ಚಿತ್ತೂರಿನಲ್ಲಿ ಎನ್ ಕೌಂಟರ್ 20 ಸ್ಮಗ್ಲರ್ಸ್ ಬಲಿ
ಚಿತ್ತೂರು, ಏ,7 : ಆಂಧ್ರಪ್ರದೇಶದ ಚಿತ್ತೂರು ಅರಣ್ಯ ಪ್ರದೇಶದಲ್ಲಿ 20ಕ್ಕೂ ಅಧಿಕ ರಕ್ತ ಚಂದನ, ಗಂಧದ ಮರಗಳ ಕಳ್ಳರನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಚಂದಗಿರಿ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು.
ಕೂಂಬಿಂಗ್ ಕಾರ್ಯಾಚರಣೆ ವೇಳೆ ಭಾರೀ ಶಸ್ತ್ರಾಸ್ತ್ರ ಹೊಂದಿದ್ದ ಕಾಡುಗಳ್ಳರ ತಂಡ ಗುಂಡಿನ ದಾಳಿ ನಡೆಸಿತ್ತು. ಅದರೆಮ್ ಭರ್ಜರಿ ಕಾರ್ಯಾಚರಣೆಯಲ್ಲಿ 20 ಮಂದಿ ಕಾಡುಗಳ್ಳರು ಸ್ಥಳದಲ್ಲೇ ಮೃತಪಟ್ಟರೆ, 8 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಅಧಿಕಾರಿಗಳಿಗೂ ಗಾಯಗಳಾಗಿವೆ.

80 ಮಂದಿ ಸ್ಮಗ್ಲರ್ ಗಳು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಅರಣ್ಯ ಪ್ರದೇಶದ ಚಂದಗಿರಿಯಲ್ಲಿ ಸುಮಾರು 80 ಮಂದಿ ಇರುವ ಮಾಹಿತಿ ಸಿಕ್ಕಿತ್ತು. ಸ್ಥಳೀಯ ಪೊಲೀಸರ ನೆರವಿನಿಂದ ಅರಣ್ಯ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ. ಕಡಪ ಹಾಗೂ ಚಿತ್ತೂರು ಭಾಗದಲ್ಲಿ ರಕ್ತ ಚಂದನ ಸ್ಮಗಲಿಂಗ್ ಅಧಿಕವಾಗಿದ್ದು, ಪ್ರತಿ ಟನ್ನಿಗೆ 10 ಲಕ್ಷ ರು ಬೆಲೆ ಇದೆ.
ಮಂಗಳವಾರ ಬೆಳಗ್ಗೆ ಆರಂಭವಾದ ಗುಂಡಿನ ಕಾಳಗ ಮುಂದುವರೆಯಲಿದ್ದು, ಕಳ್ಳಸಾಗಣೆಗಾರರನ್ನು ಸಂಪೂರ್ಣವಾಗಿ ಹಿಡಿಯುವ ತನಕ ಕಾರ್ಯಾಚರಣೆ ನಡೆಯಲಿದೆ ಎಂದು ವಿಶೇಷ ಟಾಸ್ಕ್ ಪೋರ್ಸ್ ಅಧಿಕಾರಿಗಳು ಹೇಳಿದ್ದಾರೆ.
ಪೊಲೀಸರ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವವರೆಲ್ಲರೂ ತಮಿಳುನಾಡಿನವರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಕೃಷ್ಣಗಿರಿ, ವೆಲ್ಲೂರು ಮತ್ತು ತಿರುವಣ್ಣಾಮಲೈ ಜಿಲ್ಲೆಗಳಿಗೆ ಸೇರಿದವರೆಂದು ಗೊತ್ತಾಗಿದೆ.
ಆದರೆ, ದಾಳಿಯ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಮೃತರ ಕುಟುಂಬಸ್ಥರು, ಎನ್ ಕೌಂಟರ್ ಹೆಸರಿನಲ್ಲಿ ಕೂಲಿ ಕಾರ್ಮಿಕರನ್ನು ಬಲಿ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.
2013ರ ಡಿಸೆಂಬರ್ 13ರಂದು ಚಿತ್ತೂರು ಜಿಲ್ಲೆ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ರಕ್ತಚಂದನ ಕಳ್ಳ ಸಾಗಣೆದಾರರು ಡೇವಿಡ್ ಮತ್ತು ಶ್ರೀಧರ್ ಎಂಬ ಇಬ್ಬರು ಅರಣ್ಯ ಅಧಿಕಾರಿಗಳನ್ನು ಹತ್ಯೆ ಮಾಡಿದ್ದರು. ಜತೆಗೆ ಒಂದಿಬ್ಬರು ಪೊಲೀಸರನ್ನು ಹತ್ಯೆ ಮಾಡಲಾಗಿತ್ತು. ಆಂಧ್ರಪ್ರದೇಶ ಡಿಜಿಪಿ ರಾಮುಡು ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಈ ಪ್ರಕರಣದ ಸಂಪೂರ್ಣ ಮಾಹಿತಿ ನೀಡಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications