ಭಾರತದಲ್ಲಿ 19,500ಕ್ಕೂ ಅಧಿಕ ಆಡುಭಾಷೆಗಳು : ಗಣತಿ ವರದಿ
ನವದೆಹಲಿ, ಜುಲೈ 03: ಭಾರತದಲ್ಲಿ 19,500ಕ್ಕೂ ಹೆಚ್ಚು ಆಡುಭಾಷೆಗಳಿವೆ ಇವೆಲ್ಲವನ್ನು ತಾಯ್ನುಡಿ ಎದು ಪರಿಗಣಿಸಬಹುದಾಗಿದೆ ಎಂದು ಇತ್ತೀಚಿನ ಜನಗಣತಿ ಆಧರಿಸಿ ರೂಪಿಸಲಾದ ವರದಿ ತಿಳಿಸಿದೆ.
ಭಾರತದ 121 ಕೋಟಿ ಜನರ ಪೈಕಿ ಹತ್ತು ಸಾವಿರಕ್ಕೂ ಹೆಚ್ಚು ಜನರು ಮಾತನಾಡುವ ಭಾಷೆಗಳ ಸಂಖ್ಯೆ 121 ಆಗಿದೆ ಎಂದು ವರದಿಯಲ್ಲಿ
ಹೇಳಲಾಗಿದೆ.
2011ರ ಜನಗಣತಿ ವರದಿ ಪ್ರಕಾರ, 19,569ಕ್ಕೂ ಅಧಿಕ ಮಾತೃಭಾಷೆಗಳಿವೆ. ಆದರೆ, ಶೇ96.71ರಷ್ಟು ಜನಸಂಖ್ಯೆ 22 ಅಧಿಸೂಚಿತ ಭಾಷೆಗಳನ್ನೆ ತಮ್ಮ ಮಾತೃಭಾಷೆಯನ್ನಾಗಿ ಬಳಸುತ್ತಾರೆ.

ಪ್ರತಿ ಕುಟುಂಬದಲ್ಲಿ ರಕ್ತಸಂಬಂಧಿಗಳು ಹಾಗೂ ರಕ್ತಸಂಬಂಧಿಗಳಲ್ಲದವರು ಇರುತ್ತಾರೆ. ಹೀಗಾಗಿ ಗಣತಿಯ ವೇಳೆ ಪ್ರತಿಯೊಬ್ಬ ವ್ಯಕ್ತಿಯ ಆಡುಭಾಷೆಯ ಬಗ್ಗೆ ಮಾಹಿತಿ ಕೇಳಲಾಗಿತ್ತು ಎಂದು ಗಣತಿ ನಡೆಸಿದ ರಿಜಿಸ್ಟ್ರಾರ್ ಜನರಲ್ ಹಾಗೂ ಸೆನ್ಸಸ್ ಆಯುಕ್ತರು ತಿಳಿಸಿದ್ದಾರೆ. ಒಟ್ಟಾರೆ, 270ಕ್ಕೂ ಅಧಿಕ ಗುರುತು ಸಿಗದ ತಾಯ್ನುಡಿಗಳಿದ್ದು, 10 ಸಾವಿರಕ್ಕೂ ಅಧಿಕ ಮಂದಿ ಮಾತನಾಡುತ್ತಿದ್ದಾರೆ.
ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೂಚಿಸಿರುವ 22 ಭಾಷೆಗಳು- ಅಸ್ಸಾಮಿ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ಸಿಂಧಿ, ತಮಿಳು, ತೆಲುಗು, ಉರ್ದು, ಬೊಡೋ, ಸಂಥಲಿ, ಮೈಥಿಲಿ ಹಾಗೂ ಡೊಗ್ರಿ.
1967ರಲ್ಲಿ ಸಿಂಧಿ ಭಾಷೆಯನ್ನು, 1992ರಲ್ಲಿ ಕೊಂಕಣಿ, ಮಣಿಪುರಿ, ನೇಪಾಳಿ ಭಾಷೆಗಳನ್ನು ಹಾಗೂ 2004ರಲ್ಲಿ ಬೋಡೋ, ಡೊಗ್ರಿ, ಮೈಥಿಲಿ ಹಾಗೂ ಸಂಥಿಲಿ ಭಾಷೆ ಸೇರಿಸಲಾಗಿದೆ.(ಪಿಟಿಐ)
-
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications