ಇಂಧೋರ್ನಲ್ಲಿ ಭೋಜನಕ್ಕೆ ಬಂದ ಮುಸ್ಲಿಂ ಹುಡುಗಿ, ಹಿಂದೂ ಹುಡುಗನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಭೋಜನಕ್ಕೆ ಬಂದ ಮುಸ್ಲಿಂ ಹುಡುಗಿ, ಹಿಂದೂ ಹುಡುಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಕಳೆದ ರಾತ್ರಿ ಇಂಧೋರ್ನಲ್ಲಿ ನಡೆದಿದೆ. ಮಧ್ಯಪ್ರದೇಶದ ಇಂದೋರ್ನ ಹೋಟೆಲ್ನಿಂದ ಹೊರ ಬರುವಾಗ ಗುಂಪೊಂದು ಮುಸ್ಲಿಂ ಯುವತಿ ಮತ್ತು ಹಿಂದೂ ಹುಡುಗನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಇವರಿಬ್ಬರ ರಕ್ಷಣೆಗೆ ಬಂದ ಇಬ್ಬರು ವ್ಯಕ್ತಿಗಳಿಗೆ ಇರಿತದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನಗರದಲ್ಲಿ ಗುರುವಾರ ರಾತ್ರಿ ಈ ಗಟನೆ ನಡೆದಿದೆ. ಘಟನೆ ನಡೆದ ಬಳಿಕ ಗುಂಪಿನ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.

ಯುವತಿ ಮತ್ತು ಯುವಕ ಆಹಾರ ಸೇವಿಸಿ ಹೋಟೆಲ್ನಿಂದ ಹೊರಬಂದಾಗ, ಗುಂಪು ಅವರನ್ನು ಹಿಂಬಾಲಿಸಿ ಸುತ್ತುವರೆದಿದೆ. ಬೇರೆ ಧರ್ಮದ ವ್ಯಕ್ತಿಯ ಸಹವಾಸ ಏಕೆ ಮಾಡಿದ್ದೀಯ ಎಂದು ಯುವತಿಯನ್ನು ಗುಂಪು ಪ್ರಶ್ನೆ ಮಾಡಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಹಲೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ರಾಜೇಶ್ ರಘುವಂಶಿ ಹೇಳಿದ್ದಾರೆ.
In Indore, MP MusIim mobs beat a couple because the girl was a MusIim & the boy was a Hindu.
— Mr Sinha (@MrSinha_) May 26, 2023
It's becoming a new normal!
Imagine the amount of national-international outrage if any Hindu group starts doing this with M boy & H girl couples.. pic.twitter.com/Is0nis1QbJ
"ತನ್ನ ಪೋಷಕರಿಗೆ ತಿಳಿಸಿದ ನಂತರ ತಾನು ಯುವಕನೊಂದಿಗೆ ಊಟಕ್ಕೆ ಬಂದಿದ್ದೇನೆ ಎಂದು ಯುವತಿ ತಿಳಿಸಿದ್ದಾಳೆ. ಆಕೆ ಯುವಕರ ಗುಂಪಿನ ದುರ್ವರ್ತನೆಯನ್ನು ಸಹ ಆಕ್ಷೇಪಿಸಿದ್ದಾಳೆ. ಈ ಮಧ್ಯೆ, ಗುಂಪಿನಿಂದ ಯಾರೋ ಚಾಕುವನ್ನು ಹೊರತೆಗೆದಿದ್ದಾರೆ ಈ ವೇಳೆ ಇವರಿಬ್ಬರಿಗೆ ರಕ್ಷಣೆಗೆ ಬಂದ ಇಬ್ಬರು ಗಾಯಗೊಂಡಿದ್ದಾರೆ" ಎಂದು ಹೆಚ್ಚುವರಿ ಡಿಸಿಪಿ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಇದರಂತೆ ಇದುವರೆಗೆ ಏಳು ಆರೋಪಿಗಳನ್ನು ಗುರುತಿಸಲಾಗಿದೆ ಎಂದು ತುಕೋಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಕಮಲೇಶ್ ಶರ್ಮಾ ತಿಳಿಸಿದ್ದಾರೆ.
23-26 ವಯೋಮಾನದ ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಗುಂಪು ರಚಿಸಿದ್ದ ಉಳಿದ 20 ಮಂದಿಯನ್ನು ಗುರುತಿಸಿ ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಶರ್ಮಾ ತಿಳಿಸಿದ್ದಾರೆ. ವಿವಿಧ ಧರ್ಮದ ಯುವಕ ಯುವತಿಗೆ ಕಿರುಕುಳ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪೊಲೀಸರಿಗೆ ಸೂಚಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications