ಮೀಸೆ ಇಲ್ಲದೆ ಗಡ್ಡ ಬಿಟ್ಟ ಮುಸ್ಲಿಮರು ಮೂಲಭೂತವಾದಿಗಳು: ರಿಜ್ವಿ
ಲಖನೌ, ಜುಲೈ 8: ಮೀಸೆ ಬಿಡದೆ ಕೇವಲ ಗಡ್ಡ ಬೆಳೆಸಿಕೊಳ್ಳುವ ಮುಸ್ಲಿಮರೆಲ್ಲ ಮೂಲಭೂತವಾದಿಗಳು ಎಂದು ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿ ಅಧ್ಯಕ್ಷ ವಸೀಮ್ ರಿಜ್ವಿ ಹೇಳಿದ್ದಾರೆ.
ಗಡ್ಡ ಉಳಿಸಿಕೊಳ್ಳುವುದು ಸುನ್ನತ್. ಆದರೆ, ಮೀಸೆ ಇಲ್ಲದೆಯೇ ಗಡ್ಡ ಬಿಡುವುದು ಸುನ್ನತ್ಗೆ ವಿರುದ್ಧವಾದುದು. ಅಂತಹ ವ್ಯಕ್ತಿಗಳು ಭಯ ಹುಟ್ಟಿಸುವಂತೆ ಕಾಣಿಸುತ್ತಾರೆ. ಮೀಸೆ ಇಲ್ಲದೆ ಗಡ್ಡ ಮಾತ್ರ ಹೊಂದಿರುವ ಮುಸ್ಲಿಮರು ಮೂಲಭೂತವಾದಿಗಳು. ಅಂತಹ ವ್ಯಕ್ತಿಗಳು ಜಗತ್ತಿನಾದ್ಯಂತ ಭಯೋತ್ಪಾದನೆಯನ್ನು ಉತ್ತೇಜಿಸಲು ಸಾಧ್ಯ ಎಂದು ರಿಜ್ವಿ ಹೇಳಿಕೆ ನೀಡಿದ್ದಾರೆ.
ಇತರರ ವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸಿ ಫತ್ವಾ ಹೊರಡಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೇರೆಯವರ ಬದುಕಿನಲ್ಲಿ ಹಸ್ತಕ್ಷೇಪ ನಡೆಸಿ ಫತ್ವಾ ಹೊರಡಿಸುವ ಕೆಲವು ಮುಸ್ಲಿಮರಿದ್ದಾರೆ. ಇಸ್ಲಾಂಗೂ ಇದಕ್ಕೂ ಸಂಬಂಧವಿಲ್ಲ ಎಂದು ಅವರು ಮರೆತಿದ್ದಾರೆ.
ಈ ರೀತಿ ಫತ್ವಾ ಹೊರಡಿಸುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಏಕೆಂದರೆ ಭಾರತದ ಸಂವಿಧಾನಕ್ಕೆ ವಿರುದ್ಧವಾಗಿ ಮತ್ತು ತಮ್ಮದೇ ಕಾನೂನನ್ನು ರೂಪಿಸಲು ಯಾರಿಗೂ ಹಕ್ಕು ಇಲ್ಲ ಎಂದು ರಿಜ್ವಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿನ ಇಸ್ಲಾಮಿಕ್ ಸ್ಟೇಟ್ಸ್ನ ಭಯೋತ್ಪಾದನಾ ಚಟುವಟಿಕೆಗಳಿಂದ ಕೆಲವು ಮುಸ್ಲಿಮರು ಪ್ರಭಾವಿತರಾಗಿದ್ದಾರೆ. ಇದು ಒಳ್ಳೆಯದಲ್ಲ.
ಇದು ಭಾರತದಲ್ಲಿ ಹಿಂಸಾಚಾರಕ್ಕೆ ಎಡೆಮಾಡಿಕೊಡಬಹುದು. ಅಂತಹ ಮುಸ್ಲಿಮರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಿಜ್ವಿ ಅವರಿಗೆ ಉತ್ತರ ಪ್ರದೇಶ ಸರ್ಕಾರ ಇತ್ತೀಚೆಗೆ Y+ ಭದ್ರತೆ ಒದಗಿಸಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications