ಮೀಸೆ ಇಲ್ಲದೆ ಗಡ್ಡ ಬಿಟ್ಟ ಮುಸ್ಲಿಮರು ಮೂಲಭೂತವಾದಿಗಳು: ರಿಜ್ವಿ
ಲಖನೌ, ಜುಲೈ 8: ಮೀಸೆ ಬಿಡದೆ ಕೇವಲ ಗಡ್ಡ ಬೆಳೆಸಿಕೊಳ್ಳುವ ಮುಸ್ಲಿಮರೆಲ್ಲ ಮೂಲಭೂತವಾದಿಗಳು ಎಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿ ಅಧ್ಯಕ್ಷ ವಸೀಮ್ ರಿಜ್ವಿ ಹೇಳಿದ್ದಾರೆ.
ಗಡ್ಡ ಉಳಿಸಿಕೊಳ್ಳುವುದು ಸುನ್ನತ್. ಆದರೆ, ಮೀಸೆ ಇಲ್ಲದೆಯೇ ಗಡ್ಡ ಬಿಡುವುದು ಸುನ್ನತ್ಗೆ ವಿರುದ್ಧವಾದುದು. ಅಂತಹ ವ್ಯಕ್ತಿಗಳು ಭಯ ಹುಟ್ಟಿಸುವಂತೆ ಕಾಣಿಸುತ್ತಾರೆ. ಮೀಸೆ ಇಲ್ಲದೆ ಗಡ್ಡ ಮಾತ್ರ ಹೊಂದಿರುವ ಮುಸ್ಲಿಮರು ಮೂಲಭೂತವಾದಿಗಳು. ಅಂತಹ ವ್ಯಕ್ತಿಗಳು ಜಗತ್ತಿನಾದ್ಯಂತ ಭಯೋತ್ಪಾದನೆಯನ್ನು ಉತ್ತೇಜಿಸಲು ಸಾಧ್ಯ ಎಂದು ರಿಜ್ವಿ ಹೇಳಿಕೆ ನೀಡಿದ್ದಾರೆ.
ಇತರರ ವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸಿ ಫತ್ವಾ ಹೊರಡಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೇರೆಯವರ ಬದುಕಿನಲ್ಲಿ ಹಸ್ತಕ್ಷೇಪ ನಡೆಸಿ ಫತ್ವಾ ಹೊರಡಿಸುವ ಕೆಲವು ಮುಸ್ಲಿಮರಿದ್ದಾರೆ. ಇಸ್ಲಾಂಗೂ ಇದಕ್ಕೂ ಸಂಬಂಧವಿಲ್ಲ ಎಂದು ಅವರು ಮರೆತಿದ್ದಾರೆ.
ಈ ರೀತಿ ಫತ್ವಾ ಹೊರಡಿಸುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಏಕೆಂದರೆ ಭಾರತದ ಸಂವಿಧಾನಕ್ಕೆ ವಿರುದ್ಧವಾಗಿ ಮತ್ತು ತಮ್ಮದೇ ಕಾನೂನನ್ನು ರೂಪಿಸಲು ಯಾರಿಗೂ ಹಕ್ಕು ಇಲ್ಲ ಎಂದು ರಿಜ್ವಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿನ ಇಸ್ಲಾಮಿಕ್ ಸ್ಟೇಟ್ಸ್ನ ಭಯೋತ್ಪಾದನಾ ಚಟುವಟಿಕೆಗಳಿಂದ ಕೆಲವು ಮುಸ್ಲಿಮರು ಪ್ರಭಾವಿತರಾಗಿದ್ದಾರೆ. ಇದು ಒಳ್ಳೆಯದಲ್ಲ.
ಇದು ಭಾರತದಲ್ಲಿ ಹಿಂಸಾಚಾರಕ್ಕೆ ಎಡೆಮಾಡಿಕೊಡಬಹುದು. ಅಂತಹ ಮುಸ್ಲಿಮರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಿಜ್ವಿ ಅವರಿಗೆ ಉತ್ತರ ಪ್ರದೇಶ ಸರ್ಕಾರ ಇತ್ತೀಚೆಗೆ Y+ ಭದ್ರತೆ ಒದಗಿಸಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications