ದಶಕದಲ್ಲಿ ಮುಸ್ಲಿಂ ಜನಸಂಖ್ಯೆ ಶೇ. 24ರಷ್ಟು ಏರಿಕೆ
ನವದೆಹಲಿ, ಜ. 23 : ದೇಶದಲ್ಲಿ ಮುಸ್ಲಿ ಸಮುದಾಯದ ಜನಸಂಖ್ಯೆ ತೀವ್ರವಾಗಿ ಏರುತ್ತಿದೆ ಎಂದು ಸಂಘ ಪರಿವಾರ ಹಾಗೂ ಬಿಜೆಪಿ ಮುಖಂಡರು ಆತಂಕ ವ್ಯಕ್ತಪಡಿಸಿದ್ದರು. ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿರುವ ಅಂಕಿ ಅಂಶದ ಪ್ರಕಾರ ಮುಸ್ಲಿಂ ಸಮುದಾಯದವರ ಸಂಖ್ಯೆ ದೇಶದಲ್ಲಿ 2001 - 2011ರ ಅವಧಿಯಲ್ಲಿ ಶೇ. 14.2ಕ್ಕೆ ಏರಿದೆ. ಮೊದಲು ಈ ಪ್ರಮಾಣ ಶೇ. 13.4ರಷ್ಟಿತ್ತು.
ಇದು ಕೋಮುವಾದಿ ಪಟ್ಟ ಹೊತ್ತಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವರದಿಯಲ್ಲ. ಹಿಂದಿನ ಯುಪಿಎ ಸರ್ಕಾರವೇ ಕಲೆ ಹಾಕಿದ್ದ ಅಂಕಿ ಅಂಶ. ಆದರೆ, ಕಳೆದ ವರ್ಷವೇ ಬಿಡುಗಡೆಯಾಗಬೇಕಿತ್ತು. ಆದರೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ವರದಿ ಬಹಿರಂಗಕ್ಕೆ ತಡೆಯೊಡ್ಡಿತ್ತು. [ಮರುಮತಾಂತರವೇಕೆ ತಪ್ಪು?]
ವರದಿಯ ಬಿಡುಗಡೆಗೆ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಹಾಗೂ ಗಣತಿ ಆಯುಕ್ತರಾದ ಸಿ. ಚಂದ್ರಮೌಳಿ ಪುನಃ ಅನುಮತಿ ಕೋರಿದಾಗ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಒಪ್ಪಿಗೆ ಸೂಚಿಸಿದ್ದರು.

ಎಲ್ಲೆಲ್ಲಿ ಎಷ್ಟು ಪ್ರಮಾಣ ಹೆಚ್ಚಳ : ಮುಸ್ಲಿ ಸಮುದಾಯದ ಜನಸಂಖ್ಯೆ 2001 - 2011ರ ಅವಧಿಯಲ್ಲಿ ಶೇ. 24ರಷ್ಟು ಹೆಚ್ಚಾಗಿದೆ. ಆದರೆ, ಹಿಂದಿನ ದಶಕಕ್ಕೆ ಹೋಲಿಸಿದರೆ ಏರಿಕೆ ಪ್ರಮಾಣ ಕಡಿಮೆಯಾಗಿದೆ. 1991 - 2010ರ ಅವಧಿಯಲ್ಲಿ ಏರಿಕೆ ಪ್ರಮಾಣ ಶೇ. 29ರಷ್ಟಿತ್ತು. [ಮರುಮತಾಂತರಕ್ಕೂ ಕರ್ನಾಟಕಕ್ಕೂ ಲಿಂಕ್ ಇದೆ]
ಬಾಂಗ್ಲಾದೇಶಿ ಅಕ್ರಮ ವಲಸಿಗರಿಂದ ಜನಸಂಖ್ಯೆಯಲ್ಲಿ ಭಾರೀ ಹೆಚ್ಚಳ ಕಂಡಿರುವ ರಾಜ್ಯಗಳೆಂದರೆ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಜನಸಂಖ್ಯೆ ಭಾರೀ ಹೆಚ್ಚಳ ಕಂಡಿದೆ. ಅಸ್ಸಾಂನಲ್ಲಿ 2001ರಲ್ಲಿ ಶೇ. 30ರಷ್ಟಿತ್ತು. 2011ಕ್ಕೆ ಶೇ. 34ಕ್ಕೇರಿದೆ. ಪಶ್ಚಿಮ ಬಂಗಾಳದಲ್ಲಿ ಶೇ. 25.2ರಷ್ಟಿತ್ತು. 2011ಕ್ಕೆ ಶೇ. 27.1ಕ್ಕೇರಿದೆ.
ಉತ್ತರಾಖಂಡದಲ್ಲಿ ಶೇ.11.9 ರಿಂದ ಶೇ.13.9ಕ್ಕೇರಿದೆ. ಕೇರಳದಲ್ಲಿ ಶೇ.24.7ರಿಂದ ಶೇ.26.6ಕ್ಕೆ, ಗೋವಾದಲ್ಲಿ ಶೇ.6.8ರಿಂದ ಶೇ.8.4ಕ್ಕೆ, ಜಮ್ಮು ಕಾಶ್ಮೀರದಲ್ಲಿ ಶೆ.67ರಿಂದ ಶೇ.68.3ಕ್ಕೆ, ಹರ್ಯಾಣಾದಲ್ಲಿ ಶೇ.5.8ರಿಂದ ಶೇ.7ಕ್ಕೆ, ನವದೆಹಲಿಯಲ್ಲಿ ಶೇ.11.7 ರಿಂದ ಶೇ.12.9 ಕ್ಕೇರಿದೆ. [ಮದುವೆಗಾಗಿ ಇಸ್ಲಾಂಗೆ ಮತಾಂತರ ಅಸಿಂಧು]
ಇಲ್ಲಿ ಇಳಿಕೆಯಾಗಿದೆ : ದೇಶದೆಲ್ಲೆಡೆ ಮುಸ್ಲಿಮರ ಜನಸಂಖ್ಯೆ ಏರಿದ್ದರೆ, ಇಳಿಕೆ ಕಂಡಿರುವ ಏಕೈಕ ರಾಜ್ಯ ಮಣಿಪುರ. ಇಲ್ಲಿ ಶೇ. 0.4ರಷ್ಟು ಕಡಿಮೆಯಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications