India's First Bullet Train: ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ 394 ಮೀಟರ್ ಉದ್ದದ ಸುರಂಗ ಸಿದ್ಧ
ಭಾರತದಲ್ಲಿ ಬುಲೆಟ್ ಟ್ರೈನ್ ಓಡುವ ಕಾಲ ದೂರವಿಲ್ಲ. ಇನ್ನೇನು ಕೆಲವೇ ದಿನಗಳಲ್ಲಿ ಈ ಕನಸು ಸಹ ನನಸಾಗಲಿದೆ. ಈ ನಿಟ್ಟಿನಲ್ಲಿ ಬುಲೆಟ್ ಟ್ರೈನ್ ಕಾರ್ಯ ಸಹ ವೇಗದಿಂದ ನಡೆದಿದೆ. ದೇಶದ ಮೊಟ್ಟ ಮೊದಲ ಬುಲೆಟ್ ರೈಲು ಮುಂಬೈ-ಅಹಮದಾಬಾದ್ ನಡುವೆ ಸಂಚರಿಸಲಿದ್ದು, ಕಾಮಗಾರಿ ತ್ವರಿತ ಗತಿಯಲ್ಲಿ ನಡೆಯುತ್ತಿದೆ.
ಬುಲೆಟ್ ರೈಲಿನ ಬಗ್ಗೆ ಈಗ ಒಂದು ಬಿಗ್ ಅಪ್ಡೇಟ್ ಬಂದಿದೆ. ನವಿ ಮುಂಬೈನಲ್ಲಿ 394 ಮೀಟರ್ ಉದ್ದದ ಸುರಂಗ ನಿರ್ಮಾಣ ಪೂರ್ಣಗೊಂಡಿದೆ ಎಂದು ರಾಷ್ಟ್ರೀಯ ಹೈಸ್ಪೀಡ್ ರೈಲು ನಿಗಮ ತಿಳಿಸಿದೆ. ಘನ್ಸೋಲಿಯಲ್ಲಿ ಹೆಚ್ಚುವರಿ ಚಾಲಿತ ಮಧ್ಯಂತರ ಸುರಂಗದ ಕೆಲಸ ನಡೆಯುತ್ತಿದೆ. ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ ಮತ್ತು ಶಿಲ್ಪಾಟಾ ನಡುವಿನ 21 ಕಿ.ಮೀ ಉದ್ದದ ಸುರಂಗದ ಕಾಮಗಾರಿಯೂ ಚುರುಕುಗೊಂಡಿದೆ. ಅಧಿಕಾರಿಗಳ ಪ್ರಕಾರ, ಯೋಜನೆಯಡಿಯಲ್ಲಿ ಉತ್ಖನನ ಕಾರ್ಯವು ಕಳೆದ ವರ್ಷ ಡಿಸೆಂಬರ್ 6 ರಂದು ಪ್ರಾರಂಭವಾಗಿತ್ತು.

ಸುರಂಗ ನಿರ್ಮಾಣ ಹೇಗೆ?
ತಜ್ಞರ ಮೇಲ್ವಿಚಾರಣೆಯಲ್ಲಿ 27515 ಕೆಜಿ ಸ್ಫೋಟಕಗಳನ್ನು ಬಳಸಿ, ಕೇವಲ ಆರು ತಿಂಗಳಲ್ಲಿ 394 ಮೀಟರ್ ಉದ್ದದ ಸುರಂಗ ನಿರ್ಮಿಸಲಾಗಿದೆ. ಈ ವೇಳೆ 214 ಭಾರೀ ಸ್ಪೋಟಕಗಳನ್ನು ಬಳಸಲಾಗಿದೆ. ಅಲ್ಲದೆ ಈ ವೇಳೆ ಸುರಕ್ಷತಾ ಕ್ರಮಗಳನ್ನು ಸಹ ನೋಡಿಕೊಳ್ಳಲಾಗಿದೆ. ಹೊಸ ನ್ಯೂ ಆಸ್ಟ್ರಿಯನ್ ಟನೆಲಿಂಗ್ ತಂತ್ರಜ್ಞಾನವನ್ನು ಬಳಸಿ 3.3 ಕಿಲೋ ಮೀಟರ್ ಉದ್ದರ ಸುರಂಗ ನಿರ್ಮಿಸುವ ಕಾಮಗಾರಿ ನಡೆಸಲಾಗಿದೆ.
ಯೋಜನೆಯಲ್ಲಿ ಒಟ್ಟು 21 ಕಿಲೋಮೀಟರ್ ಉದ್ದದ ಸುರಂಗವನ್ನು ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಲ್ಲಿ ಬೋರಿಂಗ್ ಯಂತ್ರಗಳ ಮೂಲಕ 16 ಕಿಲೋಮೀಟರ್ ಅಗೆಯಲಾಗಿದ್ದು, 5 ಕಿಲೋಮೀಟರ್ ಸುರಂಗವನ್ನು NATM (ಹೊಸ ಆಸ್ಟ್ರಿಯನ್ ಸುರಂಗ ವಿಧಾನ) ಬಳಸಿ ನಿರ್ಮಿಸಲಾಗಿದೆ.
#WATCH Ghansoli, Navi Mumbai: The completion of the 394 metre-long tunnel for the Mumbai-Ahmedabad bullet train project, is underway
— ANI (@ANI) May 27, 2024
(Source: NHSRCL- National High-Speed Rail Corporation) pic.twitter.com/JjBB8Kqwjs
ನಿರ್ಮಾಣದ ಸಮಯದಲ್ಲಿ ಹಲವು ವಿಷಯದ ಬಗ್ಗೆಯೂ ಕಾಳಜಿ ವಹಿಸಲಾಗಿದೆ. ಇದರಿಂದ ತುರ್ತು ಸಂದರ್ಭದಲ್ಲಿ ತೆರವು ತ್ವರಿತವಾಗಿ ಮಾಡಬಹುದು. ನ್ಯಾಶನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಎಚ್ಎಸ್ಆರ್ಸಿಎಲ್) ಮುಂಬೈ ನಿಲ್ದಾಣವನ್ನು ಬಿಕೆಸಿಯಿಂದ ಶಿಲ್ಪಾಟಾಕ್ಕೆ ಸಂಪರ್ಕಿಸುವ ಸುರಂಗದ ಕಾರ್ಯ ಭರದಿಂದ ಸಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಸುರಂಗದ ಸುಮಾರು 7 ಕಿಲೋಮೀಟರ್ ಥಾಣೆ ಕ್ರೀಕ್ನಲ್ಲಿ ಸಮುದ್ರದ ಅಡಿಯಲ್ಲಿ ಹಾದುಹೋಗುತ್ತದೆ. ಇನ್ನು ಸುಮಾರು 21 ಕಿಲೋಮೀಟರ್ ಉದ್ದದ ಈ ಸುರಂಗವನ್ನು ನಿರ್ಮಿಸಬೇಕಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications