ಮದರ್ ತೆರೆಸಾ ಹೆಸರಿನ ಅನಾಥಾಶ್ರಮಗಳು ಇನ್ನಿಲ್ಲ
ಕೋಲ್ಕತ್ತಾ, ಅ.10: ನೊಬೆಲ್ ಪಾರಿತೋಷಕ ವಿಜೇತೆ ಮದರ್ ತೆರೆಸಾ ಅವರ ಹೆಸರಿನಲ್ಲಿರುವ ಅನಾಥಾಶ್ರಮಗಳ ಮಾನ್ಯತೆ ರದ್ದು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಮಿಷನರಿ ಆಫ್ ಚಾರಿಟಿ ದತ್ತು ನಿಯಮ ಉಲ್ಲಂಘನೆ ಮಾಡಿದ ಆರೋಪ ಎದುರಿಸುತ್ತಿದೆ.
ಮದರ್ ತೆರೆಸಾ ಅವರ ಹೆಸರಿನಲ್ಲಿ ಮಿಷನರಿ ಆಫ್ ಚಾರಿಟಿ ನಡೆಸುತ್ತಿರುವ 19 ಅನಾಥಾಶ್ರಮಗಳ ಮಾನ್ಯತೆ ರದ್ದುಪಡಿಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಿದ್ಧತೆ ನಡೆಸಿದೆ. ಸರ್ಕಾರದ ನೂತನ ದತ್ತು ನಿಯಮಗಳನ್ನು ಮಿಷನರಿ ಆಫ್ ಚಾರಿಟಿ ಪಾಲಿಸುತ್ತಿಲ್ಲ ಹಾಗೂ ಆಗಸ್ಟ್ 15, 2015ರಿಂದ ಯಾವುದೇ ದತ್ತು ಸ್ವೀಕಾರ ಪಡೆದಿಲ್ಲ ಎಂಬ ಆರೋಪವಿದೆ.
ಅದರೆ, ಈ ಬಗ್ಗೆ ಪ್ರತಿಕ್ರಿಯಿಸಿದ ಮಿಷನರಿ ಆಫ್ ಚಾರಿಟಿ, ಮದರ್ ಅವರ ಅಣತಿಯಂತೆ ಕೆಲ ನಿಯಮಗಳನ್ನು ಪಾಲಿಸಲಾಗುತ್ತಿದೆ. ಸರ್ಕಾರದ ಹೊಸ ನೀತಿಯನ್ನು ಪಾಲಿಸಲು ಸಾಧ್ಯವಾಗದ ಕಾರಣ ದತ್ತು ಸ್ವೀಕಾರ ಮುಂದುವರೆಸಿಲ್ಲ ಎಂದಿದೆ.

ಮೇನಕಾ ಗಾಂಧಿ ಮಾತನಾಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿ ಮಾತನಾಡಿ, ಅನಾಥಾಶ್ರಮಗಳ ನೋಂದಣಿ ರದ್ದುಪಡಿಸಲು ಸರ್ಕಾರ ಮುಂದಾಗಿಲ್ಲ. ತೆರೆಸಾ ಮಿಷನರಿಗಳೇ ನೋಂದಣಿ ರದ್ದುಪಡಿಸುವಂತೆ ಕೋರಿ ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದೆ. ವಿಚ್ಛೇದಿತರಿಗೆ, ಏಕಾಂಗಿಯಾಗಿರುವವರಿಗೆ ಮತ್ತು ವಿಚ್ಛೇದನ ದಂಪತಿಗೆ ಅನಾಥ ಮಕ್ಕಳನ್ನು ದತ್ತು ನೀಡಲು ತೆರೆಸಾ ಅನಾಥಾಶ್ರಮಗಳು ನಿರಾಕರಿಸಿವೆ ಎಂದಿದ್ದಾರೆ.
ಸರ್ಕಾರ ರೂಪಿಸಿರುವ ನಿಯಮಾವಳಿಗಳ ಬಗ್ಗೆ ತೆರೆಸಾ ಮಿಷನರಿಗಳಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯವಿದೆ. ವಿವಾಹವಾಗದ ಮಹಿಳೆಯರಿಗೆ ದತ್ತು ನೀಡುವುದೂ ಸೇರಿ ಹಲವು ವಿಚಾರಗಳ ಬಗ್ಗೆ ಮಿಷನರಿಗಳ ಆಕ್ಷೇಪವಿದೆ. ಹೀಗಾಗಿ ಮಾನ್ಯತೆ ರದ್ದು ಮಾಡುವಂತೆ ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ(Central Adoption Resource Authority) ಕ್ಕೆ ಮಿಷನರಿಗಳೇ ಅರ್ಜಿ ಸಲ್ಲಿಸಿವೆ ಎಂದು ಗಾಂಧಿ ಹೇಳಿದ್ದಾರೆ.
ಮಕ್ಕಳನ್ನು ದತ್ತು ಪಡೆಯುವುದು ಹಾಗೂ ನೀಡುವುದಕ್ಕೆ ಸಂಬಂಧಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊಸ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಸಿಂಗಲ್ ಪೇರೆಂಟ್(ಅಪ್ಪ ಅಥವಾ ಅಮ್ಮ) ಗಳಿಗೂ ದತ್ತು ಸ್ವೀಕಾರ ಸಾಧ್ಯವಾಗಿದೆ. ಅದರೆ, ಇತ್ತೀಚೆಗೆ ಬಿಹಾರ್ ಹಾಗೂ ಅಸ್ಸಾಂ ಮೂಲಕ ಸಿಂಗಲ್ ಪೇರೆಂಟ್ ಗಳು ಮಿಷನರಿ ಆಫ್ ಚಾರಿಟಿಯಿಂದ ಮಕ್ಕಳನ್ನು ದತ್ತು ಪಡೆಯಲು ಬಯಸಿ, ವಿಫಲರಾಗಿದ್ದರು. ಈ ಬಗ್ಗೆ ಸಚಿವಾಲಯಕ್ಕೆ ದೂರು ನೀಡಿದ್ದರು.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications