ಬಾವ-ಬಾಮೈದ ನಡುವೆ ಕಿತ್ತಾಟಕ್ಕೆ ಕಿಚ್ಚು ಹಚ್ಚಿದ ಕಾಂಗ್ರೆಸ್
ಭೋಪಾಲ್, ನವೆಂಬರ್ 05: ಮಧ್ಯಪ್ರದೇಶದಲ್ಲಿ ಮೋದಿ ಬಲದಿಂದ ಶಿವರಾಜ್ ಸಿಂಗ್ ಮತ್ತೊಮ್ಮೆ ಮಹಾರಾಜನಂತೆ ಅಧಿಕಾರ ಪಡೆಯಬಹುದು ಎಂಬ ವರದಿಗಳು ಬರುತ್ತಿದ್ದಂತೆ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ. ಶಿವರಾಜ್ ಸಿಂಗ್ ಸೋಲಿಸಲು ಅವರ ಬಾಮೈದ(ಹೆಂಡತಿ ತಮ್ಮ) ಸಂಜಯ್ ಸಿಂಗ್ ರನ್ನು ಕರೆ ತಂದಿದೆ.
ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರ ಯೋಜನೆಯಂತೆ, ಸಂಜಯ್ ಸಿಂಗ್ ರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಂಡು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಅವರನ್ನು ಕೆಡವಲು ಸಿದ್ಧತೆ ನಡೆಸಲಾಗಿದೆ. ಆದರೆ, ಕಾಂಗ್ರೆಸ್ ತಂತ್ರಗಾರಿಕೆಯಲ್ಲಿ ಸಂಜಯ್ ಸಿಂಗ್ ಕೇವಲ ಮಧ್ಯವರ್ತಿಯಾಗುವ ಸಾಧ್ಯತೆಯೂ ಇದೆ. ಈ ಮುಂಚೆ ಬಿಜೆಪಿಯಲ್ಲಿದ್ದ ಸಂಜಯ್ ಸಿಂಗ್ ಅವರು ಪಕ್ಷ ಬದಲಾಯಿಸಿರುವುದು ಭಾರಿ ಸಂಚಲನ ಉಂಟು ಮಾಡುವ ಸಾಧ್ಯತೆಗಳಿವೆ.
ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಧಾರ್ಮಿಕ, ಆಧಾತ್ಮ ಮುಖಂಡರ ಭೀತಿ!
ಶಿವರಾಜ್ ಸಿಂಗ್ ಅವರ ಪಾರ್ಟ್ನರ್ : ಸಿಎಂ ಶಿವರಾಜ್ ಸಿಂಗ್ ಅವರ ಅನೇಕ ಯೋಜನೆಗಳು, ವ್ಯಾಪಾರ, ವಹಿವಾಟುಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಂಜಯ್ ಸಿಂಗ್ ಪಾಲುದಾರರಾಗಿದ್ದು, ಶಿವರಾಜ್ ಅವರ ವ್ಯವಹಾರದ ಒಳಹೊರಗನ್ನು ಬಲ್ಲವರಾಗಿದ್ದಾರೆ.
ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಸಿಎಂ ಪುತ್ರ!
ಶಿವರಾಜ್ ಸಿಂಗ್ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಂಜಯ್ ಸಿಂಗ್ ಮಸಾನಿ ಹೆಸರು ಕೂಡಾ ಕೇಳಿ ಬಂದಿತ್ತು. ಆದರೆ, ಈ ವಿಷಯ ಗೊತ್ತಿದ್ದು ಗೊತ್ತಿಲ್ಲದ್ದಂತೆ ದಿಗ್ವಿಜಯ್ ಸಿಂಗ್, ಕೆಕೆ ಮಿಶ್ರಾ ಅವರು ನಡೆದುಕೊಂಡಿದ್ದು, ಕಮಲನಾಥ್ ಪಕ್ಕದಲ್ಲಿ ಸಂಜಯ್ ಅವರನ್ನು ಕೂರಿಸಿದ್ದಾರೆ.

ಬಿಜೆಪಿಯಲ್ಲಿದ್ದ ಸಂಜಯ್ ಸಿಂಗ್
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಅವರನ್ನು ಕೆಡವಲು ಸಿದ್ಧತೆ ನಡೆಸಲಾಗಿದೆ. ಆದರೆ, ಕಾಂಗ್ರೆಸ್ ತಂತ್ರಗಾರಿಕೆಯಲ್ಲಿ ಸಂಜಯ್ ಸಿಂಗ್ ಕೇವಲ ಮಧ್ಯವರ್ತಿಯಾಗುವ ಸಾಧ್ಯತೆಯೂ ಇದೆ. ಈ ಮುಂಚೆ ಬಿಜೆಪಿಯಲ್ಲಿದ್ದ ಸಂಜಯ್ ಸಿಂಗ್ ಅವರು ಪಕ್ಷ ಬದಲಾಯಿಸಿರುವುದು ಭಾರಿ ಸಂಚಲನ ಉಂಟು ಮಾಡುವ ಸಾಧ್ಯತೆಗಳಿವೆ.

ಸಂಜಯ್ ಸಿಂಗ್ ಮಸಾನಿ ಬೇಡಿಕೆ ಏನಿದೆ?
ಮೂಲಗಳ ಪ್ರಕಾರ, ಮಸಾನಿ ಅವರು ಬರಾಸಿವಾನಿ ಕ್ಷೇತ್ರದಿಂದ ಅಸೆಂಬ್ಲಿ ಟಿಕೆಟ್ ಬಯಸಿದ್ದಾರೆ. ಆದರೆ, ಬಿಜೆಪಿಯಲ್ಲಿ ಈ ಬೇಡಿಕೆಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಮುಖ್ಯವಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಅವರೇ ಟಿಕೆಟ್ ಕೈತಪ್ಪಿಸಿದರು ಎಂಬ ಅಪವಾದವಿದೆ.

ಮಸಾನಿ ಸೋದರಿ ಕೋಕಿಲಾ ಪಾತ್ರವೇನು?
ಮಸಾನಿ ಅವರ ಸೋದರಿ ಕೋಕಿಲಾ(ಶಿವರಾಜ್ ಸಿಂಗ್ ಚೌಹಾಣ್ ಅವರ ಪತ್ನಿ ಸಾಧನಾ ಸಿಂಗ್ ಅವರ ಹಿಂದಿನ ಹೆಸರು) ಅವರು ಆರ್ಥಿಕ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು. ಶಿವರಾಜ್ ಸಿಂಗ್ ಹಾಗೂ ಮಸಾನಿ ನಡುವಿನ ಆರ್ಥಿಕ ವ್ಯವಹಾರ ಹದಗೆಡಲು ಕೋಕಿಲಾ ಅವರೇ ಕಾರಣ ಎಂಬ ಸುದ್ದಿಯೂ ಇದೆ. ಈಗ ರಾಜಕೀಯ ಎದುರಾಳಿಗಳಾಗಿದ್ದಾರೆ.

ಟ್ಯಾಕ್ಸಿ ಚಾಲಕನಾಗಿದ್ದ ಮಸಾನಿ
ದಿವಂಗತ ಪ್ರಮೋದ್ ಮಹಾಜನ್ ಅವರು ಕೇಂದ್ರ ಸಚಿವರಾಗಿದ್ದ ಕಾಲದಲ್ಲಿ ಚೌಹಾಣ್ ಅವರು ಲೋಕಸಭಾ ಸದಸ್ಯರಾಗಿದ್ದರು. 8-10 ಟ್ಯಾಕ್ಸಿಗಳನ್ನು ನಿಭಾಯಿಸುತ್ತಿದ್ದರು.
ಆದರೆ, ನಂತರ ಮಹಾಜನ್ ಅವರ ಸಹಾಯಕ ವಿವೇಕ್ ಮೊಯಿತ್ರಾ ಜತೆ ಮನಸ್ತಾಪ ಉಂಟಾಗಿ, ಮಧ್ಯಪ್ರದೇಶದ ರಾಜಕೀಯದತ್ತ ಮುಖ ಮಾಡಿದರು. ಶಿವರಾಜ್ ಅವರು ಸಿಎಂ ಆದ ಬಳಿಕ ಸರ್ಕಾರದ ಟೆಂಡರ್, ಬಿಡ್ಡಿಂಗ್ ನಲ್ಲಿ ಮಸಾನಿ ಕೈ ಹಾಕತೊಡಗಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications