Get Updates
Get notified of breaking news, exclusive insights, and must-see stories!

MS Swaminathan: ಹಸಿರು ಕ್ರಾಂತಿಯ ಪಿತಾಮಹ, ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ನಿಧನ

ಚೆನ್ನೈ, ಸೆಪ್ಟೆಂಬರ್‌ 28: ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂಎಸ್ ಸ್ವಾಮಿನಾಥನ್ ಅವರು ಗುರುವಾರ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಸ್ವಾಮಿನಾಥನ್ ಅವರು ಹೆಚ್ಚು ಇಳುವರಿ ನೀಡುವ ಭತ್ತದ ತಳಿಗಳನ್ನು ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದು ಭಾರತದಲ್ಲಿ ಕಡಿಮೆ ಆದಾಯವನ್ನು ಹೊಂದಿರುವ ರೈತರು ಹೆಚ್ಚಿನ ಇಳುವರಿಯನ್ನು ಉತ್ಪಾದಿಸಲು ಸಹಾಯ ಮಾಡಿತು.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಳಗ್ಗೆ 11.15ರ ವೇಳೆಗೆ ತೆನಾಂಪೇಟೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.

MS Swaminathan, Father of Green Revolution, Agricultural Scientist passes away

ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದ ಅವರು, 1960 ರ ದಶಕದಲ್ಲಿ ಹೆಚ್ಚು ಇಳುವರಿ ನೀಡುವ ಗೋಧಿ ಮತ್ತು ಅಕ್ಕಿ ತಳಿಗಳನ್ನು ಭಾರತಕ್ಕೆ ಪರಿಚಯಿಸಿದರು. ಆ ಸಂದರ್ಭದಲ್ಲಿ ದೇಶವು ಭೀಕರವಾದ ಕ್ಷಾಮವನ್ನು ಎದುರಿಸುತ್ತಿತ್ತು.

ಆಲೂಗಡ್ಡೆ, ಗೋಧಿ, ಅಕ್ಕಿ ಮತ್ತು ಸೆಣಬಿನ ತಳಿಶಾಸ್ತ್ರದ ಮೇಲೆ ಸಂಶೋಧನೆ ಮೂಲಕ 1949 ರಲ್ಲಿ ಸ್ವಾಮಿನಾಥನ್ ಅವರು ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಸ್ವಾಮಿನಾಥನ್ ಅವರು ನಾರ್ಮನ್ ಬೋರ್ಲಾಗ್ ಮತ್ತು ಇತರ ವಿಜ್ಞಾನಿಗಳೊಂದಿಗೆ ಸೇರಿ ಹೆಚ್ಚಿನ ಇಳುವರಿ ಕೊಡುವ ಗೋಧಿ ಬೀಜಗಳನ್ನು ಅಭಿವೃದ್ಧಿಪಡಿಸಿದರು.

MS Swaminathan, Father of Green Revolution, Agricultural Scientist passes away

ಸ್ವಾಮಿನಾಥನ್ ಅವರು ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರೊಂದಿಗೆ ಕೃಷಿ ನೀತಿಗಳನ್ನು ರೂಪಿಸಲು ಕೆಲಸ ಮಾಡಿದರು.

ಅವರು ರೋಮ್‌ನಲ್ಲಿ 1974 ರ ವಿಶ್ವಸಂಸ್ಥೆಯ ವಿಶ್ವ ಆಹಾರ ಕಾಂಗ್ರೆಸ್ ಸೇರಿದಂತೆ ಹಲವಾರು ಪ್ರತಿಷ್ಠಿತ ಅಂತರರಾಷ್ಟ್ರೀಯ ಸಮ್ಮೇಳನಗಳ ಅಧ್ಯಕ್ಷತೆ ವಹಿಸಿದ್ದರು.

ಸ್ವಾಮಿನಾಥನ್ ಅವರು ವಿವಿಧ ಕೃಷಿ ಸಂಶೋಧನಾ ಪ್ರಯೋಗಾಲಯಗಳಲ್ಲಿ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ ಮತ್ತು ನಂತರ ಇಂಟರ್ನ್ಯಾಷನಲ್ ರೈಸ್ ರಿಸರ್ಚ್ ಸಂಸ್ಥೆಯ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 1979ರಲ್ಲಿ ಕೃಷಿ ಸಚಿವಾಲಯದ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

MS Swaminathan, Father of Green Revolution, Agricultural Scientist passes away

1988 ರಲ್ಲಿ, ಎಂಎಸ್ ಸ್ವಾಮಿನಾಥನ್ ಅವರು ಪ್ರಕೃತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಅಂತರರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 2019-2022 ರ ವರೆಗೆ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಮುಖ್ಯ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದ್ದಾರೆ.

1988 ರಲ್ಲಿ ಎಂಎಸ್‌ ಸ್ವಾಮಿನಾಥನ್ ರಿಸರ್ಚ್ ಫೌಂಡೇಶನ್ (MSSRF) ಅನ್ನು ಸ್ಥಾಪಿಸಿದರು. ಅವರ ಪುತ್ರಿ ಡಾ ಸೌಮ್ಯಾ ಸ್ವಾಮಿನಾಥನ್ ಅವರು ಜನವರಿಯಲ್ಲಿ MSSRF ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಸ್ವಾಮಿನಾಥನ್ ಅವರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಎಂಎಸ್‌ಎಸ್‌ಆರ್‌ಎಫ್‌ನ ಅಧ್ಯಕ್ಷೆ ಡಾ ಸೌಮ್ಯ ಸ್ವಾಮಿನಾಥನ್, ಅರ್ಥಶಾಸ್ತ್ರ ಪ್ರಾಧ್ಯಾಪಕಿರಾಗಿರುವ ಡಾ ಮಧುರಾ ಸ್ವಾಮಿನಾಥನ್ ಮತ್ತು ಪೂರ್ವ ಆಂಗ್ಲಿಯಾ ವಿಶ್ವವಿದ್ಯಾಲಯದಲ್ಲಿ ಲಿಂಗ ವಿಶ್ಲೇಷಣೆ ಮತ್ತು ಅಭಿವೃದ್ಧಿ ವಿಷಯದ ಉಪನ್ಯಾಸಕಿಯಾಗಿರುವ ನಿತ್ಯಾ ಸ್ವಾಮಿನಾಥನ್ ಅವರನ್ನು ಸ್ವಾಮಿನಾಥನ್‌ ಅಗಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+