Mumbai Billboard collapse: ಜಾಹೀರಾತು ಏಜೆನ್ಸಿಯ ಭವೇಶ್ ಭಿಂಡೆ ಬಂಧನ
ಮುಂಬೈ, ಮೇ 16: ಮೂರು ದಿನಗಳ ಹಿಂದೆ ಮುಂಬೈನಲ್ಲಿ ಬೃಹತ್ ಜಾಹೀರಾತು ಫಲಕು ಬಿದ್ದು 16 ಜನರ ಸಾವಿಗೆ ಕಾರಣವಾದವನನ್ನು ಮುಂಬೈ ಪೊಲೀಸರು ಇಂದು ಗುರುವಾರ ಉದಯಪುರದಲ್ಲಿ ಬಂಧಿಸಿದ್ದಾರೆ.
ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಬೃಹತ್ ಎತ್ತದ ಜಾಹೀರಾತು ಫಲಕ ಬಿದ್ದು ಆಘಾತ ಸೃಷ್ಟಿಸಿತು. ಈ ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ಹಾಕಿದ್ದ ಭವೇಶ್ ಭಿಂಡೆ ಅವರನ್ನು ಬಂಧಿಸಿದ್ದಾರೆ. ಈ ಕುರಿತು ಖುದ್ದು ಪೊಲೀಸ್ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ.

ಜಾಹೀರಾತು ಸಂಸ್ಥೆ ನಿರ್ದೇಶಕ ಭಿಂಡೆ
ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ನಿರ್ಮಿಸಿದ್ದ ಜಾಹೀರಾತು ಸಂಸ್ಥೆ ಇಗೋ ಮೀಡಿಯಾ ಪ್ರೈವೇಟ್ ಕಂಪನಿಯ ನಿರ್ದೇಶಕ ಭವೇಶ್ ಭಿಂಡೆ ಬಂಧಿಸಲಾಗಿದೆ. ಮುಂಬೈ ಪೊಲೀಸರ ಕ್ರೈಂ ಬ್ರಾಂಚ್ ತಂಡ ಬಂಧಿಸಿದೆ.
ಅನಿರೀಕ್ಷಿತವಾಗಿ ಈ ಬೃಹತ್ 40x40 ಅಡಿಯ ಜಾಹೀರಾತು ಫಲಕ ಕುಸಿದು ಬಿದ್ದು ಕನಿಷ್ಠ 16 ಜನರನ್ನು ಬಲಿ ಪಡೆಯಿತು. ಸುಮಾರು 75 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.

ಈ ಜಾಹೀರಾತು ಫಲಕವನ್ನು ಈ ಕಂಪನಿಯು10 ವರ್ಷಗಳ ಗುತ್ತಿಗೆಗೆ ನಿರ್ಮಿಸಿ ಕೊಟ್ಟಿತ್ತು. ಅಲ್ಲದೇ ಇಷ್ಟೊಂದು ದೊಡ್ಡ ಜಾಹೀರಾತು ಇದೇ ಮೊದಲಿಗೆ ಹಾಕಲಾಗಿದೆ ಎಂದು ಕಂಪನಿಯು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ಗೆ ಅರ್ಜಿ ಸಲ್ಲಿಸಿತ್ತು. ಇದನ್ನು ಭಾರತದ ಅತಿದೊಡ್ಡ ವಾಣಿಜ್ಯ ನೇಮ್ಬೋರ್ಡ್ ಎಂದು ಸಹ ಕಂಪನಿ ಹೇಳಿಕೊಂಡಿತ್ತು.
ಘಟನೆ ಬಳಿಕ ಪರಾರಿಯಾಗಿದ್ದ ಭಿಂಡೆ
ಸೋಮವಾರ ಈ ಘಟನೆ ನಡೆಯುತ್ತಿದ್ದಂತೆ ಸ್ಥಳೀಯ ಪೊಲೀಸರು ಭಿಂಡೆ ವಿರುದ್ಧ ಸೆಕ್ಷನ್ 304, 337, 338 ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡರು. ಇದೇ ವೇಳೆ ಮುಂಬೈನಿಂದ ಭಿಂಡೆ ಪರಾರಿಯಾಗಿ ಉದಯಪುರ ಸೇರಿದ್ದ. ಆತನ ಶೋಧಕ್ಕೆ ಮುಂಬೈ ಮತ್ತು ಗುಜರಾತ್ನಿಂದ 10 ಕ್ಕೂ ಹೆಚ್ಚು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇಂದು ಕೊನೆಗೆ ಭಿಂಡೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications