ಕೇರಳ ಎನ್ ಡಿಎ ಉಪಾಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ನೇಮಕ
ನವದೆಹಲಿ, ಸೆ.26 : ಕೇರಳ ಭಾಗದ ಎನ್ಡಿಎ ಕೂಟಕ್ಕೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕಲ್ಲಿಕೋಟೆಯಲ್ಲಿ ನಡೆದ ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷ ಕುಮ್ಮನಂ ರಾಜಶೇಖರನ್ ಅವರ ಒಳಗೊಂಡ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದಿಂದ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ಕೇರಳ ಎನ್ ಡಿಎ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದ ರಾಜೀವ್ ಚಂದ್ರಶೇಖರ್, ''ಕೇರಳ ರಾಜಕೀಯ ವ್ಯವಸ್ಥೆಯಲ್ಲಿ ಪರ್ಯಾಯ ಶಕ್ತಿ ಉದಯಿಸಬೇಕೆಂಬ ನಿರ್ಧಾರಕ್ಕೆ ಬದ್ಧನಾಗಿದ್ದೇನೆ.['ಕಾನೂನು ತಂತ್ರಗಾರಿಕೆಯಲ್ಲಿ ದಾರಿ ತಪ್ಪಿತು ರಾಜ್ಯ ಸರ್ಕಾರ']
ಅದು ಲಕ್ಷಾಂತರ ಮಂದಿ ತುಳಿತಕ್ಕೊಳಪಟ್ಟವರು ಮತ್ತು ಯುವ ಜನತೆಯ ಅಭಿವೃದ್ಧಿಗೆ ಸಮಾನ ಅವಕಾಶ ನೀಡುವಂತಾಗಿರಬೇಕು. ಅಲ್ಲದೆ, ಎನ್ಡಿಎ ಕೇರಳದಲ್ಲಿ ಮತ ಹಂಚಿಕೆ ಮತ್ತು ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಿದೆ ಎಂದು ಹೇಳಿದರು.












Click it and Unblock the Notifications