ತೀರಿಕೊಂಡ ತಾಯಿಯ ಎದೆಹಾಲು ಕುಡಿಯಲು ಯತ್ನಿಸುತ್ತಿದ್ದ ಮಗು
ದುರ್ಘಟನೆಗಳು, ಮನಸ್ಸು ಕಲಕುವ ಸನ್ನಿವೇಶಗಳು ಬಹಳ ಕಾಲ ಕಾಡುತ್ತಲೇ ಇರುತ್ತವೆ. ಮಧ್ಯಪ್ರದೇಶದಲ್ಲಿ ನಡೆದ ಘಟನೆಯೊಂದರ ವರದಿ ಇದು. ಓದುತ್ತಿದ್ದರೆ ಕಣ್ಣು ತೇವವಾಗುವಂತಿದೆ. ಅಮ್ಮ ಎನ್ನುವ ಅದ್ಭುತ ಮತ್ತೆಮತ್ತೆ ಸಾಬೀತಾಗುತ್ತಲೇ ಇರುತ್ತದೆ
ಭೋಪಾಲ್, ಮೇ 25: ಆ ಮಹಿಳೆಯ ಶವ ರೈಲ್ವೆ ಹಳಿಯ ಪಕ್ಕದಲ್ಲಿ ಬಿದ್ದಿತ್ತು. ಆಕೆಯ ಒಂದು ವರ್ಷದ ಮಗುವಿಗೆ ಹಸಿವಾಗುತ್ತಿತ್ತೋ ಏನೋ ಎದೆಹಾಲು ಕುಡಿಯಲು ಪ್ರಯತ್ನಿಸುತ್ತಿತ್ತು. ಇಂಥ ಹೃದಯ ಕರಗಿಸುವ ವರದಿಯೊಂದು ಮಧ್ಯಪ್ರದೇಶದ ದಾಮೋದಿಂದ ಆಗಿದೆ. ತನ್ನ ತಾಯಿ ಬದುಕಿಲ್ಲ ಎಂಬುದು ಗೊತ್ತಿಲ್ಲದ ಮಗು ಎದೆ ಹಾಲು ಕುಡಿಯುವುದಕ್ಕೆ ಪ್ರಯತ್ನಿಸುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.
ಬುಧವಾರ ಬೆಳಗ್ಗೆ ಮಗು ಹಾಗೂ ಆ ತಾಯಿಯನ್ನು ರೈಲ್ವೆ ಹಳಿಯ ಬಳಿ ನೋಡಿದ ಸ್ಥಳೀಯರು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವರೆಗೆ ಮಹಿಳೆ ಸಾವಿಗೆ ಕಾರಣ ಏನು ಅನ್ನೋದು ತಿಳಿದುಬಂದಿಲ್ಲ. ಆದರೆ ಪ್ರಾಥಮಿಕ ತನಿಖೆ ಪ್ರಕಾರ, ಆಕೆ ರೈಲಿನಿಂದ ಕೆಳಗೆ ಬಿದ್ದಿರಬಹುದು ಅಥವಾ ಯಾರಾದರೂ ಹೊಡೆದು ಹಾಕಿರಬಹುದು.[ಮುಂಬೈನಲ್ಲಿ ಮದುವೆ ನೋಡಿ, ಮನುಷ್ಯತ್ವ ಅಂದರೆ ಇದೇ ಅಲ್ಲವೆ?]

ಆಕೆಯ ಹಿಂಭಾಗದಿಂದ ತಲೆಗೆ ಹೊಡೆದು, ಮೃತಪಟ್ಟಿರುವುದು ಗೊತ್ತಾಗುತ್ತಿದೆ. ಸ್ಥಳೀಯ ನಿವಾಸಿಗಳು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಮಕ್ಕಳ ಕಲ್ಯಾಣ ಕಾರ್ಯಕರ್ತರಿಗೆ ಈ ಬಗ್ಗೆ ತಿಳಿಸಲಾಗಿದೆ. ಇನ್ನು ರೈಲ್ವೆ ಪೊಲೀಸರು ಹೇಳುವ ಪ್ರಕಾರ, ಜನರು ನೋಡುವ ಮುನ್ನವೇ ಆಕೆ ಮೃತಪಟ್ಟಿದ್ದಾರೆ.['ಕೋಡ್ ಬ್ಲ್ಯೂ' ಘೋಷಣೆ ಮಾಡಿದ ಆ ಕ್ಷಣ ನಡೆದಿತ್ತು ಪವಾಡ!]
ಮಗುವಿಗೆ ಯಾವುದೇ ಗಾಯವಾಗಿಲ್ಲ ಆದ್ದರಿಂದ ಅದನ್ನು ಉಳಿಸುವ ಸಲುವಾಗಿಯೇ ಅವುಚಿಕೊಂಡಿರುವ ಸಾಧ್ಯತೆ ಇದೆ. ಆಕೆಗೆ ಗಾಯವಾದ ಸಂದರ್ಭದಲ್ಲಿ ಪ್ರಜ್ಞೆ ಇತ್ತು ಎಂಬುದು ತಿಳಿಯುತ್ತದೆ. ಏಕೆಂದರೆ ಬಿಸ್ಕೆಟ್ ಪಾಕೆಟ್ ತೆಗೆದು ಮಗುವಿಗೆ ಕೊಟ್ಟಿದ್ದಾರೆ. ಎದೆಹಾಲು ಕುಡಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.[ಮಗಳು ಬರೆದ ಲೇಖನ ಓದಿ ಅಪ್ಪನ ಕಣ್ಣಲ್ಲಿ ಅಶ್ರುಧಾರೆ!]
ಆ ಮಗುವನ್ನು ತಾಯಿಯಿಂದ ಬೇರೆ ಮಾಡುವಾಗ ವಿಪರೀತ ಅತ್ತಿದೆ. ಈ ದೃಶ್ಯ ಕಂಡವರಿಗೆ ಮನಸ್ಸು ಕರಗಿದೆ. ಇಲ್ಲಿಗೆ ಎಲ್ಲವೂ ಮುಗಿದಿಲ್ಲ. ಸರಕಾರಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿದ್ದಾರೆ. ನಿಯಮಗಳ ಪ್ರಕಾರ ಹತ್ತು ರುಪಾಯಿ ಪ್ರವೇಶ ಶುಲ್ಕ ನೀಡಬೇಕು. ಆ ಮಗು ಹೇಗೆ ಕೊಡೋದಿಕ್ಕೆ ಸಾಧ್ಯ? ಅಲ್ಲಿನ ವಾರ್ಡ್ ಬಾಯ್ ತರುಣ್ ತಿವಾರಿ ಆ ದುಡ್ಡನ್ನು ನೀಡಿದ್ದಾರೆ.
ಆ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಆಕೆಯ ಪರ್ಸ್ ನಲ್ಲಿ ಜ್ಯುವೆಲರಿ ಮಳಿಗೆಯೊಂದರ ವಿಳಾಸ ಸಿಕ್ಕಿದೆಯಂತೆ. ಆ ಮಹಿಳೆಯ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿಕೊಂಡಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications