Get Updates
Get notified of breaking news, exclusive insights, and must-see stories!

ಮುಸ್ಲಿಮರ ಸ್ಮಶಾನದಲ್ಲಿ ಭಯೋತ್ಪಾದಕರ ಶವಸಂಸ್ಕಾರಕ್ಕೆ ಸಿಗಲಿಲ್ಲ ಜಾಗ!

ಜಮ್ಮು, ಸೆಪ್ಟೆಂಬರ್ 21: ಭಾರತೀಯ ಸೇನೆ ಹೊಡೆದುರುಳಿಸಿದ ಮೂವರು ಭಯೋತ್ಪಾದಕರ ಶವದ ಅಮತಿಮ ಸಂಸ್ಕಾರಕ್ಕೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಸ್ಮಶಾನವೊಂದರಲ್ಲಿ ಅಂತಿಮ ಸಂಸ್ಕಾರಕ್ಕೆ ಅವಕಾಶ ನೀಡದ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಯ್ಸಿ ಜಿಲ್ಲೆಯ ಕಕ್ರಯಾಲ್ ನಲ್ಲಿ ನಡೆದಿದೆ.

ಸೆಪ್ಟೆಂಬರ್ 13 ರಂದು ಭಾರತೀಯ ಸೇನೆ ಮತ್ತು ಭಯೋತಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಜೈಶ್ ಇ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹತ್ಯೆಮಾಡಲಾಗಿತ್ತು.

ಅವರ ದೇಹದ ಅಂತ್ಯ ಸಂಸ್ಕಾರಕ್ಕೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಸ್ಮಶಾನವೊಂದರಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಆದರೆ, 'ಭಯೋತ್ಪಾದಕರಿಗೂ ನಾವು ನಂಬಿರುವ ಇಸ್ಲಾಮಿಕ್ ತತ್ತ್ವಗಳಿಗೂ ತಾಳತಂತು ಇಲ್ಲ. ಅವರು ಪಾಕಿಸ್ತಾನಕ್ಕೆ ಸೇರಿದವರು. ಅವರು ತುಳಿದ ಹಾದಿಯನ್ನು ನಾವೆಂದಿಗೂ ಬೆಂಬಲಿಸುವುದಿಲ್ಲ. ಆದ್ದರಿಂದ ಅವರ ಶವಕ್ಕೂ ನಮ್ಮಲ್ಲಿ ಜಾಗವಿಲ್ಲ' ಎಂದು ಸ್ಮಶಾನದ ವ್ಯವಸ್ಥಾಪಕರು ಹೇಳಿದ್ದಾರೆ.

Muslim graveyards say no to Pak terrorists, police conduct burial

ಆದರೆ ಶವವನ್ನು ಬಹಳ ದಿನ ಹಾಗೇ ಇಟ್ಟುಕೊಳ್ಳುವುದಕ್ಕಾಗುವುದಿಲ್ಲ ಎಂಬ ಕಾರಣಕ್ಕೆ ಮುಸ್ಲಿಂ ಮೌಲ್ವಿಯೊಬ್ಬರನ್ನು ಕರೆಸಿ ಬೇರೆಡೆಗೆ ಅವರ ಶವಸಂಸ್ಕಾರ ಮಾಡಲಾಗಿದೆ. ಸೆಪ್ಟೆಂಬರ್ 17 ರಂದು ರಾತ್ರಿ ಗುಪ್ತ ಸ್ಥಳವೊಂದರಲ್ಲಿ ಶವ ಸಂಸ್ಕಾರ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+