Get Updates
Get notified of breaking news, exclusive insights, and must-see stories!

ಇದೇ ಮೊದಲು: ರಾಜ್ಯಪಾಲರ ಮೇಲೆ ಎಫ್ಐಆರ್ ದಾಖಲು

ಭೋಪಾಲ್, ಫೆ.24: ಭಾರತದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಪಾಲರೊಬ್ಬರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿ ಇತಿಹಾಸ ನಿರ್ಮಿಸಿದ್ದಾರೆ. ಮಧ್ಯಪ್ರದೇಶ ರಾಮ್ ನರೇಶ್ ಯಾದವ್ ಅವರು ನೇಮಕಾತಿ ಹಗರಣದಲ್ಲಿ ಸಿಲುಕಿದ್ದಾರೆ.

ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ(Vyapam) ನೇಮಕಾತಿ ಹಗರಣದ ಅವ್ಯವಹಾರದಲ್ಲಿ ರಾಜ್ಯಪಾಲ ರಾಮ್‌ ನರೇಶ್‌ ಯಾದವ್‌ ಅವರು ಭಾಗಿಯಾಗಿರುವ ಬಗ್ಗೆ ಸಾಕಷ್ಟು ಪುರಾವೆ ಸಿಕ್ಕಿದೆ. ಅವರ ವಿರುದ್ಧ ಸ್ಪೆಷಲ್‌ ಟಾಸ್ಕ್ ಫೊರ್ಸ್‌ ಎಫ್ಐಆರ್‌ ದಾಖಲಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಆಶೀಶ್ ಖಾರೆ ಹೇಳಿದ್ದಾರೆ.

MP governor being booked for Vyapam scam: Police
ಭ್ರಷ್ಟಾಚಾರ ತಡೆ ಖಾಯ್ದೆ ಅಡಿಯಲ್ಲಿ ಯಾದವ್‌ ಅವರ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ. ಹೈಕೋರ್ಟ್ ನಿರ್ದೇಶನದಂತೆ ವಿಶೇಷ ತನಿಖಾ ತಂಡ(ಎಸ್ ಐಟಿ) ಹಾಗೂ ಸ್ಪೆಷಲ್ ಟಾಸ್ಕ್ ಫೋರ್ಸ್ ತನಿಖೆ ನಡೆಸಲಿದೆ ಎಂದು ಖಾರೆ ತಿಳಿಸಿದರು.

ಎಸ್ ಐಟಿ ಮುಖ್ಯಸ್ಥ ಚಂದ್ರೇಶ್ ಭೂಷಣ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಮುಖ್ಯಸ್ಥ ದಿಗ್ವಿಜಯ್ ಸಿಂಗ್ ಅವರು ಕೂಡಾ ಈ ಬಗ್ಗೆ ದೂರು ನೀಡಿದ್ದರು. ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ. ಇಲ್ಲಿ ತನಕ ಈ ಹಗರಣದಲ್ಲಿ 539 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. 218ಕ್ಕೂ ಅಧಿಕ ಜನ ನಾಪತ್ತೆಯಾಗಿದ್ದಾರೆ.

ಐಎಎನ್ಎಸ್

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+