವಾರಗಳಲ್ಲಿ ಈ ಬಗ್ಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಬೀದಿ ನಾಯಿಗಳ ನಿಯಂತ್ರಣಕ್ಕೆ ಹೊಸ ಯೋಜನೆ

ಬೀದಿ ನಾಯಿಗಳ ನಿಯಂತ್ರಣಕ್ಕೆ ಹೊಸ ಯೋಜನೆ

ಈಗಾಗಲೇ ವಿಶ್ವದರ್ಜೆಯ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿರುವ ಹೂಡಿಕೆದಾರರೊಂದಿಗೆ ನೇರವಾಗಿ ಮಾತನಾಡಿ ಅಗತ್ಯತೆಗಳನ್ನು ಈಡೇರಿಸುವಂತೆ ಆದೇಶಿಸಲಾಗಿದೆ ಎಂದ ಅವರು, ಈಗ ಇದರ ಮುಂದುವರಿದ ಭಾಗವಾಗಿ ನಗರಗಳಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಹೊಸ ಯೋಜನೆ ಪ್ರಕಟಿಸಿದ್ದಾರೆ. ಇದರ ಪ್ರಕಾರ ಪ್ರತಿ ನಗರದಲ್ಲಿ ಪ್ರಾಣಿಗಳ ಜನನ ನಿಯಂತ್ರಣ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಕೇಂದ್ರದ ಮೂಲಕ ಬೀದಿನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲಾಗುತ್ತದೆ. ಬೀದಿ ನಾಯಿಗಳಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಉತ್ತರ ಪ್ರದೇಶವು ಅಗ್ರಸ್ಥಾನದಲ್ಲಿದೆ.


ಈ ರೀತಿಯ ಪ್ರತಿಯೊಂದು ಸಣ್ಣ ವಿಷಯಕ್ಕೂ ಉತ್ತರ ಪ್ರದೇಶ ಸರ್ಕಾರ ಗಮನ ಹರಿಸುತ್ತಿದ್ದು, ಈಗ ನಾವು ಮಾಡುತ್ತಿರುವ ಬದಲಾವಣೆಗಳು ಮುಂದಿನ 50 ವರ್ಷಗಳನ್ನು ಗಣನೆಗೆ ತೆಗೆದುಕೊಂಡು ಮಾಡಲಾಗುತ್ತಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ ಬದಲಾವಣೆಗಳನ್ನು ನೆರೆಯ ರಾಜ್ಯಗಳಲ್ಲಿ ವ್ಯಾಪಕವಾಗಿ ಚರ್ಚಿಸಲಾಗಿದೆ ಎಂಬುದು ಗಮನಾರ್ಹ.

ವಿಶೇಷ ಗಮನ ಸೆಳೆದ ಯೋಗಿ ಆದಿತ್ಯನಾಥ್

ವಿಶೇಷ ಗಮನ ಸೆಳೆದ ಯೋಗಿ ಆದಿತ್ಯನಾಥ್

ಪ್ರಧಾನಿ ಮೋದಿ ಅವರ ಸ್ವಂತ ಕ್ಷೇತ್ರವಾದ ಯುಪಿಯ ವಾರಣಾಸಿ ಪ್ರಮುಖ ಯೋಜನೆಗಳ ಉದ್ಘಾಟನೆಗೆ ಸಜ್ಜಾಗುತ್ತಿದೆ. ಯುಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳು ಪ್ರಾರಂಭವಾಗಿದ್ದು, ಇದೇ ತಿಂಗಳ 24 ರಂದು ಯೋಜನೆಗಳನ್ನು ಪ್ರಾರಂಭಿಸಲು ಮೋದಿ ಇಲ್ಲಿಗೆ ಬರುತ್ತಿದ್ದಾರೆ.

ಮಾವು, ತರಕಾರಿಗಳು ಮತ್ತು ಇತರ ಕೃಷಿ ಉತ್ಪನ್ನಗಳ ಪ್ಯಾಕಿಂಗ್ ಮತ್ತು ಮಾರುಕಟ್ಟೆಗಾಗಿ ಪ್ರಧಾನಿ ಮೋದಿ ಇದೇ ಮೇ 24 ರಂದು ವಾರಣಾಸಿಯಲ್ಲಿ ಇಂಟಿಗ್ರೇಟೆಡ್ ಪ್ಯಾಕೇಜಿಂಗ್ ಹೌಸ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಮೋದಿ ಜೂನ್ 15, 2021 ರಂದು ಈ ಯೋಜನೆಗೆ ಶಂಕುಸ್ಥಾಪನೆ ಮಾಡಿದರು. ಇದನ್ನು ಕೇವಲ ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ಯಾಕೇಜಿಂಗ್ ಯೋಜನೆ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮೋದಿ ವಾರಣಾಸಿಗೆ ಆಗಮಿಸುತ್ತಿದ್ದಾರೆ.

ಮೋದಿಯಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಮೋದಿಯಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಮೋದಿ ಅವರು ಆರಂಭಿಸಲಿರುವ ಯೋಜನೆಗಳಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್ ಟವರ್, ಪೊಲೀಸ್ ಬ್ಯಾರಕ್, ಲಾಲ್ ಬಹದ್ದೂರ್ ಶಾಸ್ತ್ರಿ ವಿಮಾನ ನಿಲ್ದಾಣದಲ್ಲಿ ಸೋಲಾರ್ ಯೋಜನೆಗಳು ಸೇರಿವೆ. ಇವುಗಳನ್ನು ಆರಂಭಿಸಲು ಮೋದಿ ಬರುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿ ಕಾರ್ಯಪ್ರವೃತ್ತರಾಗಲು ಸೂಚಿಸಿದ್ದಾರೆ.

ಈ ಯೋಜನೆಗಳ ಪ್ರಗತಿ, ಉದ್ಘಾಟನೆ ಸಂದರ್ಭದಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ವಿವರ ಪಡೆದ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದರು. ಭದ್ರತೆ ಮತ್ತು ಇತರ ಕ್ರಮಗಳನ್ನೂ ಯೋಗಿ ಪರಿಶೀಲಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+