ಸ್ಟೇಷನಿಗೆ ಬೆಂಕಿ ಹಚ್ಚಿ: ಮಧ್ಯಪ್ರದೇಶ ಕಾಂಗ್ರೆಸ್ ಮುಖಂಡರ ಪ್ರಚೋದನೆ?
ಮಧ್ಯಪ್ರದೇಶದಲ್ಲಿ ರೈತರ ಹಿಂಸಾತ್ಮಕ ಹೋರಾಟದ ಹಿಂದೆ ವಿರೋಧ ಪಕ್ಷ ಕಾಂಗ್ರೆಸ್ ಮುಖಂಡರ 'ಕೈ'ವಾಡವಿದೆಯೇ? ಇದಕ್ಕೆ ಪುಷ್ಟಿ ನೀಡುವ ವಿಡಿಯೋ ಒಂದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ಭೋಪಾಲ್, ಜೂ 10: ಮಧ್ಯಪ್ರದೇಶದಲ್ಲಿ ರೈತರ ಹಿಂಸಾತ್ಮಕ ಹೋರಾಟದ ಹಿಂದೆ ವಿರೋಧ ಪಕ್ಷ ಕಾಂಗ್ರೆಸ್ ಮುಖಂಡರ 'ಕೈ'ವಾಡವಿದೆಯೇ? ಇದಕ್ಕೆ ಪುಷ್ಟಿ ನೀಡುವ ವಿಡಿಯೋ ಒಂದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ಮಧ್ಯಪ್ರದೇಶ ಕಾಂಗ್ರೆಸ್ ಘಟಕದ ಇಬ್ಬರು ಮುಖಂಡರು, ಪೊಲೀಸ್ ಸ್ಟೇಷನಿಗೆ ಬೆಂಕಿ ಹಚ್ಚಿ ಎಂದು ಪ್ರಚೋದಿಸುವ ದೃಶ್ಯದ ತುಣುಕು ಬಹಿರಂಗಗೊಂಡಿದೆ. ಆದರೆ, ರೈತರ ಹಿಂಸಾತ್ಮಕ ಹೋರಾಟಕ್ಕೂ ನಮಗೂ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮಧ್ಯಪ್ರದೇಶದ ಕರೈನಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಶಕುಂತಳಾ ಖಾತಿಕ್, ಸ್ಥಳೀಯ ಪೊಲೀಸ್ ಸ್ಟೇಷನಿಗೆ ಬೆಂಕಿ ಹಚ್ಚಿ ಎಂದು ಶಿವಪುರಿಯಲ್ಲಿ ಹೇಳಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಪೊಲೀಸರ ಜೊತೆ ತೀವ್ರ ವಾಗ್ವಾದ ನಡೆಸುತ್ತಿದ್ದ ಈ ಶಾಸಕಿಯನ್ನು ಅಲ್ಲಿಂದ ಕಳುಹಿಸುವಲ್ಲಿ ಪೊಲೀಸರು ತೀವ್ರ ತ್ರಾಸ ಪಡಬೇಕಾಯಿತು. ಠಾಣೆಪೇ ಆಗ್ ಲಗಾದೋ ಎಂದು ಎರಡೆರಡು ಬಾರಿ ಶಾಸಕಿ ಶಕುಂತಳಾ, ಪ್ರತಿಭಟನಾಕಾರರಿಗೆ ಪ್ರಚೋದಿಸುತ್ತಿದ್ದದ್ದು ಸೆರೆಯಾಗಿದೆ.
ಇನ್ನೊಂದು ವಿಡಿಯೋದಲ್ಲಿ ಕಾಂಗ್ರೆಸ್ಸಿನ ರಾವ್ ಕ್ಷೇತ್ರದ ಶಾಸಕ ಜೀತು ಪತ್ವಾರಿ ತನ್ನ ಅಪಾರ ಬೆಂಬಲಿಗರೊಂದಿಗೆ ಬಂದು, ಎಪಿಎಂಸಿ ಮಾರುಕಟ್ಟೆಯನ್ನು ಧ್ವಂಸಗೊಳಿಸುವ ದೃಶ್ಯಕೂಡಾ ವಿಡಿಯೋದಲ್ಲಿ ಸೆರೆಯಾಗಿದೆ.
ನಾವು ಮಹಾತ್ಮ ಗಾಂಧಿಯವರ ಸಿದ್ದಾಂತವನ್ನು ಪಾಲಿಸಿಕೊಂಡು ಬರುವವರು, ಹಿಂಸಾತ್ಮಕ ಹೋರಾಟದಲ್ಲಿ ನಮಗೆ ನಂಬಿಕೆಯಿಲ್ಲ ಎಂದು ಮಧ್ಯಪ್ರದೇಶ ಅಸೆಂಬ್ಲಿಯ ವಿರೋಧ ಪಕ್ಷದ ನಾಯಕ ಅಜಯ್ ಸಿಂಗ್, ಘಟನೆಯಲ್ಲಿ ಕಾಂಗ್ರೆಸ್ ಕೈವಾಡವನ್ನು ತಳ್ಳಿಹಾಕಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications