Mumbai-London Air India flight: ಅಹಮದಾಬಾದ್ ವಿಮಾನ ದುರಂತದ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ
Mumbai-London Air India flight: ಇಂದು (ಜೂನ್ 13) ಬೆಳಗ್ಗೆ ಮುಂಬೈ-ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ಮುಂಬೈಗೆ ವಾಪಾಸ್ ಆಗಿದೆ ಎಂದು ವರದಿಯಾಗಿದೆ. ಗುರುವಾರ (ಜೂನ್ 12) ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಅಪಘಾತ ದುರಂತದ ನಂತರ ಈ ಬೆಳವಣಿಗೆ ನಡೆದಿದೆ. ಹಾಗಾದರೆ ಇದಕ್ಕೆ ಕಾರಣ ಏನು ಎನ್ನುವ ಮಾಹಿತಿ ತಿಳಿದುಬರಬೇಕಿದೆ.
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ (ಜೂನ್ 12) ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಈ ವೇಳೆ ವಿಮಾನದಲ್ಲಿ ಪ್ರಯಾಣ 242 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಅವರೆಲ್ಲರೂ ಕೂಡ ದುರಂತದಲ್ಲಿ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿತ್ತು. ಈ ಘಟನೆ ನಡೆದ ಮಾರನೇ ದಿನವೇ ಅಂದರೆ ಇಂದು ಮುಂಬೈನಿಂದ ಲಂಡರ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಮತ್ತೆ ಮುಂಬೈ ವಾಪಾಸ್ ಆಗಿರುವ ಘಟನೆ ನಡೆದಿದೆ.

AI-171 ಏರ್ ಇಂಡಿಯಾ ವಿಮಾನ ಪತನಕ್ಕೆ ಟಾಟಾ ಗ್ರೂಪ್ ಸಂತಾಪವನ್ನು ವ್ಯಕ್ತಪಡಿಸಿದೆ. ಈ ದುರಂತದಲ್ಲಿ ಒಬ್ಬರನ್ನು ಬಿಟ್ಟು ಉಳಿದೆಲ್ಲರೂ ಸಾವನ್ನಪ್ಪಿಸಿದ್ದಾರೆ ಎಂದು ಮೂಕಗಳಿಂದ ತಿಳಿದುಬಂದಿದೆ. ಮಾಹಿತಿಯ ಪ್ರಕಾರ ಗುರುವಾರ ಮಧ್ಯಾಹ್ನ ಸುಮಾರು 1:50ಕ್ಕೆ ಈ ದುರಂತ ನಡೆದಿದೆ. ಇನ್ನೂ ಈ ವಿಮಾನದಲ್ಲಿ ಗುಜರಾತಿನ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದು, ಅವರೂ ಸಾವನ್ನಪ್ಪಿದ್ದಾರೆ ಅಂತಲೂ ತಿಳಿದುಬಂದಿತ್ತು.
ಘಟನೆ ನಡೆಯುತ್ತಿದ್ದಂತೆ ಗುಜರಾತ್ ಸಿಎಂ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆ ನಡೆಸಿದ್ದರು. ವಿಮಾನ ಪತನಗೊಳ್ಳುತ್ತಿದ್ದಂತೆಯೇ ದಟ್ಟ ಹೊಗೆ ಆವರಿಸಿಕೊಂಡಿತ್ತು.
48 ಪ್ರಯಾಣಿಕರು ಸಾವು: ಮುಂಬೈ-ಲಂಡನ್ ಕೈರೋ ಮತ್ತು ಜಿನಿವಾ ಮೂಲಕ ಮುಂಬೈನಿಂದ ಲಂಡನ್ಗೆ ಹೊರಟಿದ್ದ ಎಲ್ಎಲ್ 749AC ವಿಮಾನ ಮಾಂಟ್ ಬ್ಲ್ಯಾಂಕ್ ಎನ್ನುವಲ್ಲಿ ಪತನಗೊಂಡಿತ್ತು. ನವೆಂಬರ್ 3, 1950ಕ್ಕೆ ಈ ದುರ್ಘಟನೆ ನಡೆದಿತ್ತು. ಈ ವೇಳೆ ವಿಮಾನದಲ್ಲಿದ್ದ ಎಲ್ಲಾ 48 ಪ್ರಯಾಣಿಕರು ಸಾವನ್ನಪ್ಪಿದ್ದರು.
ಮಲಬಾರ್ ಪ್ರಿನ್ಸಸ್ ಎನ್ನುವ ವಿಮಾನ ಇದಾಗಿತ್ತು. ಪ್ರತಿಕೂಲ ಹವಾಮಾನದ ಹಿನ್ನಲೆ ವಿಮಾನ ಪತನಗೊಂಡಿತ್ತು. ಬಾಂಬೆಯ ಸಹರಾ ವಿಮಾನ ನಿಲ್ದಾಣದಿಂದ ಲಂಡನ್ ಹೀತ್ರೋ ವಿಮಾನ ನಿಲ್ದಾಣಕ್ಕೆ ವಿಮಾನ ಪ್ರಯಾಣಿಸುದ್ದಾಗ ಈ ಘಟನೆ ನಡೆದಿತ್ತು.
117 ಪ್ರಯಾಣಿಕರು ಸಾವು: 24 ಜನವರಿ 1966 ಬೆಳಗ್ಗೆ 8 ಗಂಟೆಗೆ, ಬಾಂಬೆಯಿಂದ ಲಂಡನ್ ಹೀತ್ರೋ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿತ್ತು. ಜಿನಿವಾ ಮೂಲಕ ಬೋಯಿಂಗ್ 707-437, ಫ್ರಾನ್ಸ್ ದೇಶದಲ್ಲಿ ಪತನಗೊಂಡಿತ್ತು. ಇದರಲ್ಲಿ 117 ಪ್ರಯಾಣಿಕರು ಸಾವನ್ನಪ್ಪಿದ್ದರು. ಈ ವಿಮಾನ ದುರಂತದಲ್ಲಿ ಅಟೋಮಿಕ್ ಎನರ್ಜಿ ಕಮಿಷನ್ ಆಫ್ ಇಂಡಿಯಾದ ಸಂಸ್ಥಾಪಕ ಡಾ. ಹೊಮಿ ಜಹಾಂಗೀರ್ ಬಾಬಾ ಕೂಡಾ ಸಾವನ್ನಪ್ಪುತ್ತಾರೆ.
213 ಪ್ರಯಾಣಿಕರು ಸಾವು: ಏರ್ ಇಂಡಿಯಾ 855 ವಿಮಾನವು ಬಾಂಬೆಯಿಂದ ದುಬೈಗೆ ಪ್ರಯಾಣಿಸುತ್ತಿತ್ತು. 1978ರ ಹೊಸ ವರ್ಷದ ದಿನದಂದೇ ನಡೆದಿದ್ದ ಈ ದುರಂತದಲ್ಲಿ 213 ಪ್ರಯಾಣಿಕರು ಸಾವನ್ನಪ್ಪಿದ್ದರು. ಟೇಕ್ ಆಫ್ ಆದ ಎರಡೇ ನಿಮಿಷದಲ್ಲಿ ವಿಮಾನವು ಬಾಂದ್ರಾದಲ್ಲಿ ಅರಬ್ಬೀ ಸಮುದ್ರಕ್ಕೆ ಪತನಗೊಂಡಿತ್ತು. ಎಂಪರರ್ ಅಶೋಕ ಎನ್ನುವ ಹೆಸರನ್ನು ಈ ವಿಮಾನಕ್ಕೆ ಇಡಲಾಯಿತ್ತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications