ಗ್ರಾಮೀಣ ಜನರಿಗೆ ಆರ್ ಆರ್ ಬಿ ಟಾನಿಕ್: ರಾಜೀವ್ ಗೌಡ
ನವದೆಹಲಿ, ಏ. 29: ರಾಜ್ಯಸಭಾ ಸದಸ್ಯ ಪ್ರೋ. ರಾಜೀವ್ ಗೌಡ ರಾಜ್ಯಸಭೆಯಲ್ಲಿ ರಿಜನಲ್ ರೂರಲ್ ಬಿಲ್ [ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಬಿಲ್] ಕುರಿತಾಗಿ ಮಾತನಾಡಿದರು. ಗ್ರಾಮೀಣ ಬ್ಯಾಂಕ್ ಗಳು ಪ್ರಖರವಾಗಿ ಇರದಿದ್ದರೆ ರೈತರ ಬದುಕು ಬದಲಾಗದು ಎಂದು ರಾಜೀವ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಲೋಕಸಭೆಯಲ್ಲಿ ಪಾಸ್ ಆಗಿದ್ದ ಬಿಲ್ ನ್ನು ಮಂಗಳವಾರ ರಾಜ್ಯಸಭೆಯೂ ಅನುಮೋದನೆ ಮಾಡಿದೆ. ಈ ವೇಳೆ ಬಿಲ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ರಾಜೀವ್ ಗೌಡ ಅನೇಕ ಅಂಶಗಳ ಮೇಲೆ ಬೆಳಕು ಚೆಲ್ಲಿದರು.[ಸೂಟು ಬೂಟಿನ ಮೋದಿ ಸರ್ಕಾರಕ್ಕೆ ಧಿಕ್ಕಾರ]

ಭಾರತೀಯ ರೈತರಿಗೆ ನಿಜವಾಗಿ ಎಲ್ಲ ರೀತಿಯ ಸೌಲಭ್ಯ ದೊರೆಯಲು ಈ ಬಿಲ್ ಅನುಮೋದನೆಗೆ ಒಳಪಟ್ಟಿದೆ. ಮೊದಲು ರೈತರ ಹೊಸ ಯೋಜನೆಗಳಿಗೆ ಸಹಕಾರ ನೀಡಲು ಬ್ಯಾಂಕ್ ಗಳು ಮುಂದಾಗಬೇಕು. ಈ ಕಾನೂನು ಜಾರಿಯಾದರೆ ಸ್ಥಳೀಯ ಅಥವಾ ಗ್ರಾಮೀಣ ಬ್ಯಾಂಕ್ ಗಳಿಗೆ ನಿರ್ದಿಷ್ಟ ಮೊತ್ತದ ಜವಾಬ್ದಾರಿಯನ್ನು ನೀಡುತ್ತದೆ. ಕಾನೂನಿಗೆ ಅನುಗುಣವಾಗಿ ಬ್ಯಾಂಕ್ ಗಳು ಗ್ರಾಮೀಣ ಅಭಿವೃದ್ಧಿಯಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಬ್ಯಾಂಕ್ ಗಳಲ್ಲಿ ಹೂಡಿಕೆ ಮಾಡಿರುವ ಷೇರುಗಳ ಪ್ರಮಾಣವೂ ಏರಿಕೆಯಾಗಲಿದೆ. ಇದು ವ್ಯವಸ್ಥೆಗೆ ಮತ್ತಷ್ಟು ಭದ್ರತೆ ಒದಗಿಸಲಿದೆ. ಒಟ್ಟು ಶೇ. 51 ರಷ್ಟು ಷೇರುಗಳು ಸರ್ಕಾರದ ಒಡೆತನದಲ್ಲಿ ಬಂದರೆ ಉಳಿದ ಶೇ. 49 ಷೇರುಗಳನ್ನು ಜನರು ಖರೀದಿ ಮಾಡಲಿದ್ದಾರೆ ಎಂದು ಗೌಡ ತಿಳಿಸಿದರು.[5 ಕಂಪನಿಗಳಿಗೆ ಅಂತಿಮ ಮೊಳೆ ಹೊಡೆದ ಕೇಂದ್ರ ಸರಕಾರ]
ಕಾನೂನಿಗೆ ಸರ್ಕಾರದ ಯಾವ ಅಡೆ ತಡೆಗಳು ಇರಬಾರದು. ಇದೊಂದು ಸ್ವತಂತ್ರ ಸಂಸ್ಥೆಯಾಗಿ ಕೆಲಸ ಮಾಡಬೇಕು. ದೇಶದ ಹೊಸ ನೀತಿ ರೂಪಣೆಗೆ ಈ ಮಾದರಿ ನಿರ್ದೇಶನ ನೀಡುವಂತೆ ಆಗಬೇಕು. ಜತೆಗೆ ಜನರಿಗೆ ಸೌಲಭ್ಯಗಳನ್ನು ತಲುಪಿಸುವ ದಾರಿಯಾಗಿ ಬದಲಾಗಬೇಕು ಎಂದು ಹೇಳಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications