33 ಗಂಟೆ ಬಂದ್ ಆಗಿದ್ದ ಮುಂಬೈ-ಪುಣೆ ಎಕ್ಸ್ಪ್ರೆಸ್ವೇ ಮಾರ್ಗ ರೀ ಓಪನ್, ಕಾರಣ ತಿಳಿಯಿರಿ | Mumbai-Pune Expressway
ಟ್ರಾಫಿಕ್ ಜಾಮ್ ಅನ್ನೋದು ಕೇವಲ ಒಂದು ನಗರಕ್ಕೆ ಸೀಮಿತವಾಗಿಲ್ಲ, ಜಗತ್ತಿನಾದ್ಯಂತ ಇದೇ ಸಮಸ್ಯೆ ಕಾಡುತ್ತಿದೆ. ಅದರಲ್ಲೂ ಭಾರತದ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಕಾಟ ಹೆಚ್ಚಾಗಿ ಜನ ಹೈರಾಣಾಗಿ ಹೋಗಿದ್ದಾರೆ. ಇಷ್ಟೆಲ್ಲದರ ನಡುವೆ ಮುಂಬೈ-ಪುಣೆ ಎಕ್ಸ್ಪ್ರೆಸ್ವೇ ಭಯಾನಕ ಟ್ರಾಫಿಕ್ ಕಂಡಿದ್ದು, ಪ್ರಯಾಣಿಕರು ಸತತ 33 ಗಂಟೆಗಳ ಕಾಲ ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿತ್ತು. ಸಾವಿರಾರು ವಾಹನಗಳು ಸಾಲುಗಟ್ಟಿ ನಿಂತು, ಇಡೀ ಹೆದ್ದಾರಿ ಬಂದ್ ಆಗಿತ್ತು. ಹೀಗೆ ಹತ್ತಾರು ಕಿಲೋ ಮೀಟರ್ ಉದ್ದಕ್ಕೆ ಮುಂಬೈ-ಪುಣೆ ಎಕ್ಸ್ಪ್ರೆಸ್ವೇ ಟ್ರಾಫಿಕ್ ಜಾಮ್ ಕಂಡಿತ್ತು. ಹಾಗಾದರೆ ಈ ಸಮಸ್ಯೆಗೆ ಕಾರಣವಾಗಿದ್ದು ಏನು? ಇಲ್ಲಿದೆ ಮಾಹಿತಿ.
ಪ್ರೊಪಿಲೀನ್ ಗ್ಯಾಸ್ ತುಂಬಿದ್ದ ಟ್ಯಾಂಕರ್ ಒಂದು ಖಂಡಾಲಾ ಘಾಟ್ ವಿಭಾಗದಲ್ಲಿ ಪಲ್ಟಿ ಆಗಿದೆ. ಹೀಗೆ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಕಾರಣ ವಾಹನಗಳ ಸಂಚಾರ ಬಂದ್ ಆಗಿತ್ತು. ನೋಡ ನೋಡುತ್ತಲೇ ಇಡೀ ಮುಂಬೈ-ಪುಣೆ ಎಕ್ಸ್ಪ್ರೆಸ್ವೇ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಬಿಟ್ಟಿದೆ. ಕೊನೆಗೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಭಾಯಿಸಲು ಪರದಾಡಿದರು, ಈ ರೀತಿ ಸತತ 33 ಗಂಟೆಗಳ ಕಾಲ ಮುಂಬೈ-ಪುಣೆ ಎಕ್ಸ್ಪ್ರೆಸ್ವೇ ಬಂದ್ ಆಗಿದ್ದ ಕಾರಣಕ್ಕೆ ಆತಂಕ ಕೂಡ ಎದುರಾಗಿತ್ತು. ಅದೋಶಿ ಸುರಂಗದ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದ ಪರಿಣಾಮ ಇಂತಹ ದುರಂತ ಎದುರಾಗಿತ್ತು.

20 ಕಿಮೀ ವಿಸ್ತರಿಸಿದ್ದ ಟ್ರಾಫಿಕ್
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ ನಡುವೆ ಪ್ರೊಪಿಲೀನ್ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ ಆಗಿರುವ ಸುದ್ದಿ ತಿಳಿದ ತಕ್ಷಣ, ದೊಡ್ಡ ಕ್ರೇನ್ಗಳ ಸಹಾಯದಿಂದ ಪಲ್ಟಿಯಾದ ವಾಹನ ತೆರವುಗೊಳಿಸಲು ನಿರಂತರ ಪ್ರಯತ್ನ ಮಾಡಲಾಗಿತ್ತು. ಅಂತಿಮವಾಗಿ ನಿರಂತರ ಪ್ರಯತ್ನ ಫಲ ಕೊಟ್ಟ ಕಾರಣಕ್ಕೆ ಬೆಳಗಿನ ಜಾವ 1.46ರ ಸುಮಾರಿಗೆ ಮುಂಬೈ-ಪುಣೆ ಎಕ್ಸ್ಪ್ರೆಸ್ವೇ ಸಂಚಾರಕ್ಕೆ ಮುಕ್ತವಾಯಿತು. ಈ ಸಮಯದಲ್ಲಿ ಟ್ರಾಫಿಕ್ ಕಂಟಕಕ್ಕೆ ಸಿಲುಕಿದ ಸವಾರರು ವಿಲವಿಲ ಒದ್ದಾಡುವಂತೆ ಆಗಿತ್ತು. ಹೀಗೆ ಇದ್ದಾಗ ನೋಡ ನೋಡುತ್ತಲೇ ಟ್ರಾಫಿಕ್ ಜಾಮ್ ಸುಮಾರು 20 ಕಿಮೀ ವಿಸ್ತರಿಸಿತ್ತು.
ಟೋಲ್ ಸಂಗ್ರಹ ದಿಢೀರ್ ಬಂದ್
ಮುಂಬೈಗೆ ಸಾಗುವ ಕ್ಯಾರೇಜ್ ವೇ ಅಪಘಾತದ ಬಳಿಕ ಬಂದ್ ಮಾಡಲಾಗಿದ್ದು, ಪುಣೆಗೆ ಸಾಗುವ ಮಾರ್ಗದಲ್ಲಿ ಹಂತ ಹಂತವಾಗಿ ವಾಹನ ಸಂಚಾರ ಬೇರೆಡೆಗೆ ತಿರುಗಿಸಿ ನಿಯಂತ್ರಣ ಮಾಡಲಾಗಿತ್ತು. ಈ ನಡುವೆ ಜನ ಘಟನೆಯಿಂದ ಭಾರಿ ಆಕ್ರೋಶಗೊಂಡಿದ್ದು, ಎಂಎಸ್ಆರ್ಡಿಸಿ ಟೋಲ್ ಸಂಗ್ರಹ ತಾತ್ಕಾಲಿಕವಾಗಿ ತಡೆಹಿಡಿದಿದೆ. ಸ್ಥಳದಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಬಿಪಿಸಿಎಲ್ & ಹೆದ್ದಾರಿ ಪೊಲೀಸರು, ಎಂಎಸ್ಆರ್ಡಿಸಿ ಸಿಬ್ಬಂದಿ ಜಂಟಿಯಾಗಿ ತೆರವು ಕಾರ್ಯಾಚರಣೆ ನಡೆಸಿದ್ದು ಪರಿಸ್ಥಿತಿ ಈಗ ಹಿಡಿತಕ್ಕೆ ಸಿಕ್ಕಂತಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications