ಮಸೀದಿ ಹೇಳಿಕೆ: ಸುಬ್ರಹ್ಮಣ್ಯಸ್ವಾಮಿ ವಿರುದ್ಧ ಎಫ್ಐಆರ್
ನವದೆಹಲಿ, ಮಾ.15: ಮಸೀದಿ ಧಾರ್ಮಿಕ ಕೇಂದ್ರವಲ್ಲ, ಅದೊಂದು ಕೇವಲ ಕಟ್ಟಡ. ಇದನ್ನು ಯಾವುದೇ ಸಂದರ್ಭದಲ್ಲೂ ನೆಲಸಮ ಮಾಡಬಹುದೆಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಸುಬ್ರಹ್ಮಣ್ಯಸ್ವಾಮಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
ಗುವಾಹಟಿಯಲ್ಲಿ ನಡೆದ ಹಿಂದೂ ವಿರಾಟ್ ಸಂಗಮದಲ್ಲಿ ಮಾತನಾಡಿದ ಸುಬ್ರಹ್ಮಣ್ಯಸ್ವಾಮಿ ಅವರು, ಮಸೀದಿ ಧಾರ್ಮಿಕ ಕೇಂದ್ರವಲ್ಲ, ಇದು ಕೇವಲ ಒಂದು ಕಟ್ಟಡ ಮಾತ್ರ. ಇದನ್ನು ಯಾವುದೇ ವೇಳೆ ಧ್ವಂಸ ಮಾಡಬಹುದು. ನನ್ನ ಈ ಮಾತನ್ನು ಯಾರಾದರೂ ಒಪ್ಪದಿದ್ದರೂ ಅವರ ಜತೆ ನಾನು ಸಾರ್ವಜನಿಕ ಚರ್ಚೆಗೆ ಸಿದ್ಧ. ಈ ಮಾಹಿತಿಯನ್ನು ನಾನು ಸೌದಿ ಅರೇಬಿಯಾದಿಂದ ಪಡೆದುಕೊಂಡಿದ್ದೇನೆ ಎಂದು ಹೇಳಿದ್ದರು.

ಭಾರತದಲ್ಲಿರುವ ಎಲ್ಲ ಮುಸ್ಲಿಮರು ಹಿಂದೂಗಳಾಗಿದ್ದಾರೆ. ಮಸೀದಿಯ ಅಗತ್ಯವೇ ಇಲ್ಲ ಎಂದು ವಿವಾದದ ಕಿಡಿ ಹಚ್ಚಿದ್ದರು. ಅವರ ಈ ಹೇಳಿಕೆಗೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗಿದೆ. ಸಮಿತಿ ಸುಬ್ರಹ್ಮಣ್ಯಸ್ವಾಮಿ ವಿರುದ್ಧ ಕೃಷಿಕ್ ಮುಕ್ತಿ ಸಂಘ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದೆ.
ಲಟಾಸಿಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಹಿಂದು ಮತ್ತು ಮುಸ್ಲಿಂ ನಡುವೆ ಕೋಮು ಗಲಭೆ ಸೃಷ್ಟಿಸುತ್ತಿರುವ ಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ದೆಹಲಿಯ ಮುಸ್ಲಿಂ ಸಂಘಟನೆ ಡಾ.ಸುಬ್ರಹ್ಮಣ್ಯಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಿದ್ಧವಾಗಿದೆ.
ಅಸ್ಸೋಂನಲ್ಲಿ ಈಗಾಗಲೇ ಸ್ವಾಮಿ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕೋಮು ಗಲಭೆ ಸೃಷ್ಟಿಸಿ ಪರಿಸ್ಥಿತಿ ಲಾಭ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಕಿಡಿಕಾರಿದ್ದಾರೆ.
ಪಿಟಿಐ
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications