ಕುಟುಂಬ ರಾಜಕೀಯ ಮುಂದುವರಿಕೆ: ಮುಲಾಯಂ ಸೊಸೆಗೆ ಟಿಕೆಟ್
ಲಕ್ನೋ(ಉತ್ತರಪ್ರದೇಶ), ಮಾರ್ಚ್ 27: ಸಮಾಜವಾದಿ ಪಕ್ಷ ಕುಟುಂಬ ರಾಜಕೀಯ ಮುಂದುವರೆಸಿದೆ. ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಭಾನುವಾರದಂದು ತಮ್ಮ ಕಿರಿಯ ಸೊಸೆ ಅಪರ್ಣಾ ಯಾದವ್ ಅವರಿಗೆ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದ್ದಾರೆ.
ಲಕ್ನೋ ವಿಧಾನಸಭಾ ಕ್ಷೇತ್ರದಿಂದ ಅಪರ್ಣಾ ಯಾದವ್ ಅವರು ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಸಮಾಜವಾದಿ ಪಕ್ಷದ ಪ್ರಧಾನ ವಕ್ತಾರ ಹಾಗೂ ಲೋಕೋಪಯೋಗಿ ಸಚಿವ ಶಿವಪಾಲ್ ಸಿಂಗ್ ಯಾದವ್ ಅವರು ಹೇಳಿಕೆ ನೀಡಿದ್ದಾರೆ. [ಉತ್ತರಪ್ರದೇಶದಲ್ಲಿ ಚುನಾವಣೆ ನಡೆದರೆ, ದಯನೀಯ ಸ್ಥಿತಿಗೆ ಕಾಂಗ್ರೆಸ್?]

ಅಪರ್ಣ ಅವರು ಹಿರಿಯ ಪತ್ರಕರ್ತ ಅರವಿಂದ್ ಸಿಂಗ್ ಬಿಶ್ತ್ ಅವರ ಪುತ್ರಿಯಾಗಿದ್ದು, ಸಾಮಾಜಿಕ ಕಾರ್ಯಗಳ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ಮುಲಾಯಂ ಸಿಂಗ್ ಅವರ ಪುತ್ರ ಅಖಿಲೇಶ್ ಯಾದವ್ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದರೆ, ಅವರ ಪತ್ನಿ ಡಿಂಪಲ್ ಅವರು ಕನೌಜ್ ಕ್ಷೇತ್ರದ ಸಂಸದೆಯಾಗಿದ್ದಾರೆ.[ಕಾಂಗ್ರೆಸ್ ಸಿಎಂ ಅಭ್ಯರ್ಥಿಯಾಗಿ ಪ್ರಿಯಾಂಕ?]
ಈಗ ಮುಲಾಯಂ ಅವರ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ ಅಪರ್ಣಾ ಬಿಶ್ತ್ ಯಾದವ್ ಅವರು ರಾಜಕೀಯ ರಂಗ ಪ್ರವೇಶಿಸುತ್ತಿದ್ದಾರೆ.
ಲಕ್ನೋ ಕಂಟೋನ್ಮೆಂಟ್ ಕ್ಷೇತ್ರದಲ್ಲಿ 1991ರಿಂದ ಬಿಜೆಪಿ ಗೆಲ್ಲುತ್ತಾ ಬಂದಿದೆ. ಸತೀಶ್ ಭಾಟಿಯಾ ಅವರು ಎರಡು ಬಾರಿ ಹಾಗೂ ನಂತರ ಮೂರು ವರ್ಷ ಸುರೇಶ್ ತಿವಾರಿ ಅವರು ಗೆದ್ದಿದ್ದಾರೆ.
ಸುಮಾರು 3 ಲಕ್ಷಕ್ಕೂ ಅಧಿಕ ಮತದಾರರಿದ್ದು, 60 ಸಾವಿರ ಬ್ರಾಹ್ಮಣರು, 50 ಸಾವಿರ ದಲಿತರು, 40 ಸಾವಿರ ವೈಶ್ಯ, 30ಸಾವಿರ ಹಿಂದುಳಿದ ವರ್ಗ ಹಾಗೂ 20 ಸಾವಿರ ಮುಸ್ಲಿಮ್ ಮತದಾರರನ್ನು ಹೊಂದಿದೆ.
(ಐಎಎನ್ಎಸ್)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications