ಉತ್ತರಾಖಂಡ: 2,000 ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಪಾಸಿಟಿವ್
ಡೆಹ್ರಾಡೂನ್, ಜೂ. 03: ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ 2,000 ಕ್ಕೂ ಹೆಚ್ಚು ಉತ್ತರಾಖಂಡ ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ದೃಢಪಟ್ಟಿದ್ದು, ಈ ಪೈಕಿ ಶೇ.90 ರಷ್ಟು ಪೊಲೀಸರು ಸೋಂಕಿಗೆ ಒಳಗಾಗುವ ಮೊದಲು ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವರದಿ ಪ್ರಕಾರ, ಕರ್ತವ್ಯದಲ್ಲಿದ್ದ 2,382 ಪೊಲೀಸರಲ್ಲಿ ಏಪ್ರಿಲ್ ಮತ್ತು ಮೇ ನಡುವೆ ಕೊರೊನಾ ಸೋಂಕು ಪಾಸಿಟಿವ್ ಆಗಿದೆ. ಈ ಪೈಕಿ 2,204 ಮಂದಿ ಪೊಲೀಸರು ಈಗಾಗಲೇ ಚೇತರಿಸಿಕೊಂಡಿರುವುದು ಆಶಾದಾಯಕ ವಿಚಾರವಾಗಿದೆ.
ಇನ್ನು ಐವರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿವೆ. ಮಾಹಿತಿಯ ಪ್ರಕಾರ, ಸಾವನ್ನಪ್ಪಿದ ಐವರು ಪೊಲೀಸರಲ್ಲಿ ಇಬ್ಬರು ಇತರ ಆರೋಗ್ಯ ಸಮಸ್ಯೆಗಳನ್ನೂ ಹೊಂದಿದ್ದರು ಹಾಗೂ ಉಳಿದ ಮೂವರು ಲಸಿಕೆ ಹಾಕಿಸಿಕೊಂಡಿರಲಿಲ್ಲ.

ಈ ಬಗ್ಗೆ ಮಾಹಿತಿ ನೀಡಿರುವ ಡಿಐಜಿ (ಕಾನೂನು ಸುವ್ಯವಸ್ಥೆ) ಮತ್ತು ಉತ್ತರಾಖಂಡ ಪೊಲೀಸ್ ಮುಖ್ಯ ವಕ್ತಾರ ನಿಲೇಶ್ ಆನಂದ್ ಭರ್ನೆ, ''ಕೊರೊನಾ ದೃಢಪಟ್ಟ ಪೊಲೀಸರ ಸಾವುನೋವುಗಳು ಕಡಿಮೆ ಇದೆ'' ಎಂದು ಹೇಳಿದ್ದಾರೆ. ''ಹಾಗೆಯೇ ಲಸಿಕೆ ತಯಾರಕರು ಎರಡೂ ಡೋಸ್ ಲಸಿಕೆ ಪಡೆದ ಬಳಿಕ ಕೋವಿಡ್ ದೃಢಪಡುವುದಿಲ್ಲ ಎಂದು ಎಲ್ಲೂ ಹೇಳಿಲ್''ಲ ಎಂದು ತಿಳಿಸಿದ್ದಾರೆ.
''ಕೋವಿಡ್ -19 ರಿಂದ ಮೃತಪಟ್ಟ ಪೊಲೀಸರನ್ನು ಹರಿದ್ವಾರದ ಕುಂಭಮೇಳದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ ಅವರ ಸಾವು ಮತ್ತು ಧಾರ್ಮಿಕ ಸಭೆಗೂ ಯಾವುದೇ ಸಂಬಂಧವಿಲ್ಲ'' ಎಂದು ಕೂಡಾ ಆನಂದ್ ಭರ್ನೆ ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಇನ್ನು ಕೊರೊನಾ ದೃಢಪಟ್ಟ ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರಲ್ಲಿ ಒಟ್ಟು 751 ಮಂದಿಗೆ ಸೋಂಕು ತಗುಲಿದ್ದು ಈ ಪೈಕಿ 64 ಮಂದಿ ಸಾವನ್ನಪ್ಪಿದ್ದಾರೆ. ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಂದರ್ಭ 1,982 ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ತಗುಲಿದ್ದು ಎಂಟು ಮಂದಿ ಸಾವನ್ನಪ್ಪಿದ್ದರು.
ಕಳೆದ ವರ್ಷ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಈವರೆಗೆ 4,364 ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಈ ಪೈಕಿ 13 ಮಂದಿ ಸಾವನ್ನಪ್ಪಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications