ಕಪಾಳ ಮೋಕ್ಷಕ್ಕೆ ಆಯತಪ್ಪಿ ರೈಲ್ವೇ ಹಳಿ ಮೇಲೆ ಬಿದ್ದ ವ್ಯಕ್ತಿ! ಮುಂದಾಗಿದ್ದು ದುರಂತ, ಸಿಸಿಟಿವಿಯಲ್ಲಿ ಸೆರೆ!
ಮುಂಬೈ, ಆಗಸ್ಟ್ 18: ಮುಂಬೈ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ, ನಿಲ್ದಾಣದಲ್ಲಿ ಇಬ್ಬರು ಜಗಳವಾಡುತ್ತಿದ್ದಾರೆ. ಕೋಪದಲ್ಲಿ ವ್ಯಕ್ತಿಯೊಬ್ಬ ಇನ್ನೊಬ್ಬನನ್ನು ಸಬ್ಅರ್ಬನ್ ರೈಲು ಬರುವ ವೇಳೆಗೆ ಸರಿಯಾಗಿ ಕಪಾಳಮೋಕ್ಷ ಮಾಡಿದ್ದಾನೆ. ಕಪಾಳಮೋಕ್ಷ ಮಾಡಿದಾಗ ರೈಲ್ವೆ ಟ್ರ್ಯಾಕ್ ಮೇಲೆ ಬಿದ್ದ ದಿನೇಶ್ ರಾಥೋಡ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಭಾನುವಾರ ರಾತ್ರಿ 9:15ರ ಸುಮಾರಿಗೆ ನಡೆದ ಜಗಳದ ವೇಳೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದಾಗ ಆಯತಪ್ಪಿ ದಿನೇಶ್ ಟ್ರ್ಯಾಕ್ ಮೇಲೆ ಬಿದ್ದಿದ್ದು, ರೈಲು ಹರಿದು ಸ್ಥಳದಲ್ಲೇ ಮೃತಪಟ್ಟಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಿಳಿ ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದ ದಿನೇಶ್ ಪ್ಲಾಟ್ಫಾರ್ಮ್ನಲ್ಲಿ ಶೀತಲ್ ಮಾನೆ (30) ಎಂಬಾತನಿಗೆ ಡಿಕ್ಕಿ ಹೊಡೆದಿರುವುದು ಸಿಸಿಟಿವಿ ಸೆರೆಯಾಗಿದೆ. ಅವಿನಾಶ್ ಮಾನೆ ಮತ್ತು ರಾಥೋಡ್ ನಡುವೆ ತೀವ್ರ ವಾಗ್ವಾದ ನಡೆಯಿತು.

ಮಾತಿನ ಚಕಮಕಿಯಲ್ಲಿ, ಅವಿನಾಶ್ ಮಾನೆ ಕೋಪದ ಭರದಲ್ಲಿ, ಬ್ಯಾಲೆನ್ಸ್ ಕಳೆದುಕೊಂಡ ರಾಥೋಡ್ಗೆ ಹೊಡೆದಿದ್ದಾರೆ, ಕಪಾಳಮೋಕ್ಷ ಮಾಡಿದ ಬಳಿಕ ಹಳಿಗಳ ಮೇಲೆ ಬಿದ್ದು ಚಲಿಸುತ್ತಿದ್ದ ಉಪನಗರ ರೈಲಿನಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಆರೋಪಿ ಅವಿನಾಶ್ ಮಾನೆ (31) ಮತ್ತು ಅವರ ಪತ್ನಿ ಶೀತಲ್ ಮಾನೆ (30) ಅವರನ್ನು ಬಂಧಿಸಲಾಗಿದೆ.
ರೈಲು ಸಮೀಪಿಸುತ್ತಿದ್ದಂತೆ ಆಘಾತಕ್ಕೊಳಗಾದ ಪ್ರಯಾಣಿಕರು ದಿನೇಶ್ನನ್ನು ರಕ್ಷಿಸಲು ಪ್ಲಾಟ್ಫಾರ್ಮ್ನ ಅಂಚಿಗೆ ಧಾವಿಸಿದರು. ಇನ್ನೂ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನಂತರ ಮತ್ತು ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಅವಿನಾಶ್ ಮಾನೆಯನ್ನು ಬಂಧಿಸಿದ್ದಾರೆ ಮತ್ತು ನಂತರ ಅವರ ಪತ್ನಿಯನ್ನೂ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
-
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications