ಗಾಯಕ ಸೋನು ನಿಗಮ್ ಮೇಲೆ ಹಲ್ಲೆ; ಮುಂಬೈಯಲ್ಲಿ ಪ್ರಕರಣ ದಾಖಲು, ಹಲ್ಲೆಗೆ ಕಾರಣವೇನು.?
ಸಂಗೀತ ಕಾರ್ಯಕ್ರಮದ ವೇದಿಕೆಯಿಂದ ವ್ಯಕ್ತಿಯೊಬ್ಬ ಸೋನು ನಿಗಮ್ ಹಾಗೂ ಅವರ ತಂಡದವರ ಮೇಲೆ ಹಲ್ಲೆ ಮಾಡಿ ತಳ್ಳುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಮುಂಬೈ,ಫೆಬ್ರವರಿ21: ಖ್ಯಾತ ಗಾಯಕ ಸೋನು ನಿಗಮ್ ಮತ್ತು ಅವರ ತಂಡದವರ ಮೇಲೆ ಮುಂಬೈಯ ಚೆಂಬೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಕಾರ್ಯಕ್ರಮದ ವೇದಿಕೆಯಿಂದ ವ್ಯಕ್ತಿಯೊಬ್ಬ ಸೋನು ನಿಗಮ್ ಹಾಗೂ ಅವರ ತಂಡದವರ ಮೇಲೆ ಹಲ್ಲೆ ಮಾಡಿ ತಳ್ಳುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಶಾಸಕ ಪ್ರಕಾಶ್ ಫರ್ತೆಪೇಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಈ ಘಟನೆ ಸಂಬಂಧ ಮುಂಬೈಯ ಚೆಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸೋನು ನಿಗಮ್ ಅವರ ಜೊತೆಗೆ ಸೆಲ್ಪಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದು ಸಾಕಷ್ಟು ನೂಕುನುಗ್ಗಲು ಏರ್ಪಟ್ಟಿದೆ. ಈ ಸಂದರ್ಭದಲ್ಲಿ ಶಾಸಕರ ಭೇಟಿಗೆ ಅವಕಾಶ ನೀಡಿದ್ದಕ್ಕೆ ಬೆಂಬಲಿಗರು ಗಲಾಟೆ ನಡೆಸಿದ್ದು, ಸೋನು ನಿಗಮ್ ಭ್ರದ್ರತಾ ಸಿಬ್ಬಂದಿ ಹಾಗೂ ಶಾಸಕರ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಸೋನು ನಿಗಮ್ ಸೇರಿದಂತೆ ಹಲವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವು ಕೇಳಿಬಂದಿದೆ.

ಈ ಘಟನೆ ಕುರಿತು ಮಾತನಾಡಿರುವ ಸೋನು ನಿಗಮ್, ಸಂಗೀತ ಕಾರ್ಯಕ್ರಮದ ನಂತರ ನಾನು ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ವ್ಯಕ್ತಿಯೊಬ್ಬರು ನನ್ನನ್ನು ಹಿಡಿದಿದ್ದರು. ನಂತರ ಅವರು ನನ್ನನ್ನು ರಕ್ಷಿಸಲು ಬಂದ ಹರಿ ಮತ್ತು ರಬ್ಬಾನಿ ಅವರನ್ನು ತಳ್ಳಿದರು, ನಂತರ ನಾನು ಮೆಟ್ಟಿಲುಗಳ ಮೇಲೆ ಬಿದ್ದೆ ಎಂದು ಹೇಳಿದ್ದಾರೆ.
ರಬ್ಬಾನಿ (ಸೋನು ಜೊತೆಗಿದ್ದ ಗಾಯಾಳು) ಕಬ್ಬಿಣದ ಸರಳುಗಳು ಬಿದ್ದಿದ್ದರೆ ಇಂದು ಸಾಯಬಹುದಿತ್ತು. ಆತನನ್ನು ಆ ರೀತಿ ತಳ್ಳಲಾಯಿತು. ನೀವು ವೀಡಿಯೊದಲ್ಲಿ ನೋಡುತ್ತೀರಿ. ಸಾಮಾನ್ಯ ಜನರಲ್ಲಿ ಜಾಗೃತಿ ಮೂಡಿಸಲು ದೂರು ನೀಡಿದ್ದೇನೆ ಎಂದು ಸೋನು ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಜನರು ಬಲವಂತವಾಗಿ ಸೆಲ್ಫಿ ಅಥವಾ ಚಿತ್ರಗಳನ್ನು ಪಡೆಯಲು ಪ್ರಯತ್ನಿಸಿದಾಗ, ಗಲಾಟೆ, ನೂಕುನುಗ್ಗಲುದಿಂದಾಗಿ ಆಗುವ ಪರಿಣಾಮಗಳ ಬಗ್ಗೆ ಯೋಚಿಸಬೇಕು ಎಂದು ನಾನು ದೂರು ನೀಡಿದ್ದೇನೆ ಎಂದು ಅವರು ಹೇಳಿದರು.

ಸೋನು ನಿಗಮ್ ಮೇಲೆ ಕೆಲವು ವ್ಯಕ್ತಿಗಳು ಹಲ್ಲೆ ಕುರಿತು ಪ್ರತಿಕ್ರಿಯಿಸಿದ ಡಿಸಿಪಿ ರಜಪೂತ್, ನಾನು ಸೋನುಜಿಯೊಂದಿಗೆ ಮಾತನಾಡಿದ್ದೇನೆ. ಇಲ್ಲಿಯವರೆಗೆ, ನಮಗೆ ಅಂತಹ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಆರೋಪಿಯು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿರಬಹುದು. ಕಾರಣವನ್ನು ಕಂಡುಹಿಡಿಯಲು ನಾವು ಮತ್ತಷ್ಟು ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸ್ಥಳೀಯ ಶಾಸಕರ ಮಗ ಸೋನು ನಿಗಮ್ ಅವರ ಸೆಲ್ಫಿಗಾಗಿ ಪ್ರದರ್ಶನ ನೀಡಿದ ನಂತರ ಅವರನ್ನು ತಲುಪಲು ಪ್ರಯತ್ನಿಸಿದರು, ಆದರೆ ಸೋನು ನಿಗಮ್ ಅವರ ಬಾಡಿ ಗಾರ್ಡ್ ಅವರ ಗುರುತು ತಿಳಿಯದೆ ಅವರನ್ನು ತಡೆದರು ಎಂದು ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ಎಎನ್ಐಗೆ ತಿಳಿಸಿದ್ದಾರೆ.
ನಂತರ ಅಂಗರಕ್ಷಕ ಮತ್ತು ಶಾಸಕರ ಮಗನ ನಡುವೆ ಸಣ್ಣ ಜಗಳವಾಗಿದೆ, ಇದರಿಂದಾಗಿ ಒಬ್ಬರು ಅಥವಾ ಇಬ್ಬರು ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ. ಅಷ್ಟರಲ್ಲಿ, BMC ಮಾಜಿ ಕಾರ್ಪೊರೇಟರ್ ಆಗಿರುವ ಶಾಸಕರ ಪುತ್ರಿ ಮಧ್ಯಪ್ರವೇಶಿಸಿ ಅವರನ್ನು ತಡೆದರು, ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹೇಳಿದ್ದಾರೆ.
-
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು












Click it and Unblock the Notifications