ಚಂಬಲ್ ನದಿ- ಸ್ನಾನ ಮಾಡುತ್ತಿದ್ದಾಗ 10 ವರ್ಷದ ಬಾಲಕನನ್ನು ನುಂಗಿದ ಮೊಸಳೆ
ಶಿಯೋಪುರ ಜುಲೈ 12: ಮಧ್ಯಪ್ರದೇಶದ ಶಿಯೋಪುರದಲ್ಲಿ ಅಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಚಂಬಲ್ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ 10 ವರ್ಷದ ಬಾಲಕನನ್ನು ಮೊಸಳೆ ನುಂಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಸೋಮವಾರ ಬೆಳಗ್ಗೆ ಚಂಬಲ್ ನದಿಯಲ್ಲಿ ಸ್ನಾನಕ್ಕೆ ತೆರಳುತ್ತಿದ್ದ ವೇಳೆ ಮೊಸಳೆ ಬಾಲಕನ ಮೇಲೆ ದಾಳಿ ಮಾಡಿದೆ. ಮೊಸಳೆ ಬಾಲಕನನ್ನು ನದಿಗೆ ಎಳೆದೊಯ್ದಿದೆ. ಬಳಿಕ ಬಾಲಕನನ್ನು ನುಂಗಿದೆ ಎಂದು ಹೇಳಲಾಗುತ್ತಿದೆ. ಸ್ಥಳದಲ್ಲಿದ್ದ ಸ್ಥಳೀಯರು ಕೂಡಲೇ ಆತನ ಕುಟುಂಬ ಹಾಗೂ ಸಂಬಂಧಿಕರಿಗೆ ಕರೆ ಮಾಡಿ ದೊಣ್ಣೆ, ಹಗ್ಗ ಹಾಗೂ ಬಲೆಯಿಂದ ಮೊಸಳೆಯನ್ನು ಹಿಡಿದಿದ್ದಾರೆ. ಬಳಿಕ ಮೊಸಳೆಯನ್ನು ನದಿಯಿಂದ ಹೊರಗೆ ಎಳೆದಂತಿದ್ದಾರೆ.

ಅಷ್ಟರಲ್ಲಿ ಘಟನೆಯ ಬಗ್ಗೆ ಮಾಹಿತಿ ಪಡೆದ ಅಲಿಗೇಟರ್ ವಿಭಾಗದ ತಂಡ ಮತ್ತು ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಎರಡೂ ತಂಡಗಳು ಮೊಸಳೆಯನ್ನು ಗ್ರಾಮಸ್ಥರ ಹಿಡಿತದಿಂದ ರಕ್ಷಿಸಲು ಯತ್ನಿಸಿದವು. ಆದರೆ, ಸಂಜೆಯವರೆಗೂ ಬಾಲಕನ ಕುಟುಂಬಸ್ಥರು ಇದಕ್ಕೆ ಒಪ್ಪಿರಲಿಲ್ಲ. 10 ವರ್ಷದ ಮಗುವಿನ ಕುಟುಂಬಸ್ಥರು ಮೊಸಳೆಯ ಹೊಟ್ಟೆಯಲ್ಲಿ ಮಗು ಜೀವಂತವಾಗಿರಬಹುದೆಂಬ ನಿರೀಕ್ಷೆಯಲ್ಲಿದ್ದರು. ಮಗುವನ್ನು ಉಗುಳಿದಾಗ ಮಾತ್ರ ಮೊಸಳೆಯನ್ನು ಬಿಡುತ್ತೇವೆ ಎಂದು ಒತ್ತಾಯಿಸಿದರು.

ರಘುನಾಥಪುರ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ವೀರ್ ಸಿಂಗ್ ತೋಮರ್ ಪ್ರಕಾರ, "ಬಾಲಕ ಸ್ನಾನ ಮಾಡುವಾಗ ನದಿಯ ಆಳಕ್ಕೆ ಹೋದನು. ಮಗುವನ್ನು ಮೊಸಳೆ ನುಂಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ನಂತರ ಬಲೆ ಮತ್ತು ಕೋಲುಗಳನ್ನು ಬಳಸಿ ಮೊಸಳೆಯನ್ನು ಹಿಡಿದಿದ್ದಾರೆ. ಅಲಿಗೇಟರ್ ಇಲಾಖೆ ಈ ವಿಷಯದಲ್ಲಿ ಕ್ರಮವನ್ನು ಪ್ರಾರಂಭಿಸಿದೆ. ಬಳಿಕ ಪೊಲೀಸ್ ಅಧಿಕಾರಿಗಳು ಹಾಗೂ ಅಲಿಗೇಟರ್ ಇಲಾಖೆ ಮನವೊಲಿಸಿ ಗ್ರಾಮಸ್ಥರು ಮೊಸಳೆಯನ್ನು ಬಿಡಿಸಿದ್ದಾರೆ.
Recommended Video
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications