ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷನ ಶೂ ಲೇಸು ಕಟ್ಟಿದ ಶಾಸಕ!
ಸಿಯೋನಿ(ಮಧ್ಯಪ್ರದೇಶ), ಜೂನ್ 25: ಮಧ್ಯಪ್ರದೇಶದ ಸಿಯೋನಿಯಲ್ಲಿ ಇಲ್ಲಿನ ಶಾಸಕ ರಜನೀಶ್ ಸಿಂಗ್ ಅವರು ಕಾಂಗ್ರೆಸ್ ರಾಜ್ಯಾಧ್ಯಕ್ಷ ಕಮಲ್ ನಾಥ್ ಅವರ ಶೂ ಲೇಸು ಕಟ್ಟಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ರಜನೀಶ್ ಸಿಂಗ್, 'ಇದರಲ್ಲಿ ಯಾವ ಅಪರಾಧವೂ ಇಲ್ಲ. ನನಗಂತೂ ಮುಜುಗರವಿಲ್ಲ. ಹಿರಿಯರಿಗೆ ನೀಡುವ ಗೌರವ ಇದು ಎಂದು ನಾನು ಭಾವಿಸಿದ್ದೇನೆ' ಎಂದಿದ್ದಾರೆ.
ಕಮಲ್ ನಾಥ್ ಅವರ ಶೂ ಲೇಸನ್ನು ರಜನೀಶ್ ಕಟ್ಟಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಹಲವರು ಅವರನ್ನು ವ್ಯಂಗ್ಯ ಮಾಡಿ ನಕ್ಕಿದ್ದರು.

ಆದರೆ ಈ ಯಾವುದರ ಕುರಿತೂ ತಲೆ ಕೆಡಿಸಿಕೊಳ್ಳದ ರಜನೀಶ್ ಸಿಂಗ್, "ಕಮಲ್ ನಾಥ್ ಅವರು ನನಗೆ ತಂದೆಯಿದ್ದಂತೆ. ನಾನು ಅವರಿಗೆ ಸಾಕಷ್ಟು ಗೌರವ ನೀಡುತ್ತೇನೆ. ನನ್ನ ಶಾಲಾ ದಿನಗಳಿಂದಲೂ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆಯುತ್ತಿದ್ದೇನೆ. ಅವರು ನನ್ನ ಕುಟುಂಬಕ್ಕೆ ಬಹಳ ಆತ್ಮೀಯರು" ಎಂದಿದ್ದಾರೆ.
ಮಾಧ್ಯಮಗಳು ಈ ಕುರಿತು ಅಪಪ್ರಚಾರ ಮಾಡಿವೆಯಷ್ಟೇ. ಇವನ್ನು ಒಳ್ಳೆಯ ದೃಷ್ಟಿಯಿಂದ ನೋಡಿದರೆ ಇದು ಒಳ್ಳೆಯ ನಡೆಯೇ ಎಮದು ಅವರು ಸಮಜಾಯಿಷಿ ನೀಡಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications