ಭಾರತೀಯ ನಾಗರಿಕರಿಗೆ ಸಿಯಾಚಿನ್ ಪ್ರವೇಶ; ಗೊತ್ತಿರಬೇಕಾದ 5 ಸಂಗತಿ
ನವದೆಹಲಿ, ಸೆಪ್ಟೆಂಬರ್ 25: ಸಾಮಾನ್ಯ ನಾಗರಿಕರಿಗೂ ಸಿಯಾಚಿನ್ ನೀರ್ಗಲ್ಲು ಹೇಗಿರುತ್ತದೆ ಎಂಬ ಅನುಭವ ದೊರೆಯಲಿ ಎಂಬ ಕಾರಣಕ್ಕೆ ಭಾರತೀಯ ಸೇನೆ ಪ್ರಸ್ತಾವವೊಂದನ್ನು ಮುಂದಿಟ್ಟಿದೆ. ಸೈನಿಕರು ಸಿಯಾಚಿನ್ ನಲ್ಲಿ ಹೇಗೆ ಕಾರ್ಯ ನಿರ್ವಹಿಸುತ್ತಾರೆ ಎಂಬುದನ್ನು ಕಣ್ಣಾರೆ ನೋಡುವುದಕ್ಕೆ ಅವಕಾಶ ಒದಗಿಸಬೇಕು ಎಂಬುದು ಆ ಪ್ರಸ್ತಾವ.
ವಿಶ್ವದ ಅತ್ಯಂತ ಎತ್ತರದ ಕದನ ಭೂಮಿ ಸಿಯಾಚಿನ್ ಬಗ್ಗೆ ತುಂಬ ಆಸಕ್ತಿಕರವಾದ ಐದು ಸಂಗತಿಗಳು ಇಲ್ಲಿವೆ:
* ವ್ಯೂಹಾತ್ಮಕ ಕಾರಣಕ್ಕೆ ಸಿಯಾಚಿನ್ ಬಹಳ ಮುಖ್ಯವಾದದ್ದು. ಎಲ್ಲಿಯ ತನಕ ಇದರ ಮೇಲೆ ಭಾರತದ ಹತೋಟಿ ಇರುತ್ತದೋ ಅಲ್ಲಿಯವರೆಗೆ ಪಾಕಿಸ್ತಾನಿ ಸೇನೆಗೆ ಚೀನಿಯರ ಜತೆ ಸಂಪರ್ಕ ಸಾಧ್ಯವಿಲ್ಲ. ಆ ಮೂಲಕ ಲಡಾಖ್ ಗೆ ಯಾವುದೇ ಆತಂಕ ಎದುರಾಗುವುದಿಲ್ಲ. ಚೀನಾ ನಿಯಂತ್ರಣದಲ್ಲಿ ಇರುವ ಶಾಕ್ಸಗಂ ಕಣಿವೆ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಬಾಲ್ಟಿಸ್ತಾನ್ ಮಧ್ಯೆ ಈ ಸ್ಥಳವು ತಡೆಯಂತೆ ಇದೆ.
* ಒಂದು ದಿನ ಭಾರತವು ಸಿಯಾಚಿನ್ ನ ಭದ್ರತೆಗೆ ಅಂತಲೇ ಐದರಿಂದ ಏಳು ಕೋಟಿ ವ್ಯಯಿಸುತ್ತದೆ. ಸಿಯಾಚಿನ್ ನಲ್ಲಿ ಮೂರು ಸಾವಿರ ಮಂದಿ ಸೈನಿಕರನ್ನು ನಿಯೋಜಿಸಿದೆ. ಅಂದಹಾಗೆ ಸಿಯಾಚಿನ್ ನಲ್ಲಿ ಕೆಲವೊಮ್ಮೆ ಮೈನಸ್ ಅರವತ್ತು ಡಿಗ್ರಿ ಸೆಲ್ಷಿಯಸ್ ತನಕ ತಾಪಮಾನ ಕುಸಿಯುತ್ತದೆ.

* ಮೂವತ್ತೈದು ವರ್ಷಗಳ ಹಿಂದೆ ಸಿಯಾಚಿನ್ ಅನ್ನು ಭಾರತ ನಿಯಂತ್ರಣಕ್ಕೆ ತೆಗೆದುಕೊಂಡ ಮೇಲೆ ಸಾವಿರಕ್ಕೂ ಹೆಚ್ಚು ಯೋಧರು ಇಲ್ಲಿ ಸಾವನ್ನಪ್ಪಿದ್ದಾರೆ. ಸಂಖ್ಯಾ ದೃಷ್ಟಿಯಿಂದ ಹೇಳಬೇಕು ಅಂದರೆ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರಿಗಿಂತ ದುಪ್ಪಟ್ಟು ಸೈನಿಕರು ಸಿಯಾಚಿನ್ ನಲ್ಲಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ಕಡೆಯಿಂದ ಗುಂಡಿನ ದಾಳಿಯಿಂದಲೇ ಇನ್ನೂರಾ ಇಪ್ಪತ್ತು ಮಂದಿ ಮೃತಪಟ್ಟಿದ್ದರೆ, ಇಲ್ಲಿನ ಪ್ರತಿಕೂಲ ಹವಾಮಾನದ ಪರಿಣಾಮವಾಗಿ ಹಲವರು ಸಾವನ್ನಪ್ಪಿದ್ದಾರೆ.
* ಸಮುದ್ರ ಮಟ್ಟಕ್ಕಿಂತ ಇಪ್ಪತ್ತೊಂದು ಸಾವಿರ ಅಡಿಗೂ ಮೇಲೆ ಇರುವ ಈ ನೀರ್ಗಲ್ಲಿನಲ್ಲಿ ಸಾಮಾನ್ಯವಾಗಿ ಸೈನಿಕರಿಗೆ ಮೂರು ತಿಂಗಳು ನಿಯೋಜನೆ ಮಾಡಲಾಗುತ್ತದೆ. ಸಿಯಾಚಿನ್ ನ ಕೆಲವು ಸ್ಥಳಗಳನ್ನು ತಲುಪುವುದಕ್ಕೆ ಅಂದರೆ ಯೋಧರು ನೂರಾ ಇಪ್ಪತ್ತೆಂಟು ಕಿಲೋಮೀಟರ್ ದೂರ ಕ್ರಮಿಸಲು ಇಪ್ಪತ್ತೆಂಟು ದಿನಗಳ ಕಾಲ ಟ್ರೆಕ್ಕಿಂಗ್ ಮಾಡಿಕೊಂಡು ಹೋಗಬೇಕಾಗುತ್ತದೆ.
* ಸದ್ಯಕ್ಕೆ ಸಿಯಾಚಿನ್ ನಲ್ಲಿ ಭಾರತದ್ದೇ ಮೇಲುಗೈ. ಪಾಕಿಸ್ತಾನದ ನೆಲೆಗಳು ಮೂರು ಸಾವಿರ ಅಡಿ ಕೆಳಗೆ ಇವೆ. ಸಿಯಾಚಿನ್ ನಲ್ಲಿನ ಸೇನೆ ನಿಯೋಜನೆ ತೆಗೆಯಬೇಕು ಎಂದು ಭಾರತ ಮತ್ತು ಪಾಕಿಸ್ತಾನ ಮಧ್ಯೆ ಹಲವು ಸುತ್ತಿನ ಮಾತುಕತೆ ಆಗಿದೆ. ದ್ವಿಪಕ್ಷೀಯ ಮಾತುಕತೆಗಳು ವಿಫಲವಾಗಿವೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications