ಲಕ್ಷ್ಮೀಯನ್ನು ಪೂಜಿಸದ ಮುಸ್ಲಿಮರಲ್ಲಿ ಶ್ರೀಮಂತರಿಲ್ಲವೇ? ಬಿಜೆಪಿ ಶಾಸಕನ ಪ್ರಶ್ನೆ
ಪಾಟ್ನಾ, ಅ.20: ಲಕ್ಷ್ಮೀ ದೇವಿಯನ್ನು ಪೂಜಿಸುವುದರಿಂದಲೇ ನಮಗೆ ಸಂಪತ್ತು ಸಿಗುವಂತಿದ್ದರೆ ಮುಸ್ಲಿಮರಲ್ಲಿ ಲಕ್ಷಾಧೀಶರು, ಕೋಟ್ಯಧಿಪತಿಗಳು ಇರುತ್ತಿರಲಿಲ್ಲ ಎಂದು ಬಿಹಾರದ ಬಿಜೆಪಿ ಶಾಸಕ ಹೇಳಿದ್ದಾರೆ. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಅವರ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
ಭಾಗಲ್ಪುರ ಜಿಲ್ಲೆಯ ಪಿರ್ಪೈಂತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ಅವರು ಹಿಂದೂ ದೇವತೆಗಳ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ಹಿಂದೂ ದೇವತೆಗಳ ಮೇಲಿನ ನಂಬಿಕೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದು, ತಮ್ಮ ನಿಲುವನ್ನು ಸಾಬೀತುಪಡಿಸಲು ಸಾಕ್ಷಿಗಳೊಂದಿಗೆ ವಾದಿಸಿದ್ದಾರೆ.
ಅವರ ವಿಡಿಯೋ ವೈರಲ್ ಆದ ಬೆನ್ನಲ್ಲೆ ಭಾಗಲ್ಪುರದ ಶೆರ್ಮರಿ ಬಜಾರ್ನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರು ಶಾಸಕ ಲಲನ್ ಪಾಸ್ವಾನ್ ಅವರ ಪ್ರತಿಕೃತಿಯನ್ನು ಸುಟ್ಟು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕ ಲಲನ್ ಪಾಸ್ವಾನ್ ದೀಪಾವಳಿಯಂದು ನಡೆಸಲಾಗುವ ಲಕ್ಷ್ಮಿ ದೇವಿಯ ಆರಾಧನೆಯನ್ನು ಪ್ರಶ್ನಿಸಿದ್ದಾರೆ.

ಲಕ್ಷ್ಮೀಯನ್ನು ಪೂಜಿಸದ ಮುಸ್ಲಿಮರು ಶ್ರೀಮತಂರಲ್ಲವೇ?
"ಲಕ್ಷ್ಮೀ ದೇವಿಯನ್ನು ಪೂಜಿಸುವುದರಿಂದಲೇ ನಮಗೆ ಸಂಪತ್ತು ಸಿಗುತ್ತಿದ್ದರೆ ಮುಸ್ಲಿಮರಲ್ಲಿ ಲಕ್ಷಾಧೀಶರು, ಕೋಟ್ಯಧಿಪತಿಗಳು ಇರುತ್ತಿರಲಿಲ್ಲ, ಮುಸ್ಲಿಮರು ಲಕ್ಷ್ಮೀ ಯನ್ನು ಪೂಜಿಸುವುದಿಲ್ಲ, ಅವರು ಶ್ರೀಮಂತರಲ್ಲವೇ..? ಎಂದು ಪ್ರಶ್ನಿಸಿದ್ದಾರೆ.
"ಮುಸ್ಲಿಮರು ಸರಸ್ವತಿ ದೇವಿಯನ್ನು ಪೂಜಿಸುವುದಿಲ್ಲ, ಮುಸ್ಲಿಮರಲ್ಲಿ ವಿದ್ವಾಂಸರು ಇಲ್ಲವೇ..? ಅವರು IAS ಅಥವಾ IPS ಆಗುವುದಿಲ್ಲವೇ?" ಎಂದು ಶಾಸಕರು ಪ್ರಶ್ನಿಸಿದ್ದಾರೆ.
'ಆತ್ಮ ಮತ್ತು ಪರಮಾತ್ಮ' ಪರಿಕಲ್ಪನೆಯು ಕೇವಲ ಜನರ ನಂಬಿಕೆಯಾಗಿದೆ ಎಂದು ಬಿಜೆಪಿ ನಾಯಕ ವಾದಿಸಿದ್ದಾರೆ.

ನಂಬಿದರೆ ದೇವತೆ, ಇಲ್ಲದಿದ್ದರೆ ಅದು ಕೇವಲ ಕಲ್ಲಿನ ವಿಗ್ರಹ!
"ನೀವು ನಂಬಿದರೆ ಅದು ದೇವತೆ, ಇಲ್ಲದಿದ್ದರೆ ಅದು ಕೇವಲ ಕಲ್ಲಿನ ವಿಗ್ರಹ, ನಾವು ದೇವರು ಮತ್ತು ದೇವತೆಗಳನ್ನು ನಂಬುತ್ತೇವೋ ಅಥವಾ ಇಲ್ಲವೋ ಅದು ನಮಗೆ ಬಿಟ್ಟದ್ದು. ನಾವು ಅಂತಹ ತಾರ್ಕಿಕ ತೀರ್ಮಾನ ತಲುಪಲು ವೈಜ್ಞಾನಿಕ ತಳಹದಿಯ ಮೇಲೆ ಯೋಚಿಸಬೇಕು" ಎಂದು ಹೇಳಿದ್ದಾರೆ.
ಮುಂದುವರೆದು ಮಾತನಾಡಿರುವ ಅವರು, "ನೀವು ನಂಬುವುದನ್ನು ನಿಲ್ಲಿಸಿದರೆ, ನಿಮ್ಮ ಬೌದ್ಧಿಕ ಸಾಮರ್ಥ್ಯವು ಹೆಚ್ಚಾಗುತ್ತದೆ" ಎಂದು ಕರೆ ನೀಡಿದ್ದಾರೆ.

ಇಂತಹವುಗಳನ್ನು ನಂಬಲು ಬಿಟ್ಟ ದಿನ ಎಲ್ಲವೂ ಕೊನೆಯಾಗುತ್ತದೆ!
"ಭಜರಂಗಬಲಿ ಶಕ್ತಿಯುಳ್ಳ ದೇವರು. ನಮಗೆ ಶಕ್ತಿಯನ್ನು ನೀಡುತ್ತದೆ ಎಂದು ನಂಬಲಾಗಿದೆ. ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಭಜರಂಗಬಲಿಯನ್ನು ಪೂಜಿಸುವುದಿಲ್ಲ. ಅವರು ಶಕ್ತಿಶಾಲಿಗಳಲ್ಲವೇ..?" ಎಂದು ಪ್ರಶ್ನೆ ಮಾಡಿದ್ದಾರೆ.
"ನೀವು ಇಂತಹ ನಂಬಿಕೆಗಳನ್ನು ನಂಬುವುದನ್ನು ನಿಲ್ಲಿಸಿದ ದಿನ, ಇವೆಲ್ಲವೂ ಕೊನೆಗೊಳ್ಳುತ್ತವೆ" ಎಂದು ಶಾಸಕ ಲಲನ್ ಪಾಸ್ವಾನ್ ಹೇಳಿದ್ದಾರೆ.
ಲಲನ್ ಪಾಸ್ವಾನ್ ಅವರು ರಾಷ್ಟ್ರೀಯ ಜನತಾ ದಳ (RJD) ನಾಯಕ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ನಡೆಸಿರುವ ಸಂಭಾಷಣೆ ಸೋರಿಕೆಯಾಗಿದೆ. ಆ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗಿ, ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಇಂತಹ ಹೇಳಿಕೆಗಳನ್ನು ನೀಡುವುದನ್ನು ಲಾಲನ್ ಪಾಸ್ವಾನ್ ನಿಲ್ಲಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಅಜಿತ್ ಶರ್ಮಾ ಹೇಳಿದ್ದಾರೆ. "ನಾವೆಲ್ಲರೂ ಭಗವಾನ್ ರಾಮ, ಬಜರಂಗ ಬಲಿ, ಲಕ್ಷ್ಮೀ ದೇವಿ, ಕಾಳಿ ಮಾತೆಯನ್ನು ನಂಬುತ್ತೇವೆ. ನಾವು ಹಿಂದೂಗಳು. ಬಿಜೆಪಿಯವರು ದೇವಾಲಯಗಳ ಹೆಸರಿನಲ್ಲಿ ಚುನಾವಣೆ ಎದುರಿಸುತ್ತಾರೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ನಾವು ದೇವರ ಬಲದ ಮೇಲೆ ಮಾತ್ರ ಮುಂದುವರಿಯುತ್ತೇವೆ. ಈ ದೀಪಾವಳಿಯಂದು ಎಲ್ಲರೂ ಲಕ್ಷ್ಮೀ ದೇವಿಯನ್ನು ತೀವ್ರವಾಗಿ ಪೂಜಿಸುತ್ತಾರೆ" ಎಂದಿದ್ದಾರೆ.
ಮತ್ತೊಂದೆಡೆ, 'ಲಲನ್ ಪಾಸ್ವಾನ್ ನಮ್ಮ ಆರಾಧ್ಯ ದೈವದ ಬಗ್ಗೆ ಇಂತಹ ಟೀಕೆಗಳನ್ನು ಮಾಡಬಾರದು. ಇದು ಸಂಪೂರ್ಣವಾಗಿ ತಪ್ಪು' ಎಂದು ಜೆಡಿಯು ಶಾಸಕ ಗೋಪಾಲ್ ಮಂಡಲ್ ಹೇಳಿದ್ದಾರೆ.

ನಾವೆಲ್ಲರೂ ರಾಮ, ಲಕ್ಷ್ಮೀ, ಕಾಳಿಯನ್ನು ನಂಬುತ್ತೇವೆ
ಇಂತಹ ಹೇಳಿಕೆಗಳನ್ನು ನೀಡುವುದನ್ನು ಲಲನ್ ಪಾಸ್ವಾನ್ ನಿಲ್ಲಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಅಜಿತ್ ಶರ್ಮಾ ಹೇಳಿದ್ದಾರೆ. "ನಾವೆಲ್ಲರೂ ಭಗವಾನ್ ರಾಮ, ಭಜರಂಗ ಬಲಿ, ಲಕ್ಷ್ಮೀ ದೇವಿ, ಕಾಳಿ ಮಾತೆಯನ್ನು ನಂಬುತ್ತೇವೆ. ನಾವು ಹಿಂದೂಗಳು. ಬಿಜೆಪಿಯವರು ದೇವಾಲಯಗಳ ಹೆಸರಿನಲ್ಲಿ ಚುನಾವಣೆ ಎದುರಿಸುತ್ತಾರೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ನಾವು ದೇವರ ಬಲದ ಮೇಲೆ ಮಾತ್ರ ಮುಂದುವರಿಯುತ್ತೇವೆ. ಈ ದೀಪಾವಳಿಯಂದು ಎಲ್ಲರೂ ಲಕ್ಷ್ಮಿ ದೇವಿಯನ್ನು ತೀವ್ರವಾಗಿ ಪೂಜಿಸುತ್ತಾರೆ" ಎಂದಿದ್ದಾರೆ.
ಮತ್ತೊಂದೆಡೆ, 'ಲಲನ್ ಪಾಸ್ವಾನ್ ನಮ್ಮ ಆರಾಧ್ಯ ದೈವದ ಬಗ್ಗೆ ಇಂತಹ ಟೀಕೆಗಳನ್ನು ಮಾಡಬಾರದು. ಇದು ಸಂಪೂರ್ಣವಾಗಿ ತಪ್ಪು' ಎಂದು ಜೆಡಿಯು ಶಾಸಕ ಗೋಪಾಲ್ ಮಂಡಲ್ ಹೇಳಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications