ಸಂಧಾನಕ್ಕೆ ಒಪ್ಪದಿದ್ದರೆ ಕಾನೂನು ತಂದು ರಾಮಮಂದಿರ ನಿರ್ಮಾಣ: ಸ್ವಾಮಿ
ರಾಮ ಜನ್ಮ ಭೂಮಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದಿದ್ದರೆ ನಮ್ಮದೇನೂ ಅಭ್ಯಂತರ ಇಲ್ಲ. ಇಲ್ಲ ಅಂದರೆ ಕೇಂದ್ರ ಸರಕಾರ ಅ ಬಗ್ಗೆ ಕಾನೂನು ಜಾರಿಗೆ ತಂದು, ರಾಮಮಂದಿರ ನಿರ್ಮಾಣ ಮಾಡ್ತೀವಿ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ
ಲಖನೌ, ಮೇ 5: ಮುಸ್ಲಿಮರು ಸಂಧಾನಕ್ಕೆ ಸಿದ್ಧರಿಲ್ಲ ಅಂದರೆ ಅದನ್ನು ಮಾಡುವುದಕ್ಕೆ ಕೋರ್ಟ್ ಇದೆ ಎಂದು ಬಿಜೆಪಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಯೋಧ್ಯಾ ರಾಮ ಮಂದಿರ ನಿರ್ಮಾಣದ ವಿಚಾರವಾಗಿ ಮಾತನಾಡಿದ್ದಾರೆ. ಅಲಹಾಬಾದ್ ಹೈ ಕೋರ್ಟ್ ನಲ್ಲಿ ನಾವಿಗಾಗಲೇ ಗೆದ್ದಿದ್ದೀವಿ. ರಾಮ ಜನಿಸಿದ್ದು ಅದೇ ಸ್ಥಳದಲ್ಲಿ ಎಂದು ಹೇಳಲಾಗಿದೆ ಅಂತ ಸ್ವಾಮಿ ಹೇಳಿದ್ದಾರೆ.
ನೀವು ಹಿಂದೂ-ಮುಸ್ಲಿಂ ಸಾಮರಸ್ಯದ ಬಗ್ಗೆ ಮಾತನಾಡ್ತೀರಿ ಅನ್ನೋದಾದರೆ ಮಸೀದಿಯನ್ನು ಎಲ್ಲಾದರೂ ಕಟ್ಟಿಕೊಳ್ಳಿ. ಆದರೆ ರಾಮ ಜನ್ಮಸ್ಥಳದಲ್ಲಿ ಅಲ್ಲ ಎಂದುಸ್ವಾಮಿ ಹೇಳಿದ್ದಾರೆ. ಮಸೀದಿ ಕಟ್ಟಿದ ಜಾಗದಲ್ಲಿ ದೇವಾಲಯವಿತ್ತು ಎಂಬುದನ್ನು ಹಟ ಹಿಡಿದು ಕೂತಿರುವ ಮುಸ್ಲಿಂ ಧರ್ಮಗುರುಗಳು ಅರ್ಥ ಮಾಡಿಕೊಳ್ಳಬೇಕು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನಂತರ ತಿಳಿಸಿದ್ದಾರೆ.[25 ವರ್ಷಗಳ ನಂತರ ಬಾಬ್ರಿ ಮಸೀದಿ ಕೆಡವಿದ ಕೇಸ್ ರೀ ಕ್ಯಾಪ್]

ಸುಪ್ರೀಂ ಕೋರ್ಟ್ ಮೂಲಕ ವಿವಾದ ಪರಿಹರಿಸಿಕೊಳ್ಳಬಹುದು. ಸಂವಿಧಾನದ ಪರಿಚ್ಛೇದ 25ರ ಪ್ರಕಾರ ನನಗೆ ಮೂಲಭೂತ ಹಕ್ಕು ಇದೆ. ನನ್ನ ನಂಬಿಕೆಗೆ ಅನ್ವಯ ನಡೆದುಕೊಳ್ಳುವ ಸ್ಥಳದಲ್ಲಿ ಪೂಜೆ ಮಾಡುವುದು ಮೂಲಭೂತ ಹಕ್ಕು. ಆದರೆ ಅವರು ಆಸ್ತಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ಸ್ವಾಮಿ ಹೇಳಿದ್ದಾರೆ.
ವಿವಾದಿತ ಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ಮುಸ್ಲಿಂ ಸಮುದಾಯ ಬೆಂಬಲ ನೀಡಬೇಕು ಎಂದು ಸ್ವಾಮಿ ಒತ್ತಾಯಿಸಿದ್ದರು. ಪ್ರಾಚ್ಯವಸ್ತು ಸಂಶೋಧನಾ ಇಲಾಖೆ ಆವರು ರಾಮ ಜನ್ಮ ಸ್ಥಳ ಎಂದು ಖಾತ್ರಿ ಪಡಿಸಿರುವ ಸ್ಥಳದಲ್ಲಿ ಮಾತ್ರ, ಅಂದರೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಾಧ್ಯ ಎಂದು ಅವರು ಹೇಳಿದ್ದರು.[ರಾಮಮಂದಿರ ನಿರ್ಮಾಣ: ಸಿಎಂ ಯೋಗಿ ಕೈಲಿದೆ 'ಪವರ್' ಅಸ್ತ್ರ]
ರಾಜೀ-ಸಂಧಾನದ ಮೂಲಕ ಈ ವಿಚಾರ ಬಗೆಹರಿದರೆ ಸರಿ. 2018ರ ಏಪ್ರಿಲ್ ನಲ್ಲಿ ನಮಗೆ ರಾಜ್ಯಸಭೆಯಲ್ಲಿ ಬಹುಮತ ಲಭಿಸುತ್ತದೆ. ಆಗ ಆಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಕಾನೂನು ಜಾರಿಗೆ ತರುತ್ತೇವೆ ಎಂದು ಸ್ವಾಮಿ ತಿಳಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications