ಚಿತ್ತೂರಿನಲ್ಲಿ ಎನ್ ಕೌಂಟರ್ 20 ಸ್ಮಗ್ಲರ್ಸ್ ಬಲಿ
ಚಿತ್ತೂರು, ಏ,7 : ಆಂಧ್ರಪ್ರದೇಶದ ಚಿತ್ತೂರು ಅರಣ್ಯ ಪ್ರದೇಶದಲ್ಲಿ 20ಕ್ಕೂ ಅಧಿಕ ರಕ್ತ ಚಂದನ, ಗಂಧದ ಮರಗಳ ಕಳ್ಳರನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಚಂದಗಿರಿ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು.
ಕೂಂಬಿಂಗ್ ಕಾರ್ಯಾಚರಣೆ ವೇಳೆ ಭಾರೀ ಶಸ್ತ್ರಾಸ್ತ್ರ ಹೊಂದಿದ್ದ ಕಾಡುಗಳ್ಳರ ತಂಡ ಗುಂಡಿನ ದಾಳಿ ನಡೆಸಿತ್ತು. ಅದರೆಮ್ ಭರ್ಜರಿ ಕಾರ್ಯಾಚರಣೆಯಲ್ಲಿ 20 ಮಂದಿ ಕಾಡುಗಳ್ಳರು ಸ್ಥಳದಲ್ಲೇ ಮೃತಪಟ್ಟರೆ, 8 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಅಧಿಕಾರಿಗಳಿಗೂ ಗಾಯಗಳಾಗಿವೆ.

80 ಮಂದಿ ಸ್ಮಗ್ಲರ್ ಗಳು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಅರಣ್ಯ ಪ್ರದೇಶದ ಚಂದಗಿರಿಯಲ್ಲಿ ಸುಮಾರು 80 ಮಂದಿ ಇರುವ ಮಾಹಿತಿ ಸಿಕ್ಕಿತ್ತು. ಸ್ಥಳೀಯ ಪೊಲೀಸರ ನೆರವಿನಿಂದ ಅರಣ್ಯ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ. ಕಡಪ ಹಾಗೂ ಚಿತ್ತೂರು ಭಾಗದಲ್ಲಿ ರಕ್ತ ಚಂದನ ಸ್ಮಗಲಿಂಗ್ ಅಧಿಕವಾಗಿದ್ದು, ಪ್ರತಿ ಟನ್ನಿಗೆ 10 ಲಕ್ಷ ರು ಬೆಲೆ ಇದೆ.
ಮಂಗಳವಾರ ಬೆಳಗ್ಗೆ ಆರಂಭವಾದ ಗುಂಡಿನ ಕಾಳಗ ಮುಂದುವರೆಯಲಿದ್ದು, ಕಳ್ಳಸಾಗಣೆಗಾರರನ್ನು ಸಂಪೂರ್ಣವಾಗಿ ಹಿಡಿಯುವ ತನಕ ಕಾರ್ಯಾಚರಣೆ ನಡೆಯಲಿದೆ ಎಂದು ವಿಶೇಷ ಟಾಸ್ಕ್ ಪೋರ್ಸ್ ಅಧಿಕಾರಿಗಳು ಹೇಳಿದ್ದಾರೆ.
ಪೊಲೀಸರ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವವರೆಲ್ಲರೂ ತಮಿಳುನಾಡಿನವರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಕೃಷ್ಣಗಿರಿ, ವೆಲ್ಲೂರು ಮತ್ತು ತಿರುವಣ್ಣಾಮಲೈ ಜಿಲ್ಲೆಗಳಿಗೆ ಸೇರಿದವರೆಂದು ಗೊತ್ತಾಗಿದೆ.
ಆದರೆ, ದಾಳಿಯ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಮೃತರ ಕುಟುಂಬಸ್ಥರು, ಎನ್ ಕೌಂಟರ್ ಹೆಸರಿನಲ್ಲಿ ಕೂಲಿ ಕಾರ್ಮಿಕರನ್ನು ಬಲಿ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.
2013ರ ಡಿಸೆಂಬರ್ 13ರಂದು ಚಿತ್ತೂರು ಜಿಲ್ಲೆ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ರಕ್ತಚಂದನ ಕಳ್ಳ ಸಾಗಣೆದಾರರು ಡೇವಿಡ್ ಮತ್ತು ಶ್ರೀಧರ್ ಎಂಬ ಇಬ್ಬರು ಅರಣ್ಯ ಅಧಿಕಾರಿಗಳನ್ನು ಹತ್ಯೆ ಮಾಡಿದ್ದರು. ಜತೆಗೆ ಒಂದಿಬ್ಬರು ಪೊಲೀಸರನ್ನು ಹತ್ಯೆ ಮಾಡಲಾಗಿತ್ತು. ಆಂಧ್ರಪ್ರದೇಶ ಡಿಜಿಪಿ ರಾಮುಡು ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಈ ಪ್ರಕರಣದ ಸಂಪೂರ್ಣ ಮಾಹಿತಿ ನೀಡಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications