ಮಸೀದಿ ಹಾಗೂ ಇಸ್ಲಾಂ : ನಮಾಜಿಗಿಂತ ಜಮೀನು ಯಾರಿಗೆ ಎಂಬುದು ಮುಖ್ಯ!
ನವದೆಹಲಿ, ಸೆಪ್ಟೆಂಬರ್ 27: ರಾಮ ಜನ್ಮಭೂಮಿ ಜಮೀನು ವಿವಾದ ಕುರಿತಂತೆ ಅಕ್ಟೋಬರ್ 29ರಿಂದ ನಿರಂತರವಾಗಿ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟಿನ ತ್ರಿಸದಸ್ಯ ಪೀಠ ಇಂದು ಪ್ರಕಟಿಸಿದೆ. ಇದಕ್ಕೂ ಮುನ್ನ 'ಮಸೀದಿಯನ್ನು ಇಸ್ಲಾಂನ ಅವಿಭಾಜ್ಯ ಅಂಗವೇ? ನಮಾಜು ಮಾಡಲು ಮಸೀದಿಯೇ ಆಗಬೇಕೇ? ಎಂಬುದರ ಬಗ್ಗೆ ಕೂಡಾ ಸುಪ್ರೀಂಕೋರ್ಟ್ ಇಂದು ತನ್ನ ತೀರ್ಪು ನೀಡಿದೆ.
ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂದು 1994ರ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಜೊತೆಗೆ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ತೀರ್ಮಾನಿಸಿದೆ.
1994ರ ಇಸ್ಮಾಯಿಲ್ ಫಾರೂಕಿ ಕೇಸಿಗೆ ಸಂಬಂಧಿಸಿದಂತೆ ಮಸೀದಿ ಕುರಿತು ಕೆಲ ಮುಸ್ಲಿಂ ಸಂಘಟನೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ ಸಿಜೆಐ ದೀಪಕ್ ಮಿಶ್ರಾ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿ, 1994ರ ಕೆಳ ಹಂತದ ನ್ಯಾಯಾಲಯ ನೀಡಿದ ತೀರ್ಪಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದೆ.

ಹೀಗಾಗಿ, ಸುನ್ನಿ ವಕ್ಫ್ ಬೋರ್ಡ್ ಮತ್ತು ಕೆಲ ಮುಸ್ಲಿಂ ಸಂಘಟನೆಗಳು 1994ರ ಇಸ್ಮಾಯಿಲ್ ಫಾರೂಕಿ ತೀರ್ಪನ್ನು ಪ್ರಶ್ನಿಸಿ 7 ಸದಸ್ಯರ ವಿಸ್ತೃತ ಸಂವಿಧಾನ ಪೀಠ ರಚನೆ ಮಾಡಿ, ಪ್ರಕರಣವನ್ನು ವರ್ಗಾಯಿಸಲು ಕೋರಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ.
ಭೂ ಸ್ವಾದೀನದ ಬಗ್ಗೆ : 1994ರಲ್ಲಿ ಫಾರೂಕಿ ಕೇಸಿಗೆ ಸಂಬಂಧಿಸಿದಂತೆ ಮಾತ್ರ ಜಾಗ, ಜಮೀನಿನ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಆ ಪ್ರಕರಣ ಧಾರ್ಮಿಕ ವಿಧಿ ವಿಧಾನಗಳ ಬಗ್ಗೆ ಅಲ್ಲ, ಭೂ ಸ್ವಾದೀನ ಪಡೆದುಕೊಳ್ಳುವುದರ ಬಗ್ಗೆ ಇತ್ತು.
ಹೀಗಾಗಿ, ಸರ್ಕಾರವು ಅಗತ್ಯಬಿದ್ದಾಗ ದೇಶದ ಯಾವುದೇ ದೇಗುಲ, ಮಸೀದಿ ಮತ್ತು ಚರ್ಚ್ಗಳನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬಹುದು ಎಂದು ಇಬ್ಬರು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.
ಸಿಜೆಐ ದೀಪಕ್ ಮಿಶ್ರಾ ಹಾಗೂ ನ್ಯಾ ಅಶೋಕ್ ಭೂಷಣ್ ಅವರು ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದರೆ, ನ್ಯಾ ಅಬ್ದುಲ್ ನಜೀರ್ ಅಸಮ್ಮತಿ ವ್ಯಕ್ತಪಡಿಸಿದರು.
'ಅಯೋಧ್ಯೆಯಲ್ಲಿನ ವಿವಾದಿತ ಜಾಗ(2.77 ಎಕರೆ)ದ ಮೇಲೆ ಹಿಂದೂ(ರಾಮ್ ಲಲ್ಲಾ), ಮುಸ್ಲಿಂ(ಸುನ್ನಿ ವಕ್ಫ್ ಮಂಡಳಿ) ಹಾಗೂ ನಿರ್ಮೋಹಿ ಅಖಾರಕ್ಕೆ ಸಮಾನವಾದ ಅಧಿಕಾರವಿದೆ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪು ಈಗ ಮತ್ತೊಮ್ಮೆ ವಿಚಾರಣೆಗೆ ಒಳಪಡಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications