ಬದರಿನಾಥ, ಕೇದಾರನಾಥ ಅಭಿವೃದ್ಧಿಗೆ 5 ಕೋಟಿ ದೇಣಿಗೆ ನೀಡಿದ ಮುಖೇಶ್ ಅಂಬಾನಿ
ಬದರಿನಾಥ, ಅ. 13: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಗುರುವಾರ ಬದರಿನಾಥ ಧಾಮ ಮತ್ತು ಕೇದಾರನಾಥ ಧಾಮಕ್ಕೆ ಭೇಟಿ ನೀಡಿ ಎರಡೂ ದೇಗುಲಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.
ವರದಿಗಳ ಪ್ರಕಾರ, ಈ ವೇಳೆ ಮುಖೇಶ್ ಅಂಬಾನಿ ದೇವಸ್ಥಾನಗಳ ಜಂಟಿ ಸಮಿತಿಯಾದ ಬದ್ರಿ-ಕೇದಾರ ದೇವಾಲಯ ಸಮಿತಿಗೆ (BKTC) 5 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ತಮ್ಮ ಸಂಗಡಿಗರೊಂದಿಗೆ ಮುಖೇಶ್ ಅಂಬಾನಿ ಹೆಲಿಕಾಪ್ಟರ್ನಲ್ಲಿ ಹಿಮಾಲಯದ ದೇವಸ್ಥಾನಕ್ಕೆ ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು ಎಂದು ಬದ್ರಿ-ಕೇದಾರ್ ದೇವಾಲಯ ಸಮಿತಿ ಉಪಾಧ್ಯಕ್ಷ ಕಿಶೋರ್ ಪನ್ವಾರ್ ತಿಳಿಸಿದ್ದಾರೆ.

ಅಂಬಾನಿ ಅವರು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ಅವರನ್ನು ಮದುವೆಯಾಗಲಿರುವ ರಾಧಿಕಾ ಮರ್ಚೆಂಟ್ ಅವರೊಂದಿಗೆ ಬದರಿನಾಥ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದೇವಾಲಯದ ಅಧಿಕಾರಿಗಳು ಮುಖೇಶ್ ಅಂಬಾನಿ ಜೊತೆಗೆ ನಡೆದುಕೊಂಡು ಹೋಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಅಂಬಾನಿ ಕಳೆದ ಕೆಲವು ವಾರಗಳಿಂದ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಅವರು ಕಳೆದ ತಿಂಗಳು ಮೂರು ಪ್ರಸಿದ್ಧ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು ಮತ್ತು ದೇವಾಲಯದ ಟ್ರಸ್ಟ್ಗಳಿಗೆ ಇದೇ ಮೊತ್ತವನ್ನು ದೇಣಿಗೆ ನೀಡಿದ್ದರು.

ಕೇರಳದ ಗುರುವಾಯೂರ್ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ರಿಲಯನ್ಸ್ ಮುಖ್ಯಸ್ಥರು ಕೃಷ್ಣನಿಗೆ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ 'ಅನ್ನದಾನ' ನಿಧಿಗೆ 1.51 ಕೋಟಿ ರೂಪಾಯಿ ದೇಣಿಗೆ ನೀಡಿದ್ದರು.
ಅದಕ್ಕೂ ಮುನ್ನ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅಂಬಾನಿ 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಸೆಪ್ಟೆಂಬರ್ನಲ್ಲಿ ಅವರು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್ಜಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು.
ಅಂಬಾನಿಯವರ ರಿಲಯನ್ಸ್ ಜಿಯೋ ಈ ವರ್ಷ ದೀಪಾವಳಿಯ ವೇಳೆಗೆ ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ಹಲವಾರು ಪ್ರಮುಖ ನಗರಗಳಲ್ಲಿ ಹೈ-ಸ್ಪೀಡ್ 5G ಟೆಲಿಕಾಂ ಸೇವೆಗಳನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಡಿಸೆಂಬರ್ 2023 ರ ವೇಳೆಗೆ ದೇಶಾದ್ಯಂತ ತನ್ನ ನೆಟ್ವರ್ಕ್ ಅನ್ನು ಪ್ರತಿ ಪಟ್ಟಣ, ಗ್ರಾಮ ಮತ್ತು ತಾಲೂಕಿಗೆ ವಿಸ್ತರಿಸಲು ಯೋಜಿಸುತ್ತಿದೆ.
ಜಿಯೋ 5G ಯ ಇತ್ತೀಚಿನ ಆವೃತ್ತಿಯನ್ನು ಹೊರತರಲಿದೆ, ಇದನ್ನು ಸ್ವತಂತ್ರ 5G ಎಂದು ಕರೆಯಲಾಗುತ್ತದೆ. 5ಜಿ ಮೂಲಸೌಕರ್ಯಕ್ಕೆ 2 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡಲು ಯೋಜಿಸಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications