ದಶಕದಲ್ಲಿ ಮುಸ್ಲಿಂ ಜನಸಂಖ್ಯೆ ಶೇ. 24ರಷ್ಟು ಏರಿಕೆ
ನವದೆಹಲಿ, ಜ. 23 : ದೇಶದಲ್ಲಿ ಮುಸ್ಲಿ ಸಮುದಾಯದ ಜನಸಂಖ್ಯೆ ತೀವ್ರವಾಗಿ ಏರುತ್ತಿದೆ ಎಂದು ಸಂಘ ಪರಿವಾರ ಹಾಗೂ ಬಿಜೆಪಿ ಮುಖಂಡರು ಆತಂಕ ವ್ಯಕ್ತಪಡಿಸಿದ್ದರು. ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿರುವ ಅಂಕಿ ಅಂಶದ ಪ್ರಕಾರ ಮುಸ್ಲಿಂ ಸಮುದಾಯದವರ ಸಂಖ್ಯೆ ದೇಶದಲ್ಲಿ 2001 - 2011ರ ಅವಧಿಯಲ್ಲಿ ಶೇ. 14.2ಕ್ಕೆ ಏರಿದೆ. ಮೊದಲು ಈ ಪ್ರಮಾಣ ಶೇ. 13.4ರಷ್ಟಿತ್ತು.
ಇದು ಕೋಮುವಾದಿ ಪಟ್ಟ ಹೊತ್ತಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವರದಿಯಲ್ಲ. ಹಿಂದಿನ ಯುಪಿಎ ಸರ್ಕಾರವೇ ಕಲೆ ಹಾಕಿದ್ದ ಅಂಕಿ ಅಂಶ. ಆದರೆ, ಕಳೆದ ವರ್ಷವೇ ಬಿಡುಗಡೆಯಾಗಬೇಕಿತ್ತು. ಆದರೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ವರದಿ ಬಹಿರಂಗಕ್ಕೆ ತಡೆಯೊಡ್ಡಿತ್ತು. [ಮರುಮತಾಂತರವೇಕೆ ತಪ್ಪು?]
ವರದಿಯ ಬಿಡುಗಡೆಗೆ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಹಾಗೂ ಗಣತಿ ಆಯುಕ್ತರಾದ ಸಿ. ಚಂದ್ರಮೌಳಿ ಪುನಃ ಅನುಮತಿ ಕೋರಿದಾಗ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಒಪ್ಪಿಗೆ ಸೂಚಿಸಿದ್ದರು.

ಎಲ್ಲೆಲ್ಲಿ ಎಷ್ಟು ಪ್ರಮಾಣ ಹೆಚ್ಚಳ : ಮುಸ್ಲಿ ಸಮುದಾಯದ ಜನಸಂಖ್ಯೆ 2001 - 2011ರ ಅವಧಿಯಲ್ಲಿ ಶೇ. 24ರಷ್ಟು ಹೆಚ್ಚಾಗಿದೆ. ಆದರೆ, ಹಿಂದಿನ ದಶಕಕ್ಕೆ ಹೋಲಿಸಿದರೆ ಏರಿಕೆ ಪ್ರಮಾಣ ಕಡಿಮೆಯಾಗಿದೆ. 1991 - 2010ರ ಅವಧಿಯಲ್ಲಿ ಏರಿಕೆ ಪ್ರಮಾಣ ಶೇ. 29ರಷ್ಟಿತ್ತು. [ಮರುಮತಾಂತರಕ್ಕೂ ಕರ್ನಾಟಕಕ್ಕೂ ಲಿಂಕ್ ಇದೆ]
ಬಾಂಗ್ಲಾದೇಶಿ ಅಕ್ರಮ ವಲಸಿಗರಿಂದ ಜನಸಂಖ್ಯೆಯಲ್ಲಿ ಭಾರೀ ಹೆಚ್ಚಳ ಕಂಡಿರುವ ರಾಜ್ಯಗಳೆಂದರೆ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಜನಸಂಖ್ಯೆ ಭಾರೀ ಹೆಚ್ಚಳ ಕಂಡಿದೆ. ಅಸ್ಸಾಂನಲ್ಲಿ 2001ರಲ್ಲಿ ಶೇ. 30ರಷ್ಟಿತ್ತು. 2011ಕ್ಕೆ ಶೇ. 34ಕ್ಕೇರಿದೆ. ಪಶ್ಚಿಮ ಬಂಗಾಳದಲ್ಲಿ ಶೇ. 25.2ರಷ್ಟಿತ್ತು. 2011ಕ್ಕೆ ಶೇ. 27.1ಕ್ಕೇರಿದೆ.
ಉತ್ತರಾಖಂಡದಲ್ಲಿ ಶೇ.11.9 ರಿಂದ ಶೇ.13.9ಕ್ಕೇರಿದೆ. ಕೇರಳದಲ್ಲಿ ಶೇ.24.7ರಿಂದ ಶೇ.26.6ಕ್ಕೆ, ಗೋವಾದಲ್ಲಿ ಶೇ.6.8ರಿಂದ ಶೇ.8.4ಕ್ಕೆ, ಜಮ್ಮು ಕಾಶ್ಮೀರದಲ್ಲಿ ಶೆ.67ರಿಂದ ಶೇ.68.3ಕ್ಕೆ, ಹರ್ಯಾಣಾದಲ್ಲಿ ಶೇ.5.8ರಿಂದ ಶೇ.7ಕ್ಕೆ, ನವದೆಹಲಿಯಲ್ಲಿ ಶೇ.11.7 ರಿಂದ ಶೇ.12.9 ಕ್ಕೇರಿದೆ. [ಮದುವೆಗಾಗಿ ಇಸ್ಲಾಂಗೆ ಮತಾಂತರ ಅಸಿಂಧು]
ಇಲ್ಲಿ ಇಳಿಕೆಯಾಗಿದೆ : ದೇಶದೆಲ್ಲೆಡೆ ಮುಸ್ಲಿಮರ ಜನಸಂಖ್ಯೆ ಏರಿದ್ದರೆ, ಇಳಿಕೆ ಕಂಡಿರುವ ಏಕೈಕ ರಾಜ್ಯ ಮಣಿಪುರ. ಇಲ್ಲಿ ಶೇ. 0.4ರಷ್ಟು ಕಡಿಮೆಯಾಗಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications